AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಿಂದ ದೋಹಾಕ್ಕೆ ಹೊರಟಿದ್ದ ವಿಮಾನ ಕರಾಚಿಯಲ್ಲಿ ತುರ್ತು ಭೂಸ್ಪರ್ಶ; ಹೊಗೆಯಿಂದಾಗಿ ಆತಂಕ

ಫ್ಲೈಟ್​ಅವೇರ್​ ಎಂಬ ವಿಮಾನ ಟ್ರ್ಯಾಕಿಂಗ್​ ವೆಬ್​ಸೈಟ್​ ಪ್ರಕಾರ ಈ ಕ್ಯೂಆರ್​ 579 ವಿಮಾನ ಮುಂಜಾನೆ 3.50ಕ್ಕೆ ದೆಹಲಿಯಿಂದ ಹೊರಟಿತ್ತು. ನಂತರ ಮುಂಜಾನೆ 5.45ರ ಹೊತ್ತಿಗೆ ಕರಾಚಿಯಲ್ಲಿ ತುರ್ತು ಭೂಸ್ಪರ್ಶವಾಗಿದೆ.

ದೆಹಲಿಯಿಂದ ದೋಹಾಕ್ಕೆ ಹೊರಟಿದ್ದ ವಿಮಾನ ಕರಾಚಿಯಲ್ಲಿ ತುರ್ತು ಭೂಸ್ಪರ್ಶ; ಹೊಗೆಯಿಂದಾಗಿ ಆತಂಕ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Mar 21, 2022 | 4:12 PM

Share

ಕತಾರ್​ ಏರ್​ವೇ  ವಿಮಾನಯಾನ ಸಂಸ್ಥೆಯ ದೆಹಲಿ-ದೋಹಾ ವಿಮಾನವೊಂದು ಇಂದು ಪಾಕಿಸ್ತಾನದ ಕರಾಚಿಯಲ್ಲಿ ತುರ್ತು ಲ್ಯಾಂಡ್ ಆಗಿದೆ. ದೆಹಲಿಯಿಂದ ಕತಾರ್​ನ ದೋಹಾಕ್ಕೆ ತೆರಳುತ್ತಿದ್ದ QR579 ಎಂಬ ಫ್ಲೈಟ್​​ನ ಕಾರ್ಗೋ ಸ್ಥಳ (ಸರಕು ಇಡುವ ಸ್ಥಳ)ದಲ್ಲಿ ಹೊಗೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕರಾಚಿಯಲ್ಲಿ ಲ್ಯಾಂಡ್​ ಮಾಡಲಾಗಿದೆ. ಈ ವಿಮಾನದಲ್ಲಿದ್ದ ಪ್ರಯಾಣಿಕರನ್ನು ಇನ್ನೊಂದು ವಿಮಾನದ ಮೂಲಕ ಕಳಿಸಲಾಗಿದೆ ಎಂದು ವರದಿಯಾಗಿದೆ. 

ಫ್ಲೈಟ್​ಅವೇರ್​ ಎಂಬ ವಿಮಾನ ಟ್ರ್ಯಾಕಿಂಗ್​ ವೆಬ್​ಸೈಟ್​ ಪ್ರಕಾರ ಈ ಕ್ಯೂಆರ್​ 579 ವಿಮಾನ ಮುಂಜಾನೆ 3.50ಕ್ಕೆ ದೆಹಲಿಯಿಂದ ಹೊರಟಿತ್ತು. ನಂತರ ಮುಂಜಾನೆ 5.45ರ ಹೊತ್ತಿಗೆ ಕರಾಚಿಯಲ್ಲಿ ತುರ್ತು ಭೂಸ್ಪರ್ಶವಾಗಿದೆ. ಅಂದರೆ ಟೇಕ್​ಆಫ್​ ಆಗಿ ಹೊರಟು 1.15 ತಾಸಿನಲ್ಲೇ ಎಮರ್ಜನ್ಸಿ ಲ್ಯಾಂಡ್​ ಆಗಿದೆ. ಹಾಗೊಮ್ಮೆ ಇಲ್ಲಿ ಸಮಸ್ಯೆ ಕಾಣಿಸದೆ ಇದ್ದಿದ್ದರೆ ಬೆಳಗ್ಗೆ 7.15ರ ಹೊತ್ತಿಗೆ ದೋಹಾ ತಲುಪಿರುತ್ತಿತ್ತು.   ಈ ವಿಮಾನದಲ್ಲಿ ಹೊಗೆ ಕಾಣಿಸಿಕೊಳ್ಳಲು ಕಾರಣವೇನು ಎಂಬ ಬಗ್ಗೆ ಪರಿಶೀಲನೆ ನಡೆಯುತ್ತಿದೆ. ಚಿಕ್ಕಪ್ರಮಾಣದಲ್ಲಿ ಹೊಗೆ ಕಾಣಿಸಿಕೊಳ್ಳುತ್ತಿದ್ದಂತೆ ವಿಮಾನ ಲ್ಯಾಂಡ್ ಮಾಡಲಾಗಿದ್ದು, ಯಾವುದೇ ದೊಡ್ಡ ಅನಾಹುತ ಆಗಿಲ್ಲ. ಆದರೆ ಪ್ರಯಾಣಿಕರಿಗೆ ಆದ ಅನನುಕೂಲಕ್ಕೆ ಕ್ಷಮೆ ಕೇಳುತ್ತೇವೆ ಎಂದು  ಕತಾರ್ ಏರ್​ ವೇ ಹೇಳಿದೆ.

ಇಂದು ಚೀನಾದಲ್ಲಿ ದೊಡ್ಡಮಟ್ಟದಲ್ಲಿ ವಿಮಾನ ದುರಂತ ಸಂಭವಿಸಿದೆ. ಸುಮಾರು 133 ಪ್ರಯಾಣಿಕರಿದ್ದ ಬೋಯಿಂಗ್​ ವಿಮಾನ ಪರ್ವತ ಪ್ರದೇಶದಲ್ಲಿ ಪತನಗೊಂಡಿದ್ದು, ಸದ್ಯ ಮೃತಪಟ್ಟವರ ಸಂಖ್ಯೆ ವರದಿಯಾಗಿಲ್ಲ. ಆದರೆ ವಿಮಾನ ಪತನಗೊಂಡ ಸ್ಥಳದಲ್ಲಿ ಬೆಂಕಿ ಉರಿದು, ಹೊಗೆ ಎದ್ದಿದ್ದು, ಪ್ರಯಾಣಿಕರು ಬದುಕುಳಿಯುವ ಸಾಧ್ಯತೆ ತೀರ ಕಡಿಮೆ ಎಂದೂ ಹೇಳಲಾಗಿದೆ.

ಇದನ್ನೂ ಓದಿ: Video: ಚೀನಾದಲ್ಲಿ 133 ಪ್ರಯಾಣಿಕರಿದ್ದ ವಿಮಾನ ಪತನ; ಪರ್ವತಗಳ ಮಧ್ಯೆ ಅಪಘಾತಕ್ಕೀಡಾದ ಫ್ಲೈಟ್​

Published On - 4:11 pm, Mon, 21 March 22

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ