AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಕ್ವಾಡ್​ ನಾಯಕರ ವರ್ಚ್ಯುವಲ್​ ಸಭೆ; ಪ್ರಧಾನಿ ನರೇಂದ್ರ ಮೋದಿ ಭಾಗಿ

ಕ್ವಾಡ್​​ನ ಉಳಿದ ಮೂರು ರಾಷ್ಟ್ರಗಳಾದ ಆಸ್ಟ್ರೇಲಿಯಾ, ಜಪಾನ್​ ಮತ್ತು ಯುಎಸ್​ಗಳು ಉಕ್ರೇನ್​ಗೆ ಬೆಂಬಲ ವ್ಯಕ್ತಪಡಿಸಿದ್ದರೆ, ಭಾರತ ರಷ್ಯಾ-ಉಕ್ರೇನ್​ ಯುದ್ಧದ ವಿಚಾರದಲ್ಲಿ ತಟಸ್ಥವಾಗಿದೆ. ಶಾಂತಿಯಿಂದ ಸಮಸ್ಯೆ ಪರಿಹಾರ ಮಾಡಿಕೊಳ್ಳಿ ಎಂದು ಹೇಳುತ್ತಿದೆ.

ಇಂದು ಕ್ವಾಡ್​ ನಾಯಕರ ವರ್ಚ್ಯುವಲ್​ ಸಭೆ;  ಪ್ರಧಾನಿ ನರೇಂದ್ರ ಮೋದಿ ಭಾಗಿ
ಕ್ವಾಡ್​ ನಾಯಕರು
TV9 Web
| Edited By: |

Updated on:Mar 03, 2022 | 1:07 PM

Share

ದೆಹಲಿ: ಇಂದು ಕ್ವಾಡ್​ ರಾಷ್ಟ್ರ ನಾಯಕರು ವರ್ಚ್ಯುವಲ್​ ಸಭೆ (Quad Leaders) ನಡೆಸಲಿದ್ದು, ಪ್ರಧಾನಿ ನರೇಂದ್ರ ಮೋದಿ, ಅಮೆರಿಕ ಅಧ್ಯಕ್ಷ ಜೋ ಬೈಡನ್​, ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್​ ಮಾರಿಸನ್​, ಜಪಾನ್​ ಪ್ರಧಾನಿ ಫೂಮಿಯೋ ಕಿಶಿಡಾ ಪಾಲ್ಗೊಳ್ಳಲಿದ್ದಾರೆ. ಕ್ವಾಡ್​ ನಾಯಕರು 2021ರ ಸೆಪ್ಟೆಂಬರ್​​ನಲ್ಲಿ ವಾಷಿಂಗ್ಟನ್​ ಡಿಸಿಯಲ್ಲಿ ಭೇಟಿಯಾಗಿದ್ದರು. ಅದಾದ ಬಳಿಕ  ಇಂದು ವರ್ಚ್ಯುವಲ್​ ಆಗಿ ಸಭೆ ಸೇರಲಿದ್ದಾರೆ ಎಂದು ಕೇಂದ್ರ ವಿದೇಶಾಂಗ ಇಲಾಖೆ ಹೇಳಿಕೆ ಬಿಡುಗಡೆ ಮಾಡಿದೆ. ಹಾಗೇ, ಇಂದಿನ ವರ್ಚ್ಯುವಲ್​ ಶೃಂಗಸಭೆಯಲ್ಲಿ ಇಂಡೋ-ಪೆಸಿಫಿಕ್​​ ಬೆಳವಣಿಗೆಯ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲಿದ್ದಾರೆ ಎಂದೂ ತಿಳಿಸಿದೆ. ರಷ್ಯಾ-ಉಕ್ರೇನ್​ ಮಧ್ಯೆ ನಡೆಯುತ್ತಿರುವ ಕ್ವಾಡ್​ ನಾಯಕರ ವರ್ಚ್ಯುವಲ್​ ಸಭೆ ಮಹತ್ವ ಪಡೆದುಕೊಂಡಿದೆ.

ಸದ್ಯ ನಡೆಯುತ್ತಿರುವ ರಷ್ಯಾ-ಉಕ್ರೇನ್​ ಯುದ್ಧದ ವಿಚಾರದಲ್ಲಿ ಭಾರತ ತಟಸ್ಥ ನೀತಿ ಅನುಸರಿಸಿದೆ. ರಷ್ಯಾ ವಿರುದ್ಧ ವಿಶ್ವಸಂಸ್ಥೆಯಲ್ಲಿ ತೆಗೆದುಕೊಳ್ಳಲಾದ ನಿರ್ಣಯಕ್ಕೆ ಮತದಾನದಿಂದ ದೂರವೇ ಉಳಿದಿದೆ. ಅಂದರೆ ಪರವಾಗಿಯೂ ಮತ ಹಾಕಲಿಲ್ಲ. ವಿರುದ್ಧವಾಗಿಯೂ ಮತ ಹಾಕಲಿಲ್ಲ. ಆದರೆ ಕ್ವಾಡ್​​ನ ಉಳಿದ ಮೂರು ರಾಷ್ಟ್ರಗಳಾದ ಆಸ್ಟ್ರೇಲಿಯಾ, ಜಪಾನ್​ ಮತ್ತು ಯುಎಸ್​ಗಳು ಉಕ್ರೇನ್​ಗೆ ಬೆಂಬಲ ವ್ಯಕ್ತಪಡಿಸಿವೆ. ರಷ್ಯಾವನ್ನು ದುರ್ಬಲಗೊಳಿಸು ಯುಎಎಸ್ ಆ ದೇಶದ ಮೇಲೆ ಹಲವು ನಿರ್ಬಂಧಗಳನ್ನು ವಿಧಿಸಿದೆ.  ಜಪಾನ್​ ಕೂಡ ಇದೇ ನೀತಿ ಮುಂದುವರಿಸಿದ್ದು, ಆಸ್ಟ್ರೇಲಿಯಾವೂ ಸಹ ರಷ್ಯಾದ ಕ್ರಮವನ್ನು ತೀವ್ರವಾಗಿ ಖಂಡಿಸಿದೆ. ಆದರೆ ಭಾರತ ರಷ್ಯಾದೊಂದಿಗೆ ಉತ್ತಮ ಸ್ನೇಹವನ್ನು ಹೊಂದಿದೆ. ಹಾಗೇ, ಇನ್ನೊಂದೆಡೆ ರಷ್ಯಾ ವಿರುದ್ಧ ಪ್ರಬಲವಾಗಿ ನಿಂತಿರುವ ಯುಎಸ್ ಜತೆಗೂ ಒಳ್ಳೆಯ ಬಾಂಧವ್ಯ ಹೊಂದಿದೆ. ಈ ಎಲ್ಲ ಕಾರಣಗಳಿಂದ ರಷ್ಯಾ-ಉಕ್ರೇನ್​ ಯುದ್ಧದ ವಿಚಾರದಲ್ಲಿ ತುಂಬ ಜಾಣತನದಿಂದ ವರ್ತಿಸುತ್ತಿದೆ.

ಇದನ್ನೂ ಓದಿ: Video: ಸೊಯುಜ್​ ರಾಕೆಟ್ ಮೇಲಿದ್ದ ಭಾರತದ ಧ್ವಜವೊಂದನ್ನು ಹಾಗೇ ಬಿಟ್ಟು, ಉಳಿದ ಯುಎಸ್​, ಯುಕೆ ಧ್ವಜ ತೆಗೆದು ಹಾಕಿದ ರಷ್ಯಾ

Published On - 12:50 pm, Thu, 3 March 22

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್