AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಕ್ವಾಡ್​ ನಾಯಕರ ವರ್ಚ್ಯುವಲ್​ ಸಭೆ; ಪ್ರಧಾನಿ ನರೇಂದ್ರ ಮೋದಿ ಭಾಗಿ

ಕ್ವಾಡ್​​ನ ಉಳಿದ ಮೂರು ರಾಷ್ಟ್ರಗಳಾದ ಆಸ್ಟ್ರೇಲಿಯಾ, ಜಪಾನ್​ ಮತ್ತು ಯುಎಸ್​ಗಳು ಉಕ್ರೇನ್​ಗೆ ಬೆಂಬಲ ವ್ಯಕ್ತಪಡಿಸಿದ್ದರೆ, ಭಾರತ ರಷ್ಯಾ-ಉಕ್ರೇನ್​ ಯುದ್ಧದ ವಿಚಾರದಲ್ಲಿ ತಟಸ್ಥವಾಗಿದೆ. ಶಾಂತಿಯಿಂದ ಸಮಸ್ಯೆ ಪರಿಹಾರ ಮಾಡಿಕೊಳ್ಳಿ ಎಂದು ಹೇಳುತ್ತಿದೆ.

ಇಂದು ಕ್ವಾಡ್​ ನಾಯಕರ ವರ್ಚ್ಯುವಲ್​ ಸಭೆ;  ಪ್ರಧಾನಿ ನರೇಂದ್ರ ಮೋದಿ ಭಾಗಿ
ಕ್ವಾಡ್​ ನಾಯಕರು
TV9 Web
| Edited By: |

Updated on:Mar 03, 2022 | 1:07 PM

Share

ದೆಹಲಿ: ಇಂದು ಕ್ವಾಡ್​ ರಾಷ್ಟ್ರ ನಾಯಕರು ವರ್ಚ್ಯುವಲ್​ ಸಭೆ (Quad Leaders) ನಡೆಸಲಿದ್ದು, ಪ್ರಧಾನಿ ನರೇಂದ್ರ ಮೋದಿ, ಅಮೆರಿಕ ಅಧ್ಯಕ್ಷ ಜೋ ಬೈಡನ್​, ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್​ ಮಾರಿಸನ್​, ಜಪಾನ್​ ಪ್ರಧಾನಿ ಫೂಮಿಯೋ ಕಿಶಿಡಾ ಪಾಲ್ಗೊಳ್ಳಲಿದ್ದಾರೆ. ಕ್ವಾಡ್​ ನಾಯಕರು 2021ರ ಸೆಪ್ಟೆಂಬರ್​​ನಲ್ಲಿ ವಾಷಿಂಗ್ಟನ್​ ಡಿಸಿಯಲ್ಲಿ ಭೇಟಿಯಾಗಿದ್ದರು. ಅದಾದ ಬಳಿಕ  ಇಂದು ವರ್ಚ್ಯುವಲ್​ ಆಗಿ ಸಭೆ ಸೇರಲಿದ್ದಾರೆ ಎಂದು ಕೇಂದ್ರ ವಿದೇಶಾಂಗ ಇಲಾಖೆ ಹೇಳಿಕೆ ಬಿಡುಗಡೆ ಮಾಡಿದೆ. ಹಾಗೇ, ಇಂದಿನ ವರ್ಚ್ಯುವಲ್​ ಶೃಂಗಸಭೆಯಲ್ಲಿ ಇಂಡೋ-ಪೆಸಿಫಿಕ್​​ ಬೆಳವಣಿಗೆಯ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲಿದ್ದಾರೆ ಎಂದೂ ತಿಳಿಸಿದೆ. ರಷ್ಯಾ-ಉಕ್ರೇನ್​ ಮಧ್ಯೆ ನಡೆಯುತ್ತಿರುವ ಕ್ವಾಡ್​ ನಾಯಕರ ವರ್ಚ್ಯುವಲ್​ ಸಭೆ ಮಹತ್ವ ಪಡೆದುಕೊಂಡಿದೆ.

ಸದ್ಯ ನಡೆಯುತ್ತಿರುವ ರಷ್ಯಾ-ಉಕ್ರೇನ್​ ಯುದ್ಧದ ವಿಚಾರದಲ್ಲಿ ಭಾರತ ತಟಸ್ಥ ನೀತಿ ಅನುಸರಿಸಿದೆ. ರಷ್ಯಾ ವಿರುದ್ಧ ವಿಶ್ವಸಂಸ್ಥೆಯಲ್ಲಿ ತೆಗೆದುಕೊಳ್ಳಲಾದ ನಿರ್ಣಯಕ್ಕೆ ಮತದಾನದಿಂದ ದೂರವೇ ಉಳಿದಿದೆ. ಅಂದರೆ ಪರವಾಗಿಯೂ ಮತ ಹಾಕಲಿಲ್ಲ. ವಿರುದ್ಧವಾಗಿಯೂ ಮತ ಹಾಕಲಿಲ್ಲ. ಆದರೆ ಕ್ವಾಡ್​​ನ ಉಳಿದ ಮೂರು ರಾಷ್ಟ್ರಗಳಾದ ಆಸ್ಟ್ರೇಲಿಯಾ, ಜಪಾನ್​ ಮತ್ತು ಯುಎಸ್​ಗಳು ಉಕ್ರೇನ್​ಗೆ ಬೆಂಬಲ ವ್ಯಕ್ತಪಡಿಸಿವೆ. ರಷ್ಯಾವನ್ನು ದುರ್ಬಲಗೊಳಿಸು ಯುಎಎಸ್ ಆ ದೇಶದ ಮೇಲೆ ಹಲವು ನಿರ್ಬಂಧಗಳನ್ನು ವಿಧಿಸಿದೆ.  ಜಪಾನ್​ ಕೂಡ ಇದೇ ನೀತಿ ಮುಂದುವರಿಸಿದ್ದು, ಆಸ್ಟ್ರೇಲಿಯಾವೂ ಸಹ ರಷ್ಯಾದ ಕ್ರಮವನ್ನು ತೀವ್ರವಾಗಿ ಖಂಡಿಸಿದೆ. ಆದರೆ ಭಾರತ ರಷ್ಯಾದೊಂದಿಗೆ ಉತ್ತಮ ಸ್ನೇಹವನ್ನು ಹೊಂದಿದೆ. ಹಾಗೇ, ಇನ್ನೊಂದೆಡೆ ರಷ್ಯಾ ವಿರುದ್ಧ ಪ್ರಬಲವಾಗಿ ನಿಂತಿರುವ ಯುಎಸ್ ಜತೆಗೂ ಒಳ್ಳೆಯ ಬಾಂಧವ್ಯ ಹೊಂದಿದೆ. ಈ ಎಲ್ಲ ಕಾರಣಗಳಿಂದ ರಷ್ಯಾ-ಉಕ್ರೇನ್​ ಯುದ್ಧದ ವಿಚಾರದಲ್ಲಿ ತುಂಬ ಜಾಣತನದಿಂದ ವರ್ತಿಸುತ್ತಿದೆ.

ಇದನ್ನೂ ಓದಿ: Video: ಸೊಯುಜ್​ ರಾಕೆಟ್ ಮೇಲಿದ್ದ ಭಾರತದ ಧ್ವಜವೊಂದನ್ನು ಹಾಗೇ ಬಿಟ್ಟು, ಉಳಿದ ಯುಎಸ್​, ಯುಕೆ ಧ್ವಜ ತೆಗೆದು ಹಾಕಿದ ರಷ್ಯಾ

Published On - 12:50 pm, Thu, 3 March 22

ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ
ಮುಡಾ ಈಗ MDA ಆಗಿ ಬದಲಾದರೂ ಇನ್ನೂ ನಿಲ್ಲದ ಅಕ್ರಮ!
ಮುಡಾ ಈಗ MDA ಆಗಿ ಬದಲಾದರೂ ಇನ್ನೂ ನಿಲ್ಲದ ಅಕ್ರಮ!
ಸಿಎಂ ಕುರ್ಚಿ ಕದನ: ಡಿಕೆಶಿಗೆ ಇನ್ನೂ ಸಿಕ್ಕಿಲ್ವಾ ಸ್ವಷ್ಟ ಚಿತ್ರಣ?
ಸಿಎಂ ಕುರ್ಚಿ ಕದನ: ಡಿಕೆಶಿಗೆ ಇನ್ನೂ ಸಿಕ್ಕಿಲ್ವಾ ಸ್ವಷ್ಟ ಚಿತ್ರಣ?