AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಕ್ವಾಡ್​ ನಾಯಕರ ವರ್ಚ್ಯುವಲ್​ ಸಭೆ; ಪ್ರಧಾನಿ ನರೇಂದ್ರ ಮೋದಿ ಭಾಗಿ

ಕ್ವಾಡ್​​ನ ಉಳಿದ ಮೂರು ರಾಷ್ಟ್ರಗಳಾದ ಆಸ್ಟ್ರೇಲಿಯಾ, ಜಪಾನ್​ ಮತ್ತು ಯುಎಸ್​ಗಳು ಉಕ್ರೇನ್​ಗೆ ಬೆಂಬಲ ವ್ಯಕ್ತಪಡಿಸಿದ್ದರೆ, ಭಾರತ ರಷ್ಯಾ-ಉಕ್ರೇನ್​ ಯುದ್ಧದ ವಿಚಾರದಲ್ಲಿ ತಟಸ್ಥವಾಗಿದೆ. ಶಾಂತಿಯಿಂದ ಸಮಸ್ಯೆ ಪರಿಹಾರ ಮಾಡಿಕೊಳ್ಳಿ ಎಂದು ಹೇಳುತ್ತಿದೆ.

ಇಂದು ಕ್ವಾಡ್​ ನಾಯಕರ ವರ್ಚ್ಯುವಲ್​ ಸಭೆ;  ಪ್ರಧಾನಿ ನರೇಂದ್ರ ಮೋದಿ ಭಾಗಿ
ಕ್ವಾಡ್​ ನಾಯಕರು
TV9 Web
| Edited By: |

Updated on:Mar 03, 2022 | 1:07 PM

Share

ದೆಹಲಿ: ಇಂದು ಕ್ವಾಡ್​ ರಾಷ್ಟ್ರ ನಾಯಕರು ವರ್ಚ್ಯುವಲ್​ ಸಭೆ (Quad Leaders) ನಡೆಸಲಿದ್ದು, ಪ್ರಧಾನಿ ನರೇಂದ್ರ ಮೋದಿ, ಅಮೆರಿಕ ಅಧ್ಯಕ್ಷ ಜೋ ಬೈಡನ್​, ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್​ ಮಾರಿಸನ್​, ಜಪಾನ್​ ಪ್ರಧಾನಿ ಫೂಮಿಯೋ ಕಿಶಿಡಾ ಪಾಲ್ಗೊಳ್ಳಲಿದ್ದಾರೆ. ಕ್ವಾಡ್​ ನಾಯಕರು 2021ರ ಸೆಪ್ಟೆಂಬರ್​​ನಲ್ಲಿ ವಾಷಿಂಗ್ಟನ್​ ಡಿಸಿಯಲ್ಲಿ ಭೇಟಿಯಾಗಿದ್ದರು. ಅದಾದ ಬಳಿಕ  ಇಂದು ವರ್ಚ್ಯುವಲ್​ ಆಗಿ ಸಭೆ ಸೇರಲಿದ್ದಾರೆ ಎಂದು ಕೇಂದ್ರ ವಿದೇಶಾಂಗ ಇಲಾಖೆ ಹೇಳಿಕೆ ಬಿಡುಗಡೆ ಮಾಡಿದೆ. ಹಾಗೇ, ಇಂದಿನ ವರ್ಚ್ಯುವಲ್​ ಶೃಂಗಸಭೆಯಲ್ಲಿ ಇಂಡೋ-ಪೆಸಿಫಿಕ್​​ ಬೆಳವಣಿಗೆಯ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲಿದ್ದಾರೆ ಎಂದೂ ತಿಳಿಸಿದೆ. ರಷ್ಯಾ-ಉಕ್ರೇನ್​ ಮಧ್ಯೆ ನಡೆಯುತ್ತಿರುವ ಕ್ವಾಡ್​ ನಾಯಕರ ವರ್ಚ್ಯುವಲ್​ ಸಭೆ ಮಹತ್ವ ಪಡೆದುಕೊಂಡಿದೆ.

ಸದ್ಯ ನಡೆಯುತ್ತಿರುವ ರಷ್ಯಾ-ಉಕ್ರೇನ್​ ಯುದ್ಧದ ವಿಚಾರದಲ್ಲಿ ಭಾರತ ತಟಸ್ಥ ನೀತಿ ಅನುಸರಿಸಿದೆ. ರಷ್ಯಾ ವಿರುದ್ಧ ವಿಶ್ವಸಂಸ್ಥೆಯಲ್ಲಿ ತೆಗೆದುಕೊಳ್ಳಲಾದ ನಿರ್ಣಯಕ್ಕೆ ಮತದಾನದಿಂದ ದೂರವೇ ಉಳಿದಿದೆ. ಅಂದರೆ ಪರವಾಗಿಯೂ ಮತ ಹಾಕಲಿಲ್ಲ. ವಿರುದ್ಧವಾಗಿಯೂ ಮತ ಹಾಕಲಿಲ್ಲ. ಆದರೆ ಕ್ವಾಡ್​​ನ ಉಳಿದ ಮೂರು ರಾಷ್ಟ್ರಗಳಾದ ಆಸ್ಟ್ರೇಲಿಯಾ, ಜಪಾನ್​ ಮತ್ತು ಯುಎಸ್​ಗಳು ಉಕ್ರೇನ್​ಗೆ ಬೆಂಬಲ ವ್ಯಕ್ತಪಡಿಸಿವೆ. ರಷ್ಯಾವನ್ನು ದುರ್ಬಲಗೊಳಿಸು ಯುಎಎಸ್ ಆ ದೇಶದ ಮೇಲೆ ಹಲವು ನಿರ್ಬಂಧಗಳನ್ನು ವಿಧಿಸಿದೆ.  ಜಪಾನ್​ ಕೂಡ ಇದೇ ನೀತಿ ಮುಂದುವರಿಸಿದ್ದು, ಆಸ್ಟ್ರೇಲಿಯಾವೂ ಸಹ ರಷ್ಯಾದ ಕ್ರಮವನ್ನು ತೀವ್ರವಾಗಿ ಖಂಡಿಸಿದೆ. ಆದರೆ ಭಾರತ ರಷ್ಯಾದೊಂದಿಗೆ ಉತ್ತಮ ಸ್ನೇಹವನ್ನು ಹೊಂದಿದೆ. ಹಾಗೇ, ಇನ್ನೊಂದೆಡೆ ರಷ್ಯಾ ವಿರುದ್ಧ ಪ್ರಬಲವಾಗಿ ನಿಂತಿರುವ ಯುಎಸ್ ಜತೆಗೂ ಒಳ್ಳೆಯ ಬಾಂಧವ್ಯ ಹೊಂದಿದೆ. ಈ ಎಲ್ಲ ಕಾರಣಗಳಿಂದ ರಷ್ಯಾ-ಉಕ್ರೇನ್​ ಯುದ್ಧದ ವಿಚಾರದಲ್ಲಿ ತುಂಬ ಜಾಣತನದಿಂದ ವರ್ತಿಸುತ್ತಿದೆ.

ಇದನ್ನೂ ಓದಿ: Video: ಸೊಯುಜ್​ ರಾಕೆಟ್ ಮೇಲಿದ್ದ ಭಾರತದ ಧ್ವಜವೊಂದನ್ನು ಹಾಗೇ ಬಿಟ್ಟು, ಉಳಿದ ಯುಎಸ್​, ಯುಕೆ ಧ್ವಜ ತೆಗೆದು ಹಾಕಿದ ರಷ್ಯಾ

Published On - 12:50 pm, Thu, 3 March 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ