Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದೇಶಕ್ಕೆ ಅವರ ಅಗತ್ಯವಿದೆ’: ತನ್ನೆಲ್ಲ ಆಸ್ತಿಯನ್ನು ರಾಹುಲ್ ಗಾಂಧಿ ಹೆಸರಿಗೆ ಬರೆದುಕೊಟ್ಟ 78ರ ಹರೆಯದ ಮಹಿಳೆ

Pushpa Munjial ರಾಹುಲ್ ಗಾಂಧಿಯವರ ಆಲೋಚನೆಗಳಿಂದ ನಾನು ತುಂಬಾ ಪ್ರಭಾವಿತಳಾಗಿದ್ದೇನೆ ಮತ್ತು ಅದಕ್ಕಾಗಿಯೇ ತನ್ನ ಆಸ್ತಿಯನ್ನು ಅವರಿಗೆ ನೀಡುತ್ತಿದ್ದೇನೆ ಎಂದಿದ್ದಾರೆ ಪುಷ್ಪಾ.

‘ದೇಶಕ್ಕೆ ಅವರ ಅಗತ್ಯವಿದೆ’: ತನ್ನೆಲ್ಲ ಆಸ್ತಿಯನ್ನು ರಾಹುಲ್ ಗಾಂಧಿ ಹೆಸರಿಗೆ ಬರೆದುಕೊಟ್ಟ 78ರ ಹರೆಯದ ಮಹಿಳೆ
ಪುಷ್ಪಾ ಮುಂಜಿಯಾಲ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Apr 04, 2022 | 11:02 PM

ದೆಹಲಿ: ಉತ್ತರಾಖಂಡ್‌ (Uttarakhand) ಡೆಹ್ರಾಡೂನ್‌ನ 78 ವರ್ಷದ ಮಹಿಳೆಯೊಬ್ಬರು ₹50 ಲಕ್ಷ ಮೌಲ್ಯದ ಆಸ್ತಿ ಮತ್ತು 10 ತೊಲ ಚಿನ್ನ ಸೇರಿದಂತೆ ತಮ್ಮ ಎಲ್ಲಾ ಆಸ್ತಿಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಹೆಸರಿಗೆ ಬರೆದುಕೊಟ್ಟಿದ್ದಾರೆ. ಪುಷ್ಪಾ ಮುಂಜಿಯಾಲ್ ಅವರು ಡೆಹ್ರಾಡೂನ್ ನ್ಯಾಯಾಲಯದಲ್ಲಿ ವಿಲ್ ಸಲ್ಲಿಸಿದ್ದು, ರಾಹುಲ್ ಗಾಂಧಿಗೆ ತಮ್ಮ ಆಸ್ತಿಯನ್ನು ಬರೆದುಕೊಟ್ಟಿದ್ದಾರೆ. ರಾಹುಲ್ ಗಾಂಧಿ ಮತ್ತು ಅವರ ವಿಚಾರಗಳು ದೇಶಕ್ಕೆ ಅಗತ್ಯ ಎಂದು ಪುಷ್ಪಾ ಮುಂಜಿಯಾಲ್(Pushpa Munjial) ಹೇಳಿದ್ದಾರೆ. ರಾಹುಲ್ ಗಾಂಧಿಯವರ ಆಲೋಚನೆಗಳಿಂದ ನಾನು ತುಂಬಾ ಪ್ರಭಾವಿತಳಾಗಿದ್ದೇನೆ ಮತ್ತು ಅದಕ್ಕಾಗಿಯೇ ತನ್ನ ಆಸ್ತಿಯನ್ನು ಅವರಿಗೆ ನೀಡುತ್ತಿದ್ದೇನೆ ಎಂದಿದ್ದಾರೆ ಪುಷ್ಪಾ. ಮಾಜಿ ರಾಜ್ಯಾಧ್ಯಕ್ಷ ಪ್ರೀತಮ್ ಸಿಂಗ್ ಅವರ ನಿವಾಸದಲ್ಲಿ ಪುಷ್ಪಾ ಮುಂಜಿಯಲ್ ಅವರು ರಾಹುಲ್ ಗಾಂಧಿಗೆ ತಮ್ಮ ಆಸ್ತಿಯನ್ನು ವಿಲ್ ಮಾಡಿದ್ದಾರೆ ಎಂದು ಕಾಂಗ್ರೆಸ್ ಮಹಾನಗರ ಅಧ್ಯಕ್ಷ ಲಾಲಚಂದ್ ಶರ್ಮಾ ಹೇಳಿದ್ದಾರೆ.

ಪುಷ್ಪಾ ಮುಂಜಿಯಾಲ್ ಜಿ ಅವರು ತಮ್ಮ ಸಂಪೂರ್ಣ ಆಸ್ತಿಯನ್ನು ನಮ್ಮ ನಾಯಕರಾಹುಲ್ ಗಾಂಧಿಜಿಯವರ ಹೆಸರಿಗೆ ದಾನ ಮಾಡಿದ್ದಾರೆ. ಇದಕ್ಕಾಗಿ ಅವರು ಡೆಹ್ರಾಡೂನ್ ನ್ಯಾಯಾಲಯದಲ್ಲಿ ಸಾಕ್ಷ್ಯವನ್ನು ಸಹ ಸಲ್ಲಿಸಿದ್ದಾರೆ. ಈ ವಿಶ್ವಾಸಕ್ಕಾಗಿ ತಾಯಿಗೆ ತುಂಬಾ ಧನ್ಯವಾದಗಳು ಎಂದು ಬಿಹಾರ್ ಕಾಂಗ್ರೆಸ್ ಸೇವಾದಳ ಟ್ವೀಟ್ ಮಾಡಿದೆ.

“ಈ ದೇಶದ ಏಕತೆ ಮತ್ತು ಸಮಗ್ರತೆಗಾಗಿ ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ್ದಾರೆ. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ದೇಶ ಸೇವೆಗೆ ತಮ್ಮನ್ನು ಸಮರ್ಪಿಸಿಕೊಂಡಿದ್ದಾರೆ. ಇದರಿಂದ ಆಕೆ  ತುಂಬಾ ಪ್ರಭಾವಿತರಾಗಿದ್ದಾರೆ  ಎಂದು  ಲಾಲಚಂದ್ ಶರ್ಮಾ ಹೇಳಿದರು.

ಇದನ್ನೂ ಓದಿ: ನನಗೆ ಸಿಟ್ಟು ಬರುವುದಿಲ್ಲ, ನನ್ನ ಗಟ್ಟಿ ದನಿ ಮ್ಯಾನುಫ್ಯಾಕ್ಚರಿಂಗ್ ಡಿಫೆಕ್ಟ್: ಅಮಿತ್ ಶಾ

ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
ಜಾರಕಿಹೊಳಿ-ಕುಮಾರಸ್ವಾಮಿ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ರವಿ
ಜಾರಕಿಹೊಳಿ-ಕುಮಾರಸ್ವಾಮಿ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ರವಿ
ಇದು ಸಂಭ್ರಮಿಸುವ ಟೈಮಲ್ಲ, ಯತ್ನಾಳ್ ಕೊರತೆ ನೀಗಿಸುವೆಡೆ ಯೋಚಿಸಬೇಕು: ಸಂಸದ
ಇದು ಸಂಭ್ರಮಿಸುವ ಟೈಮಲ್ಲ, ಯತ್ನಾಳ್ ಕೊರತೆ ನೀಗಿಸುವೆಡೆ ಯೋಚಿಸಬೇಕು: ಸಂಸದ
ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಸೋಮಶೇಖರ್
ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಸೋಮಶೇಖರ್
ಸಿಎಂ ಆಗಲು ಕುಮಾರಸ್ವಾಮಿ ಬೆಂಬಲ ಕೇಳಿರಬಹುದು ಸತೀಶ್: ಜಿಟಿಡಿ
ಸಿಎಂ ಆಗಲು ಕುಮಾರಸ್ವಾಮಿ ಬೆಂಬಲ ಕೇಳಿರಬಹುದು ಸತೀಶ್: ಜಿಟಿಡಿ
ಏರ್ ಕಂಪ್ರೆಸರ್ ಬ್ರೇಕ್​ಗಳು ಏರ್ ಲೀಕಾಗುತ್ತಿದ್ದರೆ ಬ್ರೇಕ್ ಹತ್ತಲ್ಲ?
ಏರ್ ಕಂಪ್ರೆಸರ್ ಬ್ರೇಕ್​ಗಳು ಏರ್ ಲೀಕಾಗುತ್ತಿದ್ದರೆ ಬ್ರೇಕ್ ಹತ್ತಲ್ಲ?
ಕೊಲೆ ಆರೋಪಿಗೆ ಸರ್ಕಾರಿ ಕಾರ್ಯಕ್ರಮದಲ್ಲಿ ರಾಜಾತಿಥ್ಯ
ಕೊಲೆ ಆರೋಪಿಗೆ ಸರ್ಕಾರಿ ಕಾರ್ಯಕ್ರಮದಲ್ಲಿ ರಾಜಾತಿಥ್ಯ
ತೆಲಂಗಾಣದಲ್ಲಿ ನಿರ್ಮಾಣ ಹಂತದ ಆರು ಅಂತಸ್ತಿನ ಕಟ್ಟಡ ಕುಸಿತ
ತೆಲಂಗಾಣದಲ್ಲಿ ನಿರ್ಮಾಣ ಹಂತದ ಆರು ಅಂತಸ್ತಿನ ಕಟ್ಟಡ ಕುಸಿತ
Daily Devotional: ಪೂಜೆ ಮಾಡುವಾಗ ದೇವರ ಮನೆಯಲ್ಲಿ ಹೂ ಬಿದ್ರೆ ಏನರ್ಥ?
Daily Devotional: ಪೂಜೆ ಮಾಡುವಾಗ ದೇವರ ಮನೆಯಲ್ಲಿ ಹೂ ಬಿದ್ರೆ ಏನರ್ಥ?