AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೀಘ್ರದಲ್ಲೇ ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ; ಟ್ರಂಪ್ ಸುಂಕ ಹೆಚ್ಚಳ ಬೆನ್ನಲ್ಲೇ ಅಜಿತ್ ದೋವಲ್ ಮಾಹಿತಿ

ರಷ್ಯಾದ ತೈಲವನ್ನು ಗುರಿಯಾಗಿರಿಸಿಕೊಂಡು ಟ್ರಂಪ್ ಭಾರತದ ಮೇಲಿನ ಸುಂಕವನ್ನು ಹೆಚ್ಚಿಸಿದ್ದಾರೆ. ಇದರ ಬೆನ್ನಲ್ಲೇ ಭಾರತದೊಂದಿಗೆ ಪ್ರಮುಖ ಮಾತುಕತೆಗಾಗಿ ಪುಟಿನ್ ಭಾರತಕ್ಕೆ ಭೇಟಿ ನೀಡಲಿದ್ದಾರೆ. ವ್ಲಾಡಿಮಿರ್ ಪುಟಿನ್ ಶೀಘ್ರದಲ್ಲೇ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಅವರ ಭೇಟಿಯ ದಿನಾಂಕವನ್ನು ಸದ್ಯದಲ್ಲೇ ಘೋಷಿಸಲಾಗುವುದು ಎಂದು NSA ಅಜಿತ್ ದೋವಲ್ ದೃಢಪಡಿಸಿದ್ದಾರೆ.

ಶೀಘ್ರದಲ್ಲೇ ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ; ಟ್ರಂಪ್ ಸುಂಕ ಹೆಚ್ಚಳ ಬೆನ್ನಲ್ಲೇ ಅಜಿತ್ ದೋವಲ್ ಮಾಹಿತಿ
Modi With Putin
ಸುಷ್ಮಾ ಚಕ್ರೆ
|

Updated on: Aug 07, 2025 | 5:33 PM

Share

ನವದೆಹಲಿ, ಆಗಸ್ಟ್ 7: ರಷ್ಯಾದಿಂದ ಭಾರತ ತೈಲ (Russian Oil) ಖರೀದಿ ಮಾಡುತ್ತಿದೆ ಎಂಬ ಕಾರಣಕ್ಕೆ ಅಮೆರಿಕ (United States Tariff) ಭಾರತದ ಮೇಲೆ ಶೇ. 25ರಷ್ಟು ಹೆಚ್ಚುವರಿ ಸುಂಕ ವಿಧಿಸಿದೆ. ಇದರ ನಡುವೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Russia President Putin) ಭಾರತಕ್ಕೆ ಭೇಟಿ ನೀಡುವುದು ಖಚಿತವಾಗಿದೆ. ರಷ್ಯಾ ಈಗಾಗಲೇ ಪುಟಿನ್ ಭಾರತ ಭೇಟಿಯ ಶೆಡ್ಯೂಲ್ ಅಂತಿಮಗೊಳಿಸಿದ್ದು, ದಿನಾಂಕವನ್ನು ಅಧಿಕೃತವಾಗಿ ಘೋಷಿಸಬೇಕಿದೆ. ಮೂಲಗಳ ಪ್ರಕಾರ ಆಗಸ್ಟ್ ಅಂತ್ಯ ಅಥವಾ ಸೆಪ್ಟೆಂಬರ್ ಮೊದಲ ವಾರದಲ್ಲಿ ಪುಟಿನ್ ಭಾರತಕ್ಕೆ ಭೇಟಿ ನೀಡುವ ಸಾಧ್ಯತೆ ಹೆಚ್ಚಾಗಿದೆ.

ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ (NSA) ಅಜಿತ್ ದೋವಲ್ ಈ ಬಗ್ಗೆ ಮಾಹಿತಿ ನೀಡಿದ್ದು, ಪುಟಿನ್ ಭೇಟಿಯ ಕಾರಣಕ್ಕೆ ಭಾರತ ಉತ್ಸುಕವಾಗಿದೆ ಮತ್ತು ಸಂತೋಷಪಡುತ್ತಿದೆ ಎಂದು ಹೇಳಿದ್ದಾರೆ. ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಶೀಘ್ರದಲ್ಲೇ ಭಾರತಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು ಮಾಸ್ಕೋಗೆ ಭೇಟಿ ನೀಡಿದ ಸಂದರ್ಭದಲ್ಲಿ ಘೋಷಿಸಿದ್ದಾರೆ. ಉಕ್ರೇನ್ ಜೊತೆ ಯುದ್ಧಕ್ಕೆ ಇಳಿದಿರುವ ರಷ್ಯಾದಿಂದ ಭಾರತ ತೈಲ ಖರೀದಿ ಮಾಡುವ ಮೂಲಕ ಯುದ್ಧಕ್ಕೆ ಪರೋಕ್ಷವಾಗಿ ಹಣ ಹೂಡಿಕೆ ಮಾಡುತ್ತಿದೆ ಎಂದು ಆರೋಪಿಸಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಆಮದು ವಸ್ತುಗಳ ಮೇಲಿನ ವ್ಯಾಪಾರ ಸುಂಕವನ್ನು ಶೇ. 50ಕ್ಕೆ ಏರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಷ್ಯಾದ ಅಧ್ಯಕ್ಷರ ಭಾರತ ಭೇಟಿ ಮಹತ್ವ ಪಡೆದಿದೆ.

ಇದನ್ನೂ ಓದಿ: ಅನ್ಯಾಯ, ಅಸಮಂಜಸ; ಶೇ. 25ರಷ್ಟು ಹೆಚ್ಚುವರಿ ಸುಂಕ ವಿಧಿಸಿದ ಟ್ರಂಪ್​ಗೆ ಭಾರತ ತಿರುಗೇಟು

ರಷ್ಯಾದ ಭದ್ರತಾ ಮಂಡಳಿಯ ಕಾರ್ಯದರ್ಶಿ ಸೆರ್ಗೆಯ್ ಶೋಯಿಗು ಅವರೊಂದಿಗೆ ಮಾತನಾಡುವಾಗ ಎನ್​ಎಸ್​ಎ ಅಜಿತ್ ದೋವಲ್ ರಷ್ಯಾ ಅಧ್ಯಕ್ಷ ಪುಟಿನ್ ಅವರ ಭಾರತದ ಭೇಟಿಯ ದಿನಾಂಕ ಫಿಕ್ಸ್ ಆಗಿರುವುದನ್ನು ಕೇಳಿ ಸಂತೋಷವಾಗಿದೆ. ನಾವು ಅವರನ್ನು ಬರಮಾಡಿಕೊಳ್ಳಲು ಉತ್ಸುಕರಾಗಿದ್ದೇವೆ ಎಂದಿದ್ದಾರೆ. “ನಮ್ಮ ನಡುವೆ ಬಹಳ ವಿಶೇಷವಾದ ಮತ್ತು ದೀರ್ಘ ಸಂಬಂಧವಿದೆ. ನಮ್ಮ ಕಾರ್ಯತಂತ್ರದ ಪಾಲುದಾರಿಕೆಯನ್ನು ನಾವು ಹೆಚ್ಚು ಗೌರವಿಸುತ್ತೇವೆ ಎಂದು ನೀವು ತುಂಬಾ ಸರಿಯಾಗಿಯೇ ಹೇಳಿದ್ದೀರಿ. ನಾವು ಉನ್ನತ ಮಟ್ಟದ ಮಾತುಕತೆಗಳನ್ನು ನಡೆಸಿದ್ದೇವೆ. ಈ ಉನ್ನತ ಮಟ್ಟದ ಮಾತುಕತೆಗಳು ಬಹಳ ಗಣನೀಯವಾಗಿ ಕೊಡುಗೆ ನೀಡಿವೆ. ರಷ್ಯಾ ಅಧ್ಯಕ್ಷ ಪುಟಿನ್ ಅವರ ಭಾರತ ಭೇಟಿಯ ಬಗ್ಗೆ ತಿಳಿದು ನಾವು ತುಂಬಾ ಉತ್ಸುಕರಾಗಿದ್ದೇವೆ” ಎಂದು ಅಜಿತ್ ದೋವಲ್ ಹೇಳಿದ್ದಾರೆ.

ಇದನ್ನೂ ಓದಿ: ರೈತರ ಹಿತಾಸಕ್ತಿ ಕಾಪಾಡಲು ಯಾವುದೇ ವೈಯಕ್ತಿಕ ನಷ್ಟಕ್ಕೂ ಸಿದ್ಧ ಎಂದು ಟ್ರಂಪ್​ಗೆ ಸವಾಲೆಸೆದ ಪ್ರಧಾನಿ ಮೋದಿ

ಪ್ರಧಾನಿ ಮೋದಿ ಮತ್ತು ಅಧ್ಯಕ್ಷ ಪುಟಿನ್ ಕಳೆದ ವರ್ಷ ಎರಡು ಬಾರಿ ಭೇಟಿಯಾಗಿದ್ದರು. ಕಳೆದ ವರ್ಷ ಜುಲೈನಲ್ಲಿ ಪ್ರಧಾನಿ ಮೋದಿ 22ನೇ ಭಾರತ-ರಷ್ಯಾ ಶೃಂಗಸಭೆಗಾಗಿ ಮಾಸ್ಕೋಗೆ ಭೇಟಿ ನೀಡಿದ ಸಮಯದಲ್ಲಿ ಒಮ್ಮೆ ಅವರಿಬ್ಬರೂ ಭೇಟಿಯಾಗಿದ್ದರು. ಇದು ಮೋದಿ ಪ್ರಧಾನಿಯಾಗಿ ಮೂರನೇ ಅವಧಿಯ ಅಧಿಕಾರಾವಧಿಯನ್ನು ಪ್ರಾರಂಭಿಸಿದ ನಂತರ ಅವರ ಮೊದಲ ದ್ವಿಪಕ್ಷೀಯ ಪ್ರವಾಸವಾಗಿತ್ತು. ಭಾರತ-ರಷ್ಯಾ ಸಂಬಂಧಗಳನ್ನು ಬಲಪಡಿಸುವಲ್ಲಿ ನೀಡಿದ ಕೊಡುಗೆಗಳಿಗಾಗಿ ಪ್ರಧಾನಿ ಮೋದಿಗೆ ರಷ್ಯಾದ ಅತ್ಯುನ್ನತ ನಾಗರಿಕ ಗೌರವವಾದ ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ ದಿ ಅಪೋಸ್ತಲ್ ಪ್ರಶಸ್ತಿಯನ್ನು ನೀಡಲಾಗಿತ್ತು. ಎರಡನೇ ಬಾರಿಗೆ, ಕಳೆದ ಅಕ್ಟೋಬರ್‌ನಲ್ಲಿ ಕಜಾನ್‌ನಲ್ಲಿ ಪ್ರಧಾನಿ ಮೋದಿ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಿದ್ದಾಗ ಇಬ್ಬರು ನಾಯಕರು ಮತ್ತೆ ಭೇಟಿಯಾಗಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!