AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯೂಎಸ್ ವರ್ಲ್ಡ್ ಯೂನಿವರ್ಸಿಟಿ ರ‍್ಯಾಂಕಿಂಗ್: ಏಷ್ಯಾದಲ್ಲಿ ಭಾರತಕ್ಕೆ 2ನೇ ಸ್ಥಾನ

QS World University Ranking 2024: ಕಳೆದ ವಾರ ಬಿಡುಗಡೆ ಆದ ಕ್ಯುಎಸ್ ವರ್ಲ್ಡ್ ಯೂನಿವರ್ಸಿಟಿ ರ‍್ಯಾಂಕಿಂಗ್​ನಲ್ಲಿ ಭಾರತೀಯ ವಿಶ್ವವಿದ್ಯಾಲಯಗಳು ಈ ಬಾರಿ ಹೆಚ್ಚು ಮಿಂಚಿವೆ. ಏಷ್ಯಾದಲ್ಲಿ ಚೀನಾ ಬಿಟ್ಟರೆ ಈ ರ‍್ಯಾಂಕಿಂಗ್​ನಲ್ಲಿ ಹೆಚ್ಚು ವಿವಿಗಳಿರುವುದು ಭಾರತದ್ದು. ಒಟ್ಟು 69 ಭಾರತೀಯ ವಿಶ್ವವಿದ್ಯಾಲಯಗಳು ರ‍್ಯಾಂಕಿಂಗ್​ನಲ್ಲಿ ಸ್ಥಾನ ಪಡೆದಿವೆ. ಚೀನಾ ವಿವಿಗಳು ಸ್ಥಾನ ಪಡೆದಿರುವುದು 101. ಬೆಂಗಳೂರಿನ ಐಐಎಂ ಸೇರಿದಂತೆ ಹಲವು ಭಾರತೀಯ ವಿವಿಗಳು ಟಾಪ್ 100 ನಲ್ಲಿ ಇವೆ. ದೆಹಲಿಯ ಜವಾಹರಲಾಲ್ ನೆಹರೂ ಯೂನಿವರ್ಸಿಟಿ ಜಾಗತಿಕವಾಗಿ 20ನೇ ಶ್ರೇಯಾಂಕ ಪಡೆದಿದೆ.

ಕ್ಯೂಎಸ್ ವರ್ಲ್ಡ್ ಯೂನಿವರ್ಸಿಟಿ ರ‍್ಯಾಂಕಿಂಗ್: ಏಷ್ಯಾದಲ್ಲಿ ಭಾರತಕ್ಕೆ 2ನೇ ಸ್ಥಾನ
ಜವಾಹರಲಾಲ್ ನೆಹರು ಯೂನಿವರ್ಸಿಟಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Apr 22, 2024 | 5:50 PM

Share

ನವದೆಹಲಿ, ಏಪ್ರಿಲ್ 22: ಇತ್ತೀಚೆಗೆ ಬಿಡುಗಡೆ ಆದ 2024ರ ಸಾಲಿನ ಕ್ಯುಎಸ್ ವರ್ಲ್ಡ್ ಯೂನಿವರ್ಸಿಟಿ ರ‍್ಯಾಂಕಿಂಗ್ (QS World University Ranking 2024) ಪಟ್ಟಿಯಲ್ಲಿ ಭಾರತದ ಶಿಕ್ಷಣ ಸಂಸ್ಥೆಗಳ ಪ್ರಭಾವ ಹೆಚ್ಚಿದೆ. ಈ ಪಟ್ಟಿಯಲ್ಲಿ ಭಾರತದ 69 ಭಾರತೀಯ ವಿಶ್ವವಿದ್ಯಾಲಯಗಳು (Indian universities) ಸ್ಥಾನ ಪಡೆದಿವೆ. ಚೀನಾದ 101 ಯೂನಿವರ್ಸಿಟಿಗಳು ಈ ಪಟ್ಟಿಯಲ್ಲಿವೆ. ಏಷ್ಯಾದಲ್ಲಿ ಚೀನಾ ಬಿಟ್ಟರೆ ಭಾರತದ ವಿವಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಕ್ಯುಸ್ ವರ್ಲ್ಡ್ ಯೂನಿವರ್ಸಿಟಿಗಳ ಶ್ರೇಯಾಂಕ ಪಟ್ಟಿಯಲ್ಲಿ ಸ್ಥಾನ ಪಡೆದಿರುವುದು. ಬೆಂಗಳೂರಿನ ಐಐಎಂ ಸೇರಿದಂತೆ ಮೂರು ಐಐಎಂಗಳು ಟಾಪ್ 50 ಪಟ್ಟಿಯಲ್ಲಿವೆ. ಟಾಪ್ 100ನಲ್ಲಿ 18 ಭಾರತೀಯ ವಿಶ್ವವಿದ್ಯಾಲಯಗಳು ಸ್ಥಾನ ಪಡೆದಿವೆ.

ಜವಾಹರಲಾಲ್ ಯೂನಿವರ್ಸಿಟಿ (JNU) ಡೆವಲಪ್ಮೆಂಟ್ ಸ್ಟಡೀಸ್ ಕೋರ್ಸ್​ಗಳಿಗೆ ಜಾಗತಿಕವಾಗಿ 20ನೆ ಸ್ಥಾನ ಪಡೆದಿರುವುದು ವಿಶೇಷ. ಇನ್ನು, ಅಹ್ಮದಾಬಾದ್​ನ ಇಂಡಿಯನ್ ಇನ್ಸ್​ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಸಂಸ್ಥೆ ಬಿಸಿನೆಸ್ ಅಂಡ್ ಮ್ಯಾನೇಜ್ಮೆಂಟ್ ಸ್ಟಡೀಸ್ ಕೋರ್ಸ್​ನಲ್ಲಿ 22ನೇ ರ‍್ಯಾಂಕಿಂಗ್ ಪಡೆದಿದೆ.

ಸವೀತಾ ಇನ್ಸ್​ಟಿಟ್ಯೂಟ್ ಆಫ್ ಮೆಡಿಕಲ್ ಅಂಡ್ ಟೆಕ್ನಿಕಲ್ ಸೈನ್ಸಸ್ ಯೂನಿವರ್ಸಿಟಿಯು ಡೆಂಟಿಸ್ಟ್ರಿಯಲ್ಲಿ ಜಾಗತಿಕವಾಗಿ 24ನೇ ಸ್ಥಾನ ಪಡೆದಿದೆ. ಐಐಟಿ ಮದ್ರಾಸ್ ಏರೋನಾಟಿಕಲ್, ಮೆಕ್ಯಾನಿಕಲ್ ಮತ್ತು ಮ್ಯಾನುಫ್ಯಾಕ್ಚರಿಂಗ್ ಎಂಜಿನಿಯರಿಂಗ್​ನಲ್ಲಿ 44ನೇ ಸ್ಥಾನ ಪಡೆದಿದೆ. ಗಣಿ ಎಂಜಿನಿಯರಿಂಗ್ ಕೋರ್ಸ್​ನಲ್ಲಿ 25ನೇ ರ‍್ಯಾಂಕಿಂಗ್ ಪಡೆದಿದೆ.

ಇದನ್ನೂ ಓದಿ: ರಾಜಕೀಯ ಚಾಣಕ್ಯ ಅಮಿತ್ ಶಾ ಹೂಡಿಕೆಯಲ್ಲೂ ಚಾಣಕ್ಯನೇ; 250ಕ್ಕೂ ಹೆಚ್ಚು ಷೇರುಗಳ ಆಯ್ಕೆಗಳಲ್ಲಿ ಬುದ್ಧಿವಂತಿಕೆ ನೋಡಿ

ಪ್ರಧಾನಿ ನರೇಂದ್ರ ಮೋದಿ ಅವರ ದೃಷ್ಟಿಕೋನ ಶ್ಲಾಘಿಸಿದ ಕ್ಯುಎಸ್ ಅಧ್ಯಕ್ಷರು

ಕ್ಯುಎಸ್ ಕ್ವಾಕ್ವಾರೆಲಿ ಸೈಮಂಡಸ್ಸ್ (QS Quacquarelli Symonds) ಸಂಸ್ಥೆಯ ಅಧ್ಯಕ್ಷ ನುಂಜಿಯೋ ಕ್ವಾಕ್ವಾರೆಲಿ (Nunzio Quacquarelli) ಅವರು ತಮ್ಮ ಲಿಂಕ್ಡ್ ಇನ್ ಪೋಸ್ಟ್​ನಲ್ಲಿ ಕ್ಯುಸ್ ವರ್ಲ್ಡ್ ಯೂನಿವರ್ಸಿಟಿ ರ‍್ಯಾಂಕಿಂಗ್​ನಲ್ಲಿ ಭಾರತದ ಸಾಧನೆ ಬಗ್ಗೆ ಮಾಹಿತಿ ನೀಡಿದ್ದಾರೆ.

ಜಿ20 ದೇಶಗಳ ಪೈಕಿ ಭಾರತದ ಯೂನಿವರ್ಸಿಟಿಗಳ ಸಾಧನೆಯೇ ಹೆಚ್ಚು ಉತ್ತಮಗೊಂಡಿರುವುದು. 2017ರಿಂದ 2022ರ ಅವಧಿಯಲ್ಲಿ ಭಾರತದ ಯೂನಿವರ್ಸಿಟಿಗಳ ರಿಸರ್ಚ್ ಔಟ್​ಪುಟ್ ಶೇ. 54ರಷ್ಟು ಹೆಚ್ಚಾಗಿದೆ ಎಂದು ನುಂಜಿಯೋ ಹೇಳಿದ್ದಾರೆ.

ಇದನ್ನೂ ಓದಿ: ರಾಜಕೀಯ ಸಂಘರ್ಷಕ್ಕೆ ಕಾರಣವಾದ ಸಂದೇಶ್‌ಖಾಲಿ, ನ್ಯಾಯಕ್ಕಾಗಿ ಮಹಿಳೆಯರ ಹೋರಾಟ; ಏನಿದು ಪ್ರಕರಣ?

ಇದೇ ವೇಳೆ ನುಂಜಿಯೋ ಅವರು ಪ್ರಧಾನಿ ನರೇಂದ್ರ ಮೋದಿ ಭೇಟಿ ವಿಚಾರವನ್ನೂ ಹಂಚಿಕೊಂಡಿದ್ದು ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಪ್ರಶಂಸಿಸಿದ್ದಾರೆ. ಭಾರತೀಯ ಶಿಕ್ಷಣ ವ್ಯವಸ್ಥೆಯಲ್ಲಿ ಕ್ರಾಂತಿ ತರಲು ಪ್ರಧಾನಿ ಮೋದಿ ಬಯಸಿರುವುದು ಅವರನ್ನು ಭೇಟಿ ಮಾಡಿದಾಗ ಗೊತ್ತಾಯಿತು ಎಂದು ನುಂಜಿಯೋ ಕ್ವಾಕ್ವಾರೆಲಿ ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!