AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದೇಶಕ್ಕೆ ಅವರ ಅಗತ್ಯವಿದೆ’: ತನ್ನೆಲ್ಲ ಆಸ್ತಿಯನ್ನು ರಾಹುಲ್ ಗಾಂಧಿ ಹೆಸರಿಗೆ ಬರೆದುಕೊಟ್ಟ 78ರ ಹರೆಯದ ಮಹಿಳೆ

Pushpa Munjial ರಾಹುಲ್ ಗಾಂಧಿಯವರ ಆಲೋಚನೆಗಳಿಂದ ನಾನು ತುಂಬಾ ಪ್ರಭಾವಿತಳಾಗಿದ್ದೇನೆ ಮತ್ತು ಅದಕ್ಕಾಗಿಯೇ ತನ್ನ ಆಸ್ತಿಯನ್ನು ಅವರಿಗೆ ನೀಡುತ್ತಿದ್ದೇನೆ ಎಂದಿದ್ದಾರೆ ಪುಷ್ಪಾ.

‘ದೇಶಕ್ಕೆ ಅವರ ಅಗತ್ಯವಿದೆ’: ತನ್ನೆಲ್ಲ ಆಸ್ತಿಯನ್ನು ರಾಹುಲ್ ಗಾಂಧಿ ಹೆಸರಿಗೆ ಬರೆದುಕೊಟ್ಟ 78ರ ಹರೆಯದ ಮಹಿಳೆ
ಪುಷ್ಪಾ ಮುಂಜಿಯಾಲ್
TV9 Web
| Edited By: |

Updated on: Apr 04, 2022 | 11:02 PM

Share

ದೆಹಲಿ: ಉತ್ತರಾಖಂಡ್‌ (Uttarakhand) ಡೆಹ್ರಾಡೂನ್‌ನ 78 ವರ್ಷದ ಮಹಿಳೆಯೊಬ್ಬರು ₹50 ಲಕ್ಷ ಮೌಲ್ಯದ ಆಸ್ತಿ ಮತ್ತು 10 ತೊಲ ಚಿನ್ನ ಸೇರಿದಂತೆ ತಮ್ಮ ಎಲ್ಲಾ ಆಸ್ತಿಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಹೆಸರಿಗೆ ಬರೆದುಕೊಟ್ಟಿದ್ದಾರೆ. ಪುಷ್ಪಾ ಮುಂಜಿಯಾಲ್ ಅವರು ಡೆಹ್ರಾಡೂನ್ ನ್ಯಾಯಾಲಯದಲ್ಲಿ ವಿಲ್ ಸಲ್ಲಿಸಿದ್ದು, ರಾಹುಲ್ ಗಾಂಧಿಗೆ ತಮ್ಮ ಆಸ್ತಿಯನ್ನು ಬರೆದುಕೊಟ್ಟಿದ್ದಾರೆ. ರಾಹುಲ್ ಗಾಂಧಿ ಮತ್ತು ಅವರ ವಿಚಾರಗಳು ದೇಶಕ್ಕೆ ಅಗತ್ಯ ಎಂದು ಪುಷ್ಪಾ ಮುಂಜಿಯಾಲ್(Pushpa Munjial) ಹೇಳಿದ್ದಾರೆ. ರಾಹುಲ್ ಗಾಂಧಿಯವರ ಆಲೋಚನೆಗಳಿಂದ ನಾನು ತುಂಬಾ ಪ್ರಭಾವಿತಳಾಗಿದ್ದೇನೆ ಮತ್ತು ಅದಕ್ಕಾಗಿಯೇ ತನ್ನ ಆಸ್ತಿಯನ್ನು ಅವರಿಗೆ ನೀಡುತ್ತಿದ್ದೇನೆ ಎಂದಿದ್ದಾರೆ ಪುಷ್ಪಾ. ಮಾಜಿ ರಾಜ್ಯಾಧ್ಯಕ್ಷ ಪ್ರೀತಮ್ ಸಿಂಗ್ ಅವರ ನಿವಾಸದಲ್ಲಿ ಪುಷ್ಪಾ ಮುಂಜಿಯಲ್ ಅವರು ರಾಹುಲ್ ಗಾಂಧಿಗೆ ತಮ್ಮ ಆಸ್ತಿಯನ್ನು ವಿಲ್ ಮಾಡಿದ್ದಾರೆ ಎಂದು ಕಾಂಗ್ರೆಸ್ ಮಹಾನಗರ ಅಧ್ಯಕ್ಷ ಲಾಲಚಂದ್ ಶರ್ಮಾ ಹೇಳಿದ್ದಾರೆ.

ಪುಷ್ಪಾ ಮುಂಜಿಯಾಲ್ ಜಿ ಅವರು ತಮ್ಮ ಸಂಪೂರ್ಣ ಆಸ್ತಿಯನ್ನು ನಮ್ಮ ನಾಯಕರಾಹುಲ್ ಗಾಂಧಿಜಿಯವರ ಹೆಸರಿಗೆ ದಾನ ಮಾಡಿದ್ದಾರೆ. ಇದಕ್ಕಾಗಿ ಅವರು ಡೆಹ್ರಾಡೂನ್ ನ್ಯಾಯಾಲಯದಲ್ಲಿ ಸಾಕ್ಷ್ಯವನ್ನು ಸಹ ಸಲ್ಲಿಸಿದ್ದಾರೆ. ಈ ವಿಶ್ವಾಸಕ್ಕಾಗಿ ತಾಯಿಗೆ ತುಂಬಾ ಧನ್ಯವಾದಗಳು ಎಂದು ಬಿಹಾರ್ ಕಾಂಗ್ರೆಸ್ ಸೇವಾದಳ ಟ್ವೀಟ್ ಮಾಡಿದೆ.

“ಈ ದೇಶದ ಏಕತೆ ಮತ್ತು ಸಮಗ್ರತೆಗಾಗಿ ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ್ದಾರೆ. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ದೇಶ ಸೇವೆಗೆ ತಮ್ಮನ್ನು ಸಮರ್ಪಿಸಿಕೊಂಡಿದ್ದಾರೆ. ಇದರಿಂದ ಆಕೆ  ತುಂಬಾ ಪ್ರಭಾವಿತರಾಗಿದ್ದಾರೆ  ಎಂದು  ಲಾಲಚಂದ್ ಶರ್ಮಾ ಹೇಳಿದರು.

ಇದನ್ನೂ ಓದಿ: ನನಗೆ ಸಿಟ್ಟು ಬರುವುದಿಲ್ಲ, ನನ್ನ ಗಟ್ಟಿ ದನಿ ಮ್ಯಾನುಫ್ಯಾಕ್ಚರಿಂಗ್ ಡಿಫೆಕ್ಟ್: ಅಮಿತ್ ಶಾ

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!