AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jagannath Rath Yatra 2021: ಈ ಬಾರಿಯೂ ಭಕ್ತರಿಲ್ಲದೆ ನಡೆಯುತ್ತಿದೆ ಪುರಿ ಜಗನ್ನಾಥ ರಥಯಾತ್ರೆ; ನಿನ್ನೆಯಿಂದಲೇ ಜಾರಿಯಾಗಿದೆ ಕರ್ಫ್ಯೂ

ಪುರಿ ಜಗನ್ನಾಥ ಯಾತ್ರೆಯನ್ನು ಅದ್ದೂರಿಯಾಗಿ ಮಾಡಬೇಕು, ಕೇವಲ ಪುರಿ ಜಗನ್ನಾಥ ದೇವಾಲಯದಲ್ಲಷ್ಟೇ ಅಲ್ಲದೆ, ಓಡಿಶಾದಾದ್ಯಂತ ರಥಯಾತ್ರೆ ಸಂಭ್ರಮ ಆಚರಿಸಲು ಅವಕಾಶ ಕೊಡಬೇಕು ಎಂದು ಅನೇಕರು ಸುಪ್ರೀಂಕೋರ್ಟ್​ಗೆ ಮನವಿ ಸಲ್ಲಿಸಿದ್ದರು.

Jagannath Rath Yatra 2021: ಈ ಬಾರಿಯೂ ಭಕ್ತರಿಲ್ಲದೆ ನಡೆಯುತ್ತಿದೆ ಪುರಿ ಜಗನ್ನಾಥ ರಥಯಾತ್ರೆ; ನಿನ್ನೆಯಿಂದಲೇ ಜಾರಿಯಾಗಿದೆ ಕರ್ಫ್ಯೂ
ಪುರಿ ಜಗನ್ನಾಥ ದೇಗುಲ
TV9 Web
| Updated By: Lakshmi Hegde|

Updated on: Jul 12, 2021 | 9:44 AM

Share

ಸುಪ್ರಸಿದ್ಧ ಪುರಿ ಜಗನ್ನಾಥ ದೇವಾಲಯದ ರಥೋತ್ಸವದಲ್ಲಿ ಈ ಬಾರಿಯೂ ಭಕ್ತರಿಗೆ ಅವಕಾಶ ಇಲ್ಲ. ಇಂದು ಜಗನ್ನಾಥ ರಥಯಾತ್ರೆ ನಡೆಯಲಿದ್ದು, ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಭಕ್ತರು ಪಾಲ್ಗೊಳ್ಳುವಂತಿಲ್ಲ ಎಂದು ಜಗನ್ನಾಥ ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ. ಕೊರೊನಾ ಸಾಂಕ್ರಾಮಿಕ ನಿಯಂತ್ರಣ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು. ಕೊವಿಡ್​ 19 ನೆಗೆಟಿವ್​ ರಿಪೋರ್ಟ್​ ಹೊಂದಿರುವ ಕೆಲವೇ ಮಂದಿಗೆ ರಥ ಎಳೆಯಲು ಅವಕಾಶ ನೀಡಲಾಗುವುದು ಎಂದು ಆಡಳಿತಾಧಿಕಾರಿ ಅಜಯ್​ ಜೇನಾ ತಿಳಿಸಿದ್ದಾರೆ.

ಕಳೆದ ವರ್ಷದಂತೆ ಈ ಬಾರಿಯೂ ಜು.12ರಂದು ಜಗನ್ನಾಥ ರಥಯಾತ್ರೆ ಭಕ್ತರ ಪಾಲ್ಗೊಳ್ಳುವಿಕೆ ಇಲ್ಲದೆ ನಡೆಯಲಿದೆ. ಸುಪ್ರೀಂಕೋರ್ಟ್​ ಆದೇಶ ಮತ್ತು ಒಡಿಶಾ ರಾಜ್ಯ ಸರ್ಕಾರದ ಎಸ್​ಒಪಿ ಅನ್ವಯ ರಥಯಾತ್ರೆಯಲ್ಲಿ ಭಕ್ತರಿಗೆ ಅವಕಾಶ ನೀಡುತ್ತಿಲ್ಲ. ಇನ್ನು ಎರಡೂ ಡೋಸ್​ ಲಸಿಕೆ ಪಡೆದು, ಆರ್​-ಪಿಸಿಆರ್​ ನೆಗೆಟಿವ್​ ರಿಪೋರ್ಟ್ ಹೊಂದಿರುವವರಿಗೆ ರಥ ಎಳೆಯಲು ಅವಕಾಶ ನೀಡಲಾಗುವುದು ಎಂದು ಅಜಯ್ ಜೇನಾ ಮಾಹಿತಿ ನೀಡಿದ್ದಾರೆ.

ರಥಯಾತ್ರೆಯಲ್ಲಿ ಸುಮಾರು 3000 ಪರಿಚಾರಕರು ಪಾಲ್ಗೊಳ್ಳಬಹುದು. ಆದರೆ ಆರ್​ಟಿ-ಪಿಸಿಆರ್​ ಟೆಸ್ಟ್ ನೆಗೆಟಿವ್​ ರಿಪೋರ್ಟ್​ ಹೊಂದಿರಬೇಕು ಮತ್ತು ಎರಡೂ ಡೋಸ್​ ಲಸಿಕೆ ಪಡೆದಿರಬೇಕು. ಇವರೇ ರಥವನ್ನೂ ಎಳೆಯುತ್ತಾರೆ. ಹಾಗೇ, ದೇಗುಲ ಮಂಡಳಿಗೆ ಸಂಬಂಧಪಟ್ಟಂತ 1000 ಅಧಿಕಾರಿಗಳು, ವಿವಿಧ ಸ್ಥಾನದಲ್ಲಿ ಇರುವವರು ರಥಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ನಿಟ್ಟಿನಲ್ಲಿ ಜುಲೈ 8ರಿಂದ ಪುರಿಯ ನಾಲ್ಕು ವಿವಿಧ ಭಾಗಗಳಲ್ಲಿ ಕೊವಿಡ್​ 19 ತಪಾಸಣೆ ಮಾಡಲಾಗುತ್ತಿತ್ತು ಎಂದೂ ಅವರು ತಿಳಿಸಿದ್ದಾರೆ.

ಪುರಿ ಜಗನ್ನಾಥ ಯಾತ್ರೆಯನ್ನು ಅದ್ದೂರಿಯಾಗಿ ಮಾಡಬೇಕು, ಕೇವಲ ಪುರಿ ಜಗನ್ನಾಥ ದೇವಾಲಯದಲ್ಲಷ್ಟೇ ಅಲ್ಲದೆ, ಓಡಿಶಾದಾದ್ಯಂತ ರಥಯಾತ್ರೆ ಸಂಭ್ರಮ ಆಚರಿಸಲು ಅವಕಾಶ ಕೊಡಬೇಕು ಎಂದು ಅನೇಕರು ಸುಪ್ರೀಂಕೋರ್ಟ್​ಗೆ ಮನವಿ ಸಲ್ಲಿಸಿದ್ದರು. ಆದರೆ ಅದೆಲ್ಲ ಅರ್ಜಿಗಳನ್ನೂ ಸರ್ವೋಚ್ಛ ನ್ಯಾಯಾಲಯ ತಿರಸ್ಕರಿಸಿದೆ. ಪುರಿಯಲ್ಲಿ ಸದ್ಯ 48 ಗಂಟೆಗಳ ಕರ್ಫ್ಯೂ ಹೇರಲಾಗಿದೆ. ಭಾನುವಾರದಿಂದಲೇ ಈ ಕರ್ಫ್ಯೂ ಜಾರಿಯಾಗಿದೆ. ನಾಳೆ (ಜು.13) ಸಂಜೆ 8ಗಂಟೆಯವರೆಗೂ ಕರ್ಫ್ಯೂ ಮುಂದುವರಿಯಲಿದೆ. ರಥಯಾತ್ರೆ ಸಂದರ್ಭದಲ್ಲಿ ಹೆಚ್ಚಿನ ಜನರು ಸೇರಬಾರದು ಎಂಬ ಕಾರಣಕ್ಕೆ ಈ ಕಠಿಣ ನಿಯಮಗಳನ್ನು ತೆಗೆದುಕೊಂಡಿದ್ದಾಗಿ ಜಿಲ್ಲಾಡಳಿತ ತಿಳಿಸಿದೆ.

ಇದನ್ನೂ ಓದಿ: Petrol Price Today: ಇಂದು ಇಳಿಕೆ ಕಂಡ ಡೀಸೆಲ್​ ದರ, ಪೆಟ್ರೋಲ್​ ಬೆಲೆಯಲ್ಲಿ ಹೆಚ್ಚಳ! ದರ ವಿವರ ಮಾಹಿತಿ ಇಲ್ಲಿದೆ 

Puri to hold devotee less Jagannath Rath Yatra today

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ