AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಿಂದ ದೋಹಾಕ್ಕೆ ಹೊರಟಿದ್ದ ವಿಮಾನ ಕರಾಚಿಯಲ್ಲಿ ತುರ್ತು ಭೂಸ್ಪರ್ಶ; ಹೊಗೆಯಿಂದಾಗಿ ಆತಂಕ

ಫ್ಲೈಟ್​ಅವೇರ್​ ಎಂಬ ವಿಮಾನ ಟ್ರ್ಯಾಕಿಂಗ್​ ವೆಬ್​ಸೈಟ್​ ಪ್ರಕಾರ ಈ ಕ್ಯೂಆರ್​ 579 ವಿಮಾನ ಮುಂಜಾನೆ 3.50ಕ್ಕೆ ದೆಹಲಿಯಿಂದ ಹೊರಟಿತ್ತು. ನಂತರ ಮುಂಜಾನೆ 5.45ರ ಹೊತ್ತಿಗೆ ಕರಾಚಿಯಲ್ಲಿ ತುರ್ತು ಭೂಸ್ಪರ್ಶವಾಗಿದೆ.

ದೆಹಲಿಯಿಂದ ದೋಹಾಕ್ಕೆ ಹೊರಟಿದ್ದ ವಿಮಾನ ಕರಾಚಿಯಲ್ಲಿ ತುರ್ತು ಭೂಸ್ಪರ್ಶ; ಹೊಗೆಯಿಂದಾಗಿ ಆತಂಕ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Mar 21, 2022 | 4:12 PM

Share

ಕತಾರ್​ ಏರ್​ವೇ  ವಿಮಾನಯಾನ ಸಂಸ್ಥೆಯ ದೆಹಲಿ-ದೋಹಾ ವಿಮಾನವೊಂದು ಇಂದು ಪಾಕಿಸ್ತಾನದ ಕರಾಚಿಯಲ್ಲಿ ತುರ್ತು ಲ್ಯಾಂಡ್ ಆಗಿದೆ. ದೆಹಲಿಯಿಂದ ಕತಾರ್​ನ ದೋಹಾಕ್ಕೆ ತೆರಳುತ್ತಿದ್ದ QR579 ಎಂಬ ಫ್ಲೈಟ್​​ನ ಕಾರ್ಗೋ ಸ್ಥಳ (ಸರಕು ಇಡುವ ಸ್ಥಳ)ದಲ್ಲಿ ಹೊಗೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕರಾಚಿಯಲ್ಲಿ ಲ್ಯಾಂಡ್​ ಮಾಡಲಾಗಿದೆ. ಈ ವಿಮಾನದಲ್ಲಿದ್ದ ಪ್ರಯಾಣಿಕರನ್ನು ಇನ್ನೊಂದು ವಿಮಾನದ ಮೂಲಕ ಕಳಿಸಲಾಗಿದೆ ಎಂದು ವರದಿಯಾಗಿದೆ. 

ಫ್ಲೈಟ್​ಅವೇರ್​ ಎಂಬ ವಿಮಾನ ಟ್ರ್ಯಾಕಿಂಗ್​ ವೆಬ್​ಸೈಟ್​ ಪ್ರಕಾರ ಈ ಕ್ಯೂಆರ್​ 579 ವಿಮಾನ ಮುಂಜಾನೆ 3.50ಕ್ಕೆ ದೆಹಲಿಯಿಂದ ಹೊರಟಿತ್ತು. ನಂತರ ಮುಂಜಾನೆ 5.45ರ ಹೊತ್ತಿಗೆ ಕರಾಚಿಯಲ್ಲಿ ತುರ್ತು ಭೂಸ್ಪರ್ಶವಾಗಿದೆ. ಅಂದರೆ ಟೇಕ್​ಆಫ್​ ಆಗಿ ಹೊರಟು 1.15 ತಾಸಿನಲ್ಲೇ ಎಮರ್ಜನ್ಸಿ ಲ್ಯಾಂಡ್​ ಆಗಿದೆ. ಹಾಗೊಮ್ಮೆ ಇಲ್ಲಿ ಸಮಸ್ಯೆ ಕಾಣಿಸದೆ ಇದ್ದಿದ್ದರೆ ಬೆಳಗ್ಗೆ 7.15ರ ಹೊತ್ತಿಗೆ ದೋಹಾ ತಲುಪಿರುತ್ತಿತ್ತು.   ಈ ವಿಮಾನದಲ್ಲಿ ಹೊಗೆ ಕಾಣಿಸಿಕೊಳ್ಳಲು ಕಾರಣವೇನು ಎಂಬ ಬಗ್ಗೆ ಪರಿಶೀಲನೆ ನಡೆಯುತ್ತಿದೆ. ಚಿಕ್ಕಪ್ರಮಾಣದಲ್ಲಿ ಹೊಗೆ ಕಾಣಿಸಿಕೊಳ್ಳುತ್ತಿದ್ದಂತೆ ವಿಮಾನ ಲ್ಯಾಂಡ್ ಮಾಡಲಾಗಿದ್ದು, ಯಾವುದೇ ದೊಡ್ಡ ಅನಾಹುತ ಆಗಿಲ್ಲ. ಆದರೆ ಪ್ರಯಾಣಿಕರಿಗೆ ಆದ ಅನನುಕೂಲಕ್ಕೆ ಕ್ಷಮೆ ಕೇಳುತ್ತೇವೆ ಎಂದು  ಕತಾರ್ ಏರ್​ ವೇ ಹೇಳಿದೆ.

ಇಂದು ಚೀನಾದಲ್ಲಿ ದೊಡ್ಡಮಟ್ಟದಲ್ಲಿ ವಿಮಾನ ದುರಂತ ಸಂಭವಿಸಿದೆ. ಸುಮಾರು 133 ಪ್ರಯಾಣಿಕರಿದ್ದ ಬೋಯಿಂಗ್​ ವಿಮಾನ ಪರ್ವತ ಪ್ರದೇಶದಲ್ಲಿ ಪತನಗೊಂಡಿದ್ದು, ಸದ್ಯ ಮೃತಪಟ್ಟವರ ಸಂಖ್ಯೆ ವರದಿಯಾಗಿಲ್ಲ. ಆದರೆ ವಿಮಾನ ಪತನಗೊಂಡ ಸ್ಥಳದಲ್ಲಿ ಬೆಂಕಿ ಉರಿದು, ಹೊಗೆ ಎದ್ದಿದ್ದು, ಪ್ರಯಾಣಿಕರು ಬದುಕುಳಿಯುವ ಸಾಧ್ಯತೆ ತೀರ ಕಡಿಮೆ ಎಂದೂ ಹೇಳಲಾಗಿದೆ.

ಇದನ್ನೂ ಓದಿ: Video: ಚೀನಾದಲ್ಲಿ 133 ಪ್ರಯಾಣಿಕರಿದ್ದ ವಿಮಾನ ಪತನ; ಪರ್ವತಗಳ ಮಧ್ಯೆ ಅಪಘಾತಕ್ಕೀಡಾದ ಫ್ಲೈಟ್​

Published On - 4:11 pm, Mon, 21 March 22

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?