AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pushkar Singh Dhami ಉತ್ತರಾಖಂಡ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಪುಷ್ಕರ್ ಸಿಂಗ್ ಧಾಮಿ

ಪುಷ್ಕರ್ ಸಿಂಗ್ ಧಾಮಿ ಖತಿಮಾ ವಿಧಾನಸಭಾ ಕ್ಷೇತ್ರದಲ್ಲಿ ಸ್ವಂತ ಸ್ಥಾನವನ್ನು ಕಳೆದುಕೊಂಡಿದ್ದರೂ, ಈ ನಿರ್ಧಾರವು 46 ವರ್ಷದ ನಾಯಕನಿಗೆ ಸಿಕ್ಕಿದ ಮನ್ನಣೆಯಾಗಿದೆ ಎಂದು ಪರಿಗಣಿಸಲಾಗಿದೆ.

Pushkar Singh Dhami ಉತ್ತರಾಖಂಡ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಪುಷ್ಕರ್ ಸಿಂಗ್ ಧಾಮಿ
ಪುಷ್ಕರ್ ಸಿಂಗ್ ಧಾಮಿ
TV9 Web
| Edited By: |

Updated on:Mar 21, 2022 | 6:13 PM

Share

ಡೆಹ್ರಾಡೂನ್‌:  ಪುಷ್ಕರ್ ಸಿಂಗ್ ಧಾಮಿ (Pushkar Singh Dhami) ಉತ್ತರಾಖಂಡದ (Uttarakhand) ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ. ಸೋಮವಾರ ನಡೆದ ಬಿಜೆಪಿ (BJP) ಶಾಸಕಾಂಗ ಪಕ್ಷದ ಸಭೆಯ ನಂತರ ಈ ನಿರ್ಧಾರವನ್ನು ಪ್ರಕಟಿಸಲಾಗಿದೆ. ರಾಜ್ಯ ಬಿಜೆಪಿಯ ಕೇಂದ್ರ ವೀಕ್ಷಕರು, ಕೇಂದ್ರ ಸಚಿವ ರಾಜನಾಥ್ ಸಿಂಗ್ ಮತ್ತು ಹಿರಿಯ ನಾಯಕಿ ಮೀನಾಕ್ಷಿ ಲೇಖಿ ಡೆಹ್ರಾಡೂನ್‌ನಲ್ಲಿರುವ ರಾಜ್ಯ ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ್ದರು.ಧಾಮಿ ಖತಿಮಾ ವಿಧಾನಸಭಾ ಕ್ಷೇತ್ರದಲ್ಲಿ ಸ್ವಂತ ಸ್ಥಾನವನ್ನು ಕಳೆದುಕೊಂಡಿದ್ದರೂ, ಈ ನಿರ್ಧಾರವು 46 ವರ್ಷದ ನಾಯಕನಿಗೆ ಸಿಕ್ಕಿದ ಮನ್ನಣೆಯಾಗಿದೆ ಎಂದು ಪರಿಗಣಿಸಲಾಗಿದೆ. ಉತ್ತರಾಖಂಡದಲ್ಲಿ ಧಾಮಿ ಬಿಜೆಪಿ ಪ್ರಚಾರವನ್ನು ಮುನ್ನಡೆಸಿದ್ದು, ಅದು ಪಕ್ಷವನ್ನು ಎರಡನೇ ಬಾರಿಗೆ ಅಧಿಕಾರಕ್ಕೇರುವಂತೆ ಮಾಡಿತ್ತು. ಧಾಮಿ ಅವರು ರಾಜ್ಯಪಾಲರನ್ನು ಭೇಟಿ ಮಾಡಿ ರಾಜ್ಯದಲ್ಲಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲು ಹೊರಟಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಾಜಿ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್, ಕೇಂದ್ರ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಮತ್ತು ಹಿರಿಯ ನಾಯಕ ಸತ್ಪಾಲ್ ಮಹಾರಾಜ್ ಅವರನ್ನು ಒಳಗೊಂಡ ರೇಸ್‌ನಲ್ಲಿ ಧಾಮಿ ಮುಂಚೂಣಿಯಲ್ಲಿದ್ದರು. ಆದಾಗ್ಯೂ, ಧಾಮಿ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷದ ಸೈದ್ಧಾಂತಿಕ ಮಾರ್ಗದರ್ಶಕ ರಾಷ್ಟ್ರೀಯ ಸ್ವಯಂಸೇವಕ ಸಂಘದ ಬಲವಾದ ಬೆಂಬಲವನ್ನು ಹೊಂದಿದ್ದರು ಎಂದು ಮೂಲಗಳು ತಿಳಿಸಿವೆ. ನಿನ್ನೆ ನಡೆದ ಸಭೆಯಲ್ಲಿ ಈ ನಿರ್ಧಾರಕ್ಕೆ ಪ್ರಧಾನಿ ಮೋದಿಯವರಿಂದ ಅನುಮೋದನೆಯ ಮುದ್ರೆ ಬಿದ್ದಿತ್ತು ಎಂದು ಎನ್​​ಡಿ​​ಟಿವಿ ವರದಿ ಮಾಡಿದೆ.

ಯಾರು ಪುಷ್ಕರ್ ಸಿಂಗ್ ಧಾಮಿ?

ಪುಷ್ಕರ್ ಸಿಂಗ್ ಧಾಮಿ ಪಿತೋರಘರ್ ಜಿಲ್ಲೆಯ ತುಂಡಿ ಎಂಬ ಹಳ್ಳಿಯಲ್ಲಿ 16 ಸಪ್ಟೆಂಬರ್, 1975 ರಲ್ಲಿ ಜನಿಸಿದರು. ಅಲ್ಲೇ ಅವರು ಬಾಲ್ಯದ ಶಿಕ್ಷಣ ಪಡೆದುಕೊಂಡರು. ಬಳಿಕ ಅವರ ಕುಟುಂಬ ನಾಗ್ಲ ತರಾಯ್ ಭಾಬರ್ ಎಂಬಲ್ಲಿಗೆ ಸ್ಥಳಾಂತರವಾಯಿತು. ಧಾಮಿ ಲಕ್ನೋ ಯುನಿವರ್ಸಿಟಿಯಿಂದ ಪದವಿ ಪಡೆದರು. ಬಳಿಕ ಅದೇ ವಿಶ್ವವಿದ್ಯಾಲಯದಿಂದ ಎಲ್​ಎಲ್​ಬಿ ಪೂರ್ಣಗೊಳಿಸಿದರು.

ಧಾಮಿ ಅವರ ತಂದೆ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ್ದರು. ಅವರು ಸುಬೇದಾರ್ ಆಗಿ ಕಾರ್ಯನಿರ್ವಹಿಸಿದ್ದರು. ಪುಷ್ಕರ್ ಸಿಂಗ್ ಧಾಮಿ ಉತ್ತರಾಖಂಡ್​ನ ಮುಖ್ಯಮಂತ್ರಿ ಅಧಿಕಾರಕ್ಕೆ ಏರುವ ಮೊದಲು ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರ ಸಲಹೆಗಾರರಾಗಿಯೂ ಕೆಲಸ ನಿರ್ವಹಿಸಿದ್ದರು.

ಎಬಿವಿಪಿಯಿಂದ ಉತ್ತರಾಖಂಡ್​ನ ಮುಖ್ಯಮಂತ್ರಿವರೆಗೆ

ಪುಷ್ಕರ್ ತಮ್ಮ1990 ರಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್​ಗೆ ಸೇರ್ಪಡೆಗೊಂಡರು. ಆ ಮೂಲಕ ತಮ್ಮ ಸಾಮಾಜಿಕ ಹಾಗೂ ರಾಜಕೀಯ ಜೀವನವನ್ನು ಆರಂಭಿಸಿದರು. ಅವರು 2008ರ ವರೆಗೆ ಭಾರತೀಯ ಜನತಾ ಯುವ ಮೋರ್ಚಾದ ಅಧ್ಯಕ್ಷರೂ ಆಗಿದ್ದರು. ಆ ವೇಳೆ, ರಾಜ್ಯದ ಕೈಗಾರಿಕೆಗಳಲ್ಲಿ ಶೇಕಡಾ 70 ರಷ್ಟು ಉದ್ಯೋಗವನ್ನು ಸ್ಥಳೀಯ ಯುವಕರಿಗೆ ನೀಡಬೇಕು ಎಂದು ಜಾರಿ ಆಗುವಂತೆ ಕಾರ್ಯ ಸಾಧಿಸಿದ ಹೆಗ್ಗಳಿಕೆ ಧಾಮಿ ಅವರ ಪಾಲಿನದು.

ನಂತರ, ಜುಲೈ 3, 2021 ರಂದು ಉತ್ತರಾಖಂಡ್​ನ ಮುಖ್ಯಮಂತ್ರಿಯಾಗಿ ಪುಷ್ಕರ್ ಸಿಂಗ್ ಧಾಮಿ ಅಧಿಕಾರ ಸ್ವೀಕಾರ ಮಾಡಿದರು. ತೀರಥ್ ಸಿಂಗ್ ರಾವತ್ ಬಳಿಕ ತಮ್ಮ 45ನೇ ವರ್ಷ ವಯಸ್ಸಿನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಏರುವ ಮೂಲಕ ಪುಷ್ಕರ್ ಸಿಂಗ್ ಧಾಮಿ ಉತ್ತರಾಖಂಡ್​ನ ಅತಿ ಕಿರಿಯ ಮುಖ್ಯಮಂತ್ರಿ ಎಂಬ ಕೀರ್ತಿಗೂ ಬಾಜನರಾಗಿದ್ದರು.

ಇದನ್ನೂ ಓದಿ: N Biren Singh ಮಣಿಪುರದ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ ಎನ್ ಬಿರೇನ್ ಸಿಂಗ್

Published On - 5:44 pm, Mon, 21 March 22

ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​