AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುರಿ ಜಗನ್ನಾಥ ಯಾತ್ರೆ: ಶಾಖದ ತೀವ್ರತೆ, ಜನಸಂದಣಿಯಿಂದಾಗಿ 750 ಮಂದಿ ಅಸ್ವಸ್ಥ, 12 ಜನರ ಸ್ಥಿತಿ ಗಂಭೀರ

ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಾರಿ ಜನಸಂದಣಿ ಮತ್ತು ಬಿಸಿಲಿನಿಂದಾಗಿ 750ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ. 12 ಮಂದಿ ತೀವ್ರ ಅಸ್ವಸ್ಥರಾಗಿದ್ದು, ಐಸಿಯುಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆಂಬ್ಯುಲೆನ್ಸ್ ಕಾರಿಡಾರ್ ಮತ್ತು ಸ್ವಯಂಸೇವಕರ ಸಹಾಯದಿಂದ ವೈದ್ಯಕೀಯ ಸಹಾಯ ಒದಗಿಸಲಾಗಿದೆ. ಬಿಸಿಲಿನ ಬೇಗೆ ಮತ್ತು ಆರ್ದ್ರತೆಯೇ ಘಟನೆಗೆ ಪ್ರಮುಖ ಕಾರಣ ಎಂದು ಹೇಳಲಾಗಿದೆ.

ಪುರಿ ಜಗನ್ನಾಥ ಯಾತ್ರೆ: ಶಾಖದ ತೀವ್ರತೆ, ಜನಸಂದಣಿಯಿಂದಾಗಿ 750 ಮಂದಿ ಅಸ್ವಸ್ಥ, 12 ಜನರ ಸ್ಥಿತಿ ಗಂಭೀರ
ಪುರಿ ಜಗನ್ನಥ ರಥಯಾತ್ರೆImage Credit source: PTI
ಗಣಪತಿ ಶರ್ಮಾ
|

Updated on: Jun 28, 2025 | 2:29 PM

Share

ಪುರಿ, ಜೂನ್ 28: ಪುರಿ ಜಗನ್ನಥ ರಥಯಾತ್ರೆಯ (Puri Jagannath Rath Yatra) ಸಮಯದಲ್ಲಿ ಶಾಖದ ತೀವ್ರತೆ, ಜನಸಂದಣಿಯ ಒತ್ತಡ ಮತ್ತು ಆಯಾಸದಿಂದಾಗಿ ಅಸ್ವಸ್ಥರಾದವರ ಸಂಖ್ಯೆ 750 ಕ್ಕೆ ಏರಿಕೆಯಾಗಿದೆ. ಅಸ್ವಸ್ಥರಾಗಿರುವ ಭಕ್ತರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ 12 ಜನರಿಗೆ ತೀವ್ರ ನಿಗಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. 230 ಕ್ಕೂ ಹೆಚ್ಚು ಭಕ್ತರನ್ನು ಸಾಂಕ್ರಾಮಿಕ ರೋಗಗಳ ಆಸ್ಪತ್ರೆಗೆ (IDH) ದಾಖಲಿಸಲಾಗಿದ್ದು, ಸುಮಾರು 520 ಮಂದಿಯನ್ನು ಜಿಲ್ಲಾ ಕೇಂದ್ರ ಆಸ್ಪತ್ರೆಗೆ (DHH) ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಸ್ವಸ್ಥರಾದವರ ಪೈಕಿ ಹೆಚ್ಚಿನವರನ್ನು ಪ್ರಥಮ ಚಿಕಿತ್ಸೆ ನೀಡಿ ನಂತರ ಬಿಡುಗಡೆ ಮಾಡಲಾಗಿದೆ. ತೀವ್ರವಾಗಿ ಅಸ್ವಸ್ಥರಾದ ಒಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಕಟಕ್‌ನ ಹಾಸ್ಪಿಟಲ್‌ಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ
Image
8 ದಿನ, 5 ದೇಶಗಳಿಗೆ ಪ್ರವಾಸ: ಮೋದಿ ವಿದೇಶ ಪ್ರವಾಸದ ವೇಳಾಪಟ್ಟಿ ಇಲ್ಲಿದೆ
Image
ವಿಮಾನ ಅಪಘಾತದ ನಂತರ ಕಚೇರಿಯಲ್ಲಿ ಪಾರ್ಟಿ ಮಾಡಿದ ಏರ್ ಇಂಡಿಯಾ ಸಿಬ್ಬಂದಿ
Image
ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ; 500ಕ್ಕೂ ಹೆಚ್ಚು ಭಕ್ತರಿಗೆ ಗಾಯ
Image
ಪುರಿ ಜಗನ್ನಾಥ ದೇವಾಲಯದ ರಥಯಾತ್ರೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ಭಾಗಿ

ಅಸ್ವಸ್ಥರಾದವರಿಗೆ ತ್ವರಿತ ವೈದ್ಯಕೀಯ ನೆರವು ನಿಡುವುದಕ್ಕಾಗಿ, ಪುರಿಯ ಗ್ರ್ಯಾಂಡ್ ರಸ್ತೆಯ ಉದ್ದಕ್ಕೂ ಆಂಬ್ಯುಲೆನ್ಸ್ ಕಾರಿಡಾರ್ ಸ್ಥಾಪಿಸಲಾಗಿದೆ. ಜನಸಂದಣಿಯ ಮೂಲಕ ಆಂಬ್ಯುಲೆನ್ಸ್ ಚಲನೆಯನ್ನು ಸುಗಮಗೊಳಿಸಲು ಸುಮಾರು 600 ಸ್ವಯಂಸೇವಕರು ಮಾನವ ಸರಪಳಿಯನ್ನು ರಚಿಸಿ ಕಾರ್ಯನಿರ್ವಹಿಸಿದ್ದಾರೆ.

ಅಸ್ವಸ್ಥರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿರುವ ಸ್ವಯಂಸೇವಕರು: ವಿಡಿಯೋ ನೋಡಿ

ರಥಯಾತ್ರೆಯ ವಿಶೇಷ ಆರೋಗ್ಯ ವ್ಯವಸ್ಥೆಗಳ ಭಾಗವಾಗಿ, ಹೊರಗಿನ ಜಿಲ್ಲೆಗಳಿಂದ ಹೆಚ್ಚುವರಿಯಾಗಿ 378 ವೈದ್ಯರನ್ನು ಪುರಿಗೆ ಕರೆಸಿಕೊಂಡು ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಇದಲ್ಲದೆ, ರೋಗಿಗಳಿಗೆ ಸ್ಥಳಾವಕಾಶ ಕಲ್ಪಿಸಲು 265 ಹೆಚ್ಚುವರಿ ಹಾಸಿಗೆಗಳ ವ್ಯವಸ್ಥೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಥಯಾತ್ರೆಯ ಸಮಯದಲ್ಲಿ ಜನದಟ್ಟಣೆಯಿಂದಾಗಿ ಹಲವಾರು ಜನರಿಗೆ ಸಣ್ಣಪುಟ್ಟ ಗಾಯಗಳು, ವಾಂತಿ ಮತ್ತು ಮೂರ್ಛೆ ತಪ್ಪುವಿಕೆ ಘಟಿಸಿದೆ ಎಂದು ಪುರಿ ಜಿಲ್ಲಾ ಮುಖ್ಯ ವೈದ್ಯಾಧಿಕಾರಿ ಡಾ. ಕಿಶೋರ್ ಸತಪತಿ ತಿಳಿಸಿದ್ದಾರೆ. ಭಕ್ತರು ಅನಾರೋಗ್ಯಕ್ಕೆ ಒಳಗಾಗಲು ಬಿಸಿಲಿನ ಬೇಗೆ ಮತ್ತು ಹೆಚ್ಚಿನ ಆರ್ದ್ರತೆಯೇ ಕಾರಣ ಎಂದು ಒಡಿಶಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮುಖೇಶ್ ಮಹಾಲಿಂಗ್ ತಿಳಿಸಿದ್ದಾರೆ. ಪುರಿಯ ಜಿಲ್ಲಾ ಕೇಂದ್ರ ಆಸ್ಪತ್ರೆಯಲ್ಲಿ ಸುಮಾರು 70 ಜನರು ಚಿಕಿತ್ಸೆ ಪಡೆಯುತ್ತಿದ್ದು, 9 ಜನರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಪುರಿ ಜಗನ್ನಾಥ ದೇವಾಲಯದ ರಥಯಾತ್ರೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ಭಾಗಿ

ಪುರಿ ಜಗನ್ನಾಥ ಕ್ಷೇತ್ರದ ಮೂರು ಭವ್ಯ ರಥಗಳಲ್ಲಿ ಒಂದಾದ ತಾಳಧ್ವಜ ರಥವನ್ನು ಎಳೆಯುವ ಸಂದರ್ಭದಲ್ಲಿ ಜನದಟ್ಟಣೆಯಿಂದಾಗಿ ಕಾಲ್ತುಳಿತದಂತಹ ಪರಿಸ್ಥಿತಿ ಉಂಟಾಗಿ, 500ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾಗಿ ಶುಕ್ರವಾರ ವರದಿಯಾಗಿತ್ತು. ಆದರೆ, ಇದೀಗ ಅಸ್ವಸ್ಥರಾದವರ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, ಘಟನೆಗೆ ನಿಖರ ಕಾರಣ ಏನು ಎಂಬುದು ಬಹಿರಂಗವಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಆಹಾರ ನೀಡಿದ ಗ್ರಾಮಸ್ಥರು!
ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಆಹಾರ ನೀಡಿದ ಗ್ರಾಮಸ್ಥರು!
ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಶಾಸಕ ಇಕ್ಬಾಲ್ ಹುಸೇನ್
ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಶಾಸಕ ಇಕ್ಬಾಲ್ ಹುಸೇನ್
ಅಮೆರಿಕ-ಇರಾನ್ ಶಾಂತಿ ಒಪ್ಪಂದ, ಪ್ರಮುಖ ಷರತ್ತುಗಳೇನು?
ಅಮೆರಿಕ-ಇರಾನ್ ಶಾಂತಿ ಒಪ್ಪಂದ, ಪ್ರಮುಖ ಷರತ್ತುಗಳೇನು?
ಸೋಮವಾರ ಅಮಾವಾಸ್ಯೆ: ಮಾದಪ್ಪನ ಬೆಟ್ಟದಲ್ಲಿ ಭಕ್ತಸಾಗರ
ಸೋಮವಾರ ಅಮಾವಾಸ್ಯೆ: ಮಾದಪ್ಪನ ಬೆಟ್ಟದಲ್ಲಿ ಭಕ್ತಸಾಗರ
ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಹೆಚ್​​ಡಿಕೆ
ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಹೆಚ್​​ಡಿಕೆ