AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ; ಆ ಒಂದು ಸುಳ್ಳು ನಂಬಿ ರೈಲಿನಿಂದ ಹಾರಿ 11 ಜನರ ದೇಹ ಛಿದ್ರ

Maharashtra Train Accident: ಲಕ್ನೋದಿಂದ ಮುಂಬೈಗೆ ತೆರಳುತ್ತಿದ್ದ ಪುಷ್ಪಕ ಎಕ್ಸ್​ಪ್ರೆಸ್​ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂಬ ಸುದ್ದಿ ಹರಡಿತು. ಇದರಿಂದ ಆತಂಕಗೊಂಡ ಪ್ರಯಾಣಿಕರು ತಮ್ಮ ಪ್ರಾಣ ಉಳಿಸಿಕೊಳ್ಳಲು ರೈಲಿನಿಂದ ಕೆಳಗೆ ಜಿಗಿದಿದ್ದಾರೆ. ಇದೇ ವೇಳೆ ಪಕ್ಕದ ಹಳಿಯ ಮೇಲೆ ಬರುತ್ತಿದ್ದ ಕರ್ನಾಟಕ ಎಕ್ಸ್​ಪ್ರೆಸ್​ ರೈಲಿನ ಚಕ್ರದಡಿ ಸಿಲುಕಿ 11 ಜನರ ದಏಹಗಳು ಛಿದ್ರವಾಗಿದೆ.

ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ; ಆ ಒಂದು ಸುಳ್ಳು ನಂಬಿ ರೈಲಿನಿಂದ ಹಾರಿ 11 ಜನರ ದೇಹ ಛಿದ್ರ
Pushpak Express
ಸುಷ್ಮಾ ಚಕ್ರೆ
|

Updated on:Jan 22, 2025 | 8:05 PM

Share

ಮುಂಬೈ: ಮಹಾರಾಷ್ಟ್ರದಲ್ಲಿ ರೈಲಿನಡಿ ಸಿಲುಕಿ 11 ಜನರ ದುರಂತವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಹಾರಾಷ್ಟ್ರದ ಜಲಗಾಂವ್​​ನ ಪರಾಂಡ ನಿಲ್ದಾಣದಲ್ಲಿ ಘಟನೆ ನಡೆದಿದೆ. ಲಕ್ನೋದಿಂದ ಮುಂಬೈಗೆ ತೆರಳುತ್ತಿದ್ದ ಪುಷ್ಪಕ್​ ಎಕ್ಸ್​ಪ್ರೆಸ್​ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡ ವದಂತಿ ಹರಡಿತ್ತು. ಇದರಿಂದ ಹೆದರಿದ ಪ್ರಯಾಣಿಕರು ಚಲಿಸುತ್ತಿದ್ದ ರೈಲಿನಿಂದ ಜಿಗಿದಿದ್ದರು. ಪಕ್ಕದ ಹಳಿ ಮೇಲೆ ನಿಂತಾಗ ಮತ್ತೊಂದು ರೈಲು ಡಿಕ್ಕಿಯಾಗಿ ದುರಂತ ಸಂಭವಿಸಿದೆ. ಮತ್ತೊಂದು ಹಳಿಯಲ್ಲಿ ಬರುತ್ತಿದ್ದ ಕರ್ನಾಟಕ ಎಕ್ಸ್​ಪ್ರೆಸ್​ ರೈಲು ಡಿಕ್ಕಿಯಾಗಿ 11 ಜನ ಸಾವನ್ನಪ್ಪಿದ್ದಾರೆ.

ಬೆಂಕಿ ಕಾಣಿಸಿಕೊಂಡಿದ ಎಂಬ ಸುದ್ದಿ ಹರಡುತ್ತಿದ್ದಂತೆ ಪುಷ್ಪಕ್ ಎಕ್ಸ್​ಪ್ರೆಸ್​ನಲ್ಲಿದ್ದ ಕೆಲವು ಪ್ರಯಾಣಿಕರು ರೈಲಿನ ಚೈನ್​ ಎಳೆದು ರೈಲು ನಿಲ್ಲಿಸಿ ಪಕ್ಕದ ಹಳಿಗೆ ಜಿಗಿದಿದ್ದಾರೆ. ಈ ವೇಳೆ ಮತ್ತೊಂದು ಹಳಿಯಲ್ಲಿ ಬರುತ್ತಿದ್ದ ಕರ್ನಾಟಕ ಎಕ್ಸ್​ಪ್ರೆಸ್ ರೈಲು ಡಿಕ್ಕಿಯಾಗಿದೆ. ಜಲಗಾಂವ್‌ನ ಪಚೋರಾ ರೈಲು ನಿಲ್ದಾಣದಲ್ಲಿ ಪುಷ್ಪಕ್ ಎಕ್ಸ್‌ಪ್ರೆಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂಬ ವದಂತಿ ಹರಡಿ ಗೊಂದಲ ಸೃಷ್ಟಿಯಾಯಿತು. ಇದರಿಂದ ಚಲಿಸುತ್ತಿದ್ದ ರೈಲಿನಿಂದ ಪ್ರಯಾಣಿಕರು ಹೊರಗೆ ಹಾರಿದರು, ಆಗ ಪಕ್ಕದ ಹಳಿಯಲ್ಲಿ ಕರ್ನಾಟಕ ಎಕ್ಸ್‌ಪ್ರೆಸ್ ಡಿಕ್ಕಿ ಹೊಡೆದಿದೆ.

ಇದನ್ನೂ ಓದಿ: ಯಲ್ಲಾಪುರದ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ಮೋದಿ, ಅಮಿತ್ ಶಾ ಸಂತಾಪ; ಕೇಂದ್ರದಿಂದ 2 ಲಕ್ಷ ರೂ. ಪರಿಹಾರ ಘೋಷಣೆ

ಬೆಂಕಿ ಹರಡಿದೆ ಎಂಬ ಸುಳ್ಳು ಸುದ್ದಿಯನ್ನು ನಂಬಿ 30-40 ಜನ ರೈಲಿನಿಂದ ಕೆಳಗೆ ಜಿಗಿದಿದ್ದರು. ಕೆಲವರು ದೂರ ಓಡಿಹೋದರೆ ಇನ್ನು ಕೆಲವರು ಪಕ್ಕದ ಹಳಿ ಮೇಲೆ ನಿಂತಿದ್ದರು. ಈ ವೇಳೆ ವೇಗವಾಗಿ ಬಂದ ರೈಲು ಹರಿದು ಅವರು ಮೃತಪಟ್ಟಿದ್ದಾರೆ. ಆ ಪ್ರದೇಶದಲ್ಲಿ ಹಳಿಯ ಕೆಲಸ ನಡೆಯುತ್ತಿರುವ ಕಾರಣ ರೈಲಿಗೆ ಎಚ್ಚರಿಕೆಯ ಆದೇಶ ನೀಡಲಾಗಿತ್ತು. ಹೀಗಾಗಿ, ಬ್ರೇಕ್‌ಗಳನ್ನು ಹಾಕುತ್ತಿದ್ದಂತೆ, ರೈಲಿನ ಚಕ್ರಗಳಿಂದ ಕಿಡಿಗಳು ಹೊರಹೊಮ್ಮಿದವು. ಇದರಿಂದ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂಬ ವದಂತಿ ಹರಡಿತು.

ಚಲಿಸುವ ರೈಲಿನಿಂದ ಜಿಗಿದಿದ್ದರಿಂದ ಹಲವರಿಗೆ ಗಾಯಗಳಾಗಿವೆ. ಗಾಯಾಳು ಪ್ರಯಾಣಿಕರನ್ನು ವೈದ್ಯಕೀಯ ಚಿಕಿತ್ಸೆಗಾಗಿ ಹತ್ತಿರದ ಗ್ರಾಮೀಣ ಆಸ್ಪತ್ರೆಗೆ ಸಾಗಿಸಲಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:46 pm, Wed, 22 January 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ