AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಿಂದ ದೋಹಾಕ್ಕೆ ಹೊರಟಿದ್ದ ವಿಮಾನ ಕರಾಚಿಯಲ್ಲಿ ತುರ್ತು ಭೂಸ್ಪರ್ಶ; ಹೊಗೆಯಿಂದಾಗಿ ಆತಂಕ

ಫ್ಲೈಟ್​ಅವೇರ್​ ಎಂಬ ವಿಮಾನ ಟ್ರ್ಯಾಕಿಂಗ್​ ವೆಬ್​ಸೈಟ್​ ಪ್ರಕಾರ ಈ ಕ್ಯೂಆರ್​ 579 ವಿಮಾನ ಮುಂಜಾನೆ 3.50ಕ್ಕೆ ದೆಹಲಿಯಿಂದ ಹೊರಟಿತ್ತು. ನಂತರ ಮುಂಜಾನೆ 5.45ರ ಹೊತ್ತಿಗೆ ಕರಾಚಿಯಲ್ಲಿ ತುರ್ತು ಭೂಸ್ಪರ್ಶವಾಗಿದೆ.

ದೆಹಲಿಯಿಂದ ದೋಹಾಕ್ಕೆ ಹೊರಟಿದ್ದ ವಿಮಾನ ಕರಾಚಿಯಲ್ಲಿ ತುರ್ತು ಭೂಸ್ಪರ್ಶ; ಹೊಗೆಯಿಂದಾಗಿ ಆತಂಕ
ಪ್ರಾತಿನಿಧಿಕ ಚಿತ್ರ
TV9 Web
| Updated By: Lakshmi Hegde|

Updated on:Mar 21, 2022 | 4:12 PM

Share

ಕತಾರ್​ ಏರ್​ವೇ  ವಿಮಾನಯಾನ ಸಂಸ್ಥೆಯ ದೆಹಲಿ-ದೋಹಾ ವಿಮಾನವೊಂದು ಇಂದು ಪಾಕಿಸ್ತಾನದ ಕರಾಚಿಯಲ್ಲಿ ತುರ್ತು ಲ್ಯಾಂಡ್ ಆಗಿದೆ. ದೆಹಲಿಯಿಂದ ಕತಾರ್​ನ ದೋಹಾಕ್ಕೆ ತೆರಳುತ್ತಿದ್ದ QR579 ಎಂಬ ಫ್ಲೈಟ್​​ನ ಕಾರ್ಗೋ ಸ್ಥಳ (ಸರಕು ಇಡುವ ಸ್ಥಳ)ದಲ್ಲಿ ಹೊಗೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕರಾಚಿಯಲ್ಲಿ ಲ್ಯಾಂಡ್​ ಮಾಡಲಾಗಿದೆ. ಈ ವಿಮಾನದಲ್ಲಿದ್ದ ಪ್ರಯಾಣಿಕರನ್ನು ಇನ್ನೊಂದು ವಿಮಾನದ ಮೂಲಕ ಕಳಿಸಲಾಗಿದೆ ಎಂದು ವರದಿಯಾಗಿದೆ. 

ಫ್ಲೈಟ್​ಅವೇರ್​ ಎಂಬ ವಿಮಾನ ಟ್ರ್ಯಾಕಿಂಗ್​ ವೆಬ್​ಸೈಟ್​ ಪ್ರಕಾರ ಈ ಕ್ಯೂಆರ್​ 579 ವಿಮಾನ ಮುಂಜಾನೆ 3.50ಕ್ಕೆ ದೆಹಲಿಯಿಂದ ಹೊರಟಿತ್ತು. ನಂತರ ಮುಂಜಾನೆ 5.45ರ ಹೊತ್ತಿಗೆ ಕರಾಚಿಯಲ್ಲಿ ತುರ್ತು ಭೂಸ್ಪರ್ಶವಾಗಿದೆ. ಅಂದರೆ ಟೇಕ್​ಆಫ್​ ಆಗಿ ಹೊರಟು 1.15 ತಾಸಿನಲ್ಲೇ ಎಮರ್ಜನ್ಸಿ ಲ್ಯಾಂಡ್​ ಆಗಿದೆ. ಹಾಗೊಮ್ಮೆ ಇಲ್ಲಿ ಸಮಸ್ಯೆ ಕಾಣಿಸದೆ ಇದ್ದಿದ್ದರೆ ಬೆಳಗ್ಗೆ 7.15ರ ಹೊತ್ತಿಗೆ ದೋಹಾ ತಲುಪಿರುತ್ತಿತ್ತು.   ಈ ವಿಮಾನದಲ್ಲಿ ಹೊಗೆ ಕಾಣಿಸಿಕೊಳ್ಳಲು ಕಾರಣವೇನು ಎಂಬ ಬಗ್ಗೆ ಪರಿಶೀಲನೆ ನಡೆಯುತ್ತಿದೆ. ಚಿಕ್ಕಪ್ರಮಾಣದಲ್ಲಿ ಹೊಗೆ ಕಾಣಿಸಿಕೊಳ್ಳುತ್ತಿದ್ದಂತೆ ವಿಮಾನ ಲ್ಯಾಂಡ್ ಮಾಡಲಾಗಿದ್ದು, ಯಾವುದೇ ದೊಡ್ಡ ಅನಾಹುತ ಆಗಿಲ್ಲ. ಆದರೆ ಪ್ರಯಾಣಿಕರಿಗೆ ಆದ ಅನನುಕೂಲಕ್ಕೆ ಕ್ಷಮೆ ಕೇಳುತ್ತೇವೆ ಎಂದು  ಕತಾರ್ ಏರ್​ ವೇ ಹೇಳಿದೆ.

ಇಂದು ಚೀನಾದಲ್ಲಿ ದೊಡ್ಡಮಟ್ಟದಲ್ಲಿ ವಿಮಾನ ದುರಂತ ಸಂಭವಿಸಿದೆ. ಸುಮಾರು 133 ಪ್ರಯಾಣಿಕರಿದ್ದ ಬೋಯಿಂಗ್​ ವಿಮಾನ ಪರ್ವತ ಪ್ರದೇಶದಲ್ಲಿ ಪತನಗೊಂಡಿದ್ದು, ಸದ್ಯ ಮೃತಪಟ್ಟವರ ಸಂಖ್ಯೆ ವರದಿಯಾಗಿಲ್ಲ. ಆದರೆ ವಿಮಾನ ಪತನಗೊಂಡ ಸ್ಥಳದಲ್ಲಿ ಬೆಂಕಿ ಉರಿದು, ಹೊಗೆ ಎದ್ದಿದ್ದು, ಪ್ರಯಾಣಿಕರು ಬದುಕುಳಿಯುವ ಸಾಧ್ಯತೆ ತೀರ ಕಡಿಮೆ ಎಂದೂ ಹೇಳಲಾಗಿದೆ.

ಇದನ್ನೂ ಓದಿ: Video: ಚೀನಾದಲ್ಲಿ 133 ಪ್ರಯಾಣಿಕರಿದ್ದ ವಿಮಾನ ಪತನ; ಪರ್ವತಗಳ ಮಧ್ಯೆ ಅಪಘಾತಕ್ಕೀಡಾದ ಫ್ಲೈಟ್​

Published On - 4:11 pm, Mon, 21 March 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು