AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಿಂದ ದೋಹಾಕ್ಕೆ ಹೊರಟಿದ್ದ ವಿಮಾನ ಕರಾಚಿಯಲ್ಲಿ ತುರ್ತು ಭೂಸ್ಪರ್ಶ; ಹೊಗೆಯಿಂದಾಗಿ ಆತಂಕ

ಫ್ಲೈಟ್​ಅವೇರ್​ ಎಂಬ ವಿಮಾನ ಟ್ರ್ಯಾಕಿಂಗ್​ ವೆಬ್​ಸೈಟ್​ ಪ್ರಕಾರ ಈ ಕ್ಯೂಆರ್​ 579 ವಿಮಾನ ಮುಂಜಾನೆ 3.50ಕ್ಕೆ ದೆಹಲಿಯಿಂದ ಹೊರಟಿತ್ತು. ನಂತರ ಮುಂಜಾನೆ 5.45ರ ಹೊತ್ತಿಗೆ ಕರಾಚಿಯಲ್ಲಿ ತುರ್ತು ಭೂಸ್ಪರ್ಶವಾಗಿದೆ.

ದೆಹಲಿಯಿಂದ ದೋಹಾಕ್ಕೆ ಹೊರಟಿದ್ದ ವಿಮಾನ ಕರಾಚಿಯಲ್ಲಿ ತುರ್ತು ಭೂಸ್ಪರ್ಶ; ಹೊಗೆಯಿಂದಾಗಿ ಆತಂಕ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Mar 21, 2022 | 4:12 PM

Share

ಕತಾರ್​ ಏರ್​ವೇ  ವಿಮಾನಯಾನ ಸಂಸ್ಥೆಯ ದೆಹಲಿ-ದೋಹಾ ವಿಮಾನವೊಂದು ಇಂದು ಪಾಕಿಸ್ತಾನದ ಕರಾಚಿಯಲ್ಲಿ ತುರ್ತು ಲ್ಯಾಂಡ್ ಆಗಿದೆ. ದೆಹಲಿಯಿಂದ ಕತಾರ್​ನ ದೋಹಾಕ್ಕೆ ತೆರಳುತ್ತಿದ್ದ QR579 ಎಂಬ ಫ್ಲೈಟ್​​ನ ಕಾರ್ಗೋ ಸ್ಥಳ (ಸರಕು ಇಡುವ ಸ್ಥಳ)ದಲ್ಲಿ ಹೊಗೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕರಾಚಿಯಲ್ಲಿ ಲ್ಯಾಂಡ್​ ಮಾಡಲಾಗಿದೆ. ಈ ವಿಮಾನದಲ್ಲಿದ್ದ ಪ್ರಯಾಣಿಕರನ್ನು ಇನ್ನೊಂದು ವಿಮಾನದ ಮೂಲಕ ಕಳಿಸಲಾಗಿದೆ ಎಂದು ವರದಿಯಾಗಿದೆ. 

ಫ್ಲೈಟ್​ಅವೇರ್​ ಎಂಬ ವಿಮಾನ ಟ್ರ್ಯಾಕಿಂಗ್​ ವೆಬ್​ಸೈಟ್​ ಪ್ರಕಾರ ಈ ಕ್ಯೂಆರ್​ 579 ವಿಮಾನ ಮುಂಜಾನೆ 3.50ಕ್ಕೆ ದೆಹಲಿಯಿಂದ ಹೊರಟಿತ್ತು. ನಂತರ ಮುಂಜಾನೆ 5.45ರ ಹೊತ್ತಿಗೆ ಕರಾಚಿಯಲ್ಲಿ ತುರ್ತು ಭೂಸ್ಪರ್ಶವಾಗಿದೆ. ಅಂದರೆ ಟೇಕ್​ಆಫ್​ ಆಗಿ ಹೊರಟು 1.15 ತಾಸಿನಲ್ಲೇ ಎಮರ್ಜನ್ಸಿ ಲ್ಯಾಂಡ್​ ಆಗಿದೆ. ಹಾಗೊಮ್ಮೆ ಇಲ್ಲಿ ಸಮಸ್ಯೆ ಕಾಣಿಸದೆ ಇದ್ದಿದ್ದರೆ ಬೆಳಗ್ಗೆ 7.15ರ ಹೊತ್ತಿಗೆ ದೋಹಾ ತಲುಪಿರುತ್ತಿತ್ತು.   ಈ ವಿಮಾನದಲ್ಲಿ ಹೊಗೆ ಕಾಣಿಸಿಕೊಳ್ಳಲು ಕಾರಣವೇನು ಎಂಬ ಬಗ್ಗೆ ಪರಿಶೀಲನೆ ನಡೆಯುತ್ತಿದೆ. ಚಿಕ್ಕಪ್ರಮಾಣದಲ್ಲಿ ಹೊಗೆ ಕಾಣಿಸಿಕೊಳ್ಳುತ್ತಿದ್ದಂತೆ ವಿಮಾನ ಲ್ಯಾಂಡ್ ಮಾಡಲಾಗಿದ್ದು, ಯಾವುದೇ ದೊಡ್ಡ ಅನಾಹುತ ಆಗಿಲ್ಲ. ಆದರೆ ಪ್ರಯಾಣಿಕರಿಗೆ ಆದ ಅನನುಕೂಲಕ್ಕೆ ಕ್ಷಮೆ ಕೇಳುತ್ತೇವೆ ಎಂದು  ಕತಾರ್ ಏರ್​ ವೇ ಹೇಳಿದೆ.

ಇಂದು ಚೀನಾದಲ್ಲಿ ದೊಡ್ಡಮಟ್ಟದಲ್ಲಿ ವಿಮಾನ ದುರಂತ ಸಂಭವಿಸಿದೆ. ಸುಮಾರು 133 ಪ್ರಯಾಣಿಕರಿದ್ದ ಬೋಯಿಂಗ್​ ವಿಮಾನ ಪರ್ವತ ಪ್ರದೇಶದಲ್ಲಿ ಪತನಗೊಂಡಿದ್ದು, ಸದ್ಯ ಮೃತಪಟ್ಟವರ ಸಂಖ್ಯೆ ವರದಿಯಾಗಿಲ್ಲ. ಆದರೆ ವಿಮಾನ ಪತನಗೊಂಡ ಸ್ಥಳದಲ್ಲಿ ಬೆಂಕಿ ಉರಿದು, ಹೊಗೆ ಎದ್ದಿದ್ದು, ಪ್ರಯಾಣಿಕರು ಬದುಕುಳಿಯುವ ಸಾಧ್ಯತೆ ತೀರ ಕಡಿಮೆ ಎಂದೂ ಹೇಳಲಾಗಿದೆ.

ಇದನ್ನೂ ಓದಿ: Video: ಚೀನಾದಲ್ಲಿ 133 ಪ್ರಯಾಣಿಕರಿದ್ದ ವಿಮಾನ ಪತನ; ಪರ್ವತಗಳ ಮಧ್ಯೆ ಅಪಘಾತಕ್ಕೀಡಾದ ಫ್ಲೈಟ್​

Published On - 4:11 pm, Mon, 21 March 22

Follow Us
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು