AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಕ್ವಾಡ್​ ನಾಯಕರ ವರ್ಚ್ಯುವಲ್​ ಸಭೆ; ಪ್ರಧಾನಿ ನರೇಂದ್ರ ಮೋದಿ ಭಾಗಿ

ಕ್ವಾಡ್​​ನ ಉಳಿದ ಮೂರು ರಾಷ್ಟ್ರಗಳಾದ ಆಸ್ಟ್ರೇಲಿಯಾ, ಜಪಾನ್​ ಮತ್ತು ಯುಎಸ್​ಗಳು ಉಕ್ರೇನ್​ಗೆ ಬೆಂಬಲ ವ್ಯಕ್ತಪಡಿಸಿದ್ದರೆ, ಭಾರತ ರಷ್ಯಾ-ಉಕ್ರೇನ್​ ಯುದ್ಧದ ವಿಚಾರದಲ್ಲಿ ತಟಸ್ಥವಾಗಿದೆ. ಶಾಂತಿಯಿಂದ ಸಮಸ್ಯೆ ಪರಿಹಾರ ಮಾಡಿಕೊಳ್ಳಿ ಎಂದು ಹೇಳುತ್ತಿದೆ.

ಇಂದು ಕ್ವಾಡ್​ ನಾಯಕರ ವರ್ಚ್ಯುವಲ್​ ಸಭೆ;  ಪ್ರಧಾನಿ ನರೇಂದ್ರ ಮೋದಿ ಭಾಗಿ
ಕ್ವಾಡ್​ ನಾಯಕರು
TV9 Web
| Edited By: |

Updated on:Mar 03, 2022 | 1:07 PM

Share

ದೆಹಲಿ: ಇಂದು ಕ್ವಾಡ್​ ರಾಷ್ಟ್ರ ನಾಯಕರು ವರ್ಚ್ಯುವಲ್​ ಸಭೆ (Quad Leaders) ನಡೆಸಲಿದ್ದು, ಪ್ರಧಾನಿ ನರೇಂದ್ರ ಮೋದಿ, ಅಮೆರಿಕ ಅಧ್ಯಕ್ಷ ಜೋ ಬೈಡನ್​, ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್​ ಮಾರಿಸನ್​, ಜಪಾನ್​ ಪ್ರಧಾನಿ ಫೂಮಿಯೋ ಕಿಶಿಡಾ ಪಾಲ್ಗೊಳ್ಳಲಿದ್ದಾರೆ. ಕ್ವಾಡ್​ ನಾಯಕರು 2021ರ ಸೆಪ್ಟೆಂಬರ್​​ನಲ್ಲಿ ವಾಷಿಂಗ್ಟನ್​ ಡಿಸಿಯಲ್ಲಿ ಭೇಟಿಯಾಗಿದ್ದರು. ಅದಾದ ಬಳಿಕ  ಇಂದು ವರ್ಚ್ಯುವಲ್​ ಆಗಿ ಸಭೆ ಸೇರಲಿದ್ದಾರೆ ಎಂದು ಕೇಂದ್ರ ವಿದೇಶಾಂಗ ಇಲಾಖೆ ಹೇಳಿಕೆ ಬಿಡುಗಡೆ ಮಾಡಿದೆ. ಹಾಗೇ, ಇಂದಿನ ವರ್ಚ್ಯುವಲ್​ ಶೃಂಗಸಭೆಯಲ್ಲಿ ಇಂಡೋ-ಪೆಸಿಫಿಕ್​​ ಬೆಳವಣಿಗೆಯ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲಿದ್ದಾರೆ ಎಂದೂ ತಿಳಿಸಿದೆ. ರಷ್ಯಾ-ಉಕ್ರೇನ್​ ಮಧ್ಯೆ ನಡೆಯುತ್ತಿರುವ ಕ್ವಾಡ್​ ನಾಯಕರ ವರ್ಚ್ಯುವಲ್​ ಸಭೆ ಮಹತ್ವ ಪಡೆದುಕೊಂಡಿದೆ.

ಸದ್ಯ ನಡೆಯುತ್ತಿರುವ ರಷ್ಯಾ-ಉಕ್ರೇನ್​ ಯುದ್ಧದ ವಿಚಾರದಲ್ಲಿ ಭಾರತ ತಟಸ್ಥ ನೀತಿ ಅನುಸರಿಸಿದೆ. ರಷ್ಯಾ ವಿರುದ್ಧ ವಿಶ್ವಸಂಸ್ಥೆಯಲ್ಲಿ ತೆಗೆದುಕೊಳ್ಳಲಾದ ನಿರ್ಣಯಕ್ಕೆ ಮತದಾನದಿಂದ ದೂರವೇ ಉಳಿದಿದೆ. ಅಂದರೆ ಪರವಾಗಿಯೂ ಮತ ಹಾಕಲಿಲ್ಲ. ವಿರುದ್ಧವಾಗಿಯೂ ಮತ ಹಾಕಲಿಲ್ಲ. ಆದರೆ ಕ್ವಾಡ್​​ನ ಉಳಿದ ಮೂರು ರಾಷ್ಟ್ರಗಳಾದ ಆಸ್ಟ್ರೇಲಿಯಾ, ಜಪಾನ್​ ಮತ್ತು ಯುಎಸ್​ಗಳು ಉಕ್ರೇನ್​ಗೆ ಬೆಂಬಲ ವ್ಯಕ್ತಪಡಿಸಿವೆ. ರಷ್ಯಾವನ್ನು ದುರ್ಬಲಗೊಳಿಸು ಯುಎಎಸ್ ಆ ದೇಶದ ಮೇಲೆ ಹಲವು ನಿರ್ಬಂಧಗಳನ್ನು ವಿಧಿಸಿದೆ.  ಜಪಾನ್​ ಕೂಡ ಇದೇ ನೀತಿ ಮುಂದುವರಿಸಿದ್ದು, ಆಸ್ಟ್ರೇಲಿಯಾವೂ ಸಹ ರಷ್ಯಾದ ಕ್ರಮವನ್ನು ತೀವ್ರವಾಗಿ ಖಂಡಿಸಿದೆ. ಆದರೆ ಭಾರತ ರಷ್ಯಾದೊಂದಿಗೆ ಉತ್ತಮ ಸ್ನೇಹವನ್ನು ಹೊಂದಿದೆ. ಹಾಗೇ, ಇನ್ನೊಂದೆಡೆ ರಷ್ಯಾ ವಿರುದ್ಧ ಪ್ರಬಲವಾಗಿ ನಿಂತಿರುವ ಯುಎಸ್ ಜತೆಗೂ ಒಳ್ಳೆಯ ಬಾಂಧವ್ಯ ಹೊಂದಿದೆ. ಈ ಎಲ್ಲ ಕಾರಣಗಳಿಂದ ರಷ್ಯಾ-ಉಕ್ರೇನ್​ ಯುದ್ಧದ ವಿಚಾರದಲ್ಲಿ ತುಂಬ ಜಾಣತನದಿಂದ ವರ್ತಿಸುತ್ತಿದೆ.

ಇದನ್ನೂ ಓದಿ: Video: ಸೊಯುಜ್​ ರಾಕೆಟ್ ಮೇಲಿದ್ದ ಭಾರತದ ಧ್ವಜವೊಂದನ್ನು ಹಾಗೇ ಬಿಟ್ಟು, ಉಳಿದ ಯುಎಸ್​, ಯುಕೆ ಧ್ವಜ ತೆಗೆದು ಹಾಕಿದ ರಷ್ಯಾ

Published On - 12:50 pm, Thu, 3 March 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?