AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿಯ ಜೊತೆ ಜಗಳ.. ಆತ್ಮಹತ್ಯೆ ಮಾಡಿಕೊಂಡ ನಾಂಪಲ್ಲಿ ಕೋರ್ಟ್ ನ್ಯಾಯಾಧೀಶ!

ಕ್ಲಿಷ್ಟಕರ ಪ್ರಕರಣಗಳ ತೀರ್ಪು ನೀಡಿದ್ದ ನ್ಯಾಯಾಧೀಶರು ಸ್ವತಃ ತಮ್ಮ ಜೀವನದ ಪ್ರಮುಖ ಸಮಸ್ಯೆಯನ್ನು ಪರಿಹರಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ. ಅವರು ಸ್ವತಃ ತಪ್ಪು ತೀರ್ಪಿಗೆ ಬಲಿಯಾಗಿದ್ದಾರೆ. ಕ್ಷುಲ್ಲಕ ಜಗಳಕ್ಕೆ ಸ್ವತಃ ಮರಣದಂಡನೆ ವಿಧಿಸಿಕೊಂಡಿದ್ದಾರೆ. ಕೌಟುಂಬಿಕ ಕಲಹದಿಂದ ನ್ಯಾಯಾಲಯದ ನ್ಯಾಯಾಧೀಶರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್ ನ ನಾಂಪಲ್ಲಿಯಲ್ಲಿ ನಿನ್ನೆ ಭಾನುವಾರ ನಡೆದಿದೆ.

ಪತ್ನಿಯ ಜೊತೆ ಜಗಳ.. ಆತ್ಮಹತ್ಯೆ ಮಾಡಿಕೊಂಡ ನಾಂಪಲ್ಲಿ ಕೋರ್ಟ್ ನ್ಯಾಯಾಧೀಶ!
ಆತ್ಮಹತ್ಯೆ ಮಾಡಿಕೊಂಡ ನಾಂಪಲ್ಲಿ ಕೋರ್ಟ್ ನ್ಯಾಯಾಧೀಶ!
Follow us
ಸಾಧು ಶ್ರೀನಾಥ್​
|

Updated on: Mar 25, 2024 | 12:30 PM

ಹೈದರಾಬಾದ್, ಮಾರ್ಚ್ 25: ಹಲವು ಕ್ಲಿಷ್ಟಕರ ಪ್ರಕರಣಗಳ ತೀರ್ಪು ನೀಡಿದ್ದ ನ್ಯಾಯಾಧೀಶರು ಸ್ವತಃ ತಮ್ಮ ಜೀವನದ ಪ್ರಮುಖ ಸಮಸ್ಯೆಯನ್ನು ಪರಿಹರಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ. ಅವರು ಸ್ವತಃ ತಪ್ಪು ತೀರ್ಪಿಗೆ ಬಲಿಯಾಗಿದ್ದಾರೆ. ಕ್ಷುಲ್ಲಕ ಜಗಳಕ್ಕೆ ಸ್ವತಃ ಮರಣದಂಡನೆ ವಿಧಿಸಿಕೊಂಡಿದ್ದಾರೆ. ಕೌಟುಂಬಿಕ ಕಲಹದಿಂದ ನ್ಯಾಯಾಲಯದ ನ್ಯಾಯಾಧೀಶರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್ ನ ನಾಂಪಲ್ಲಿಯಲ್ಲಿ ನಿನ್ನೆ ಭಾನುವಾರ (ಮಾ. 24) ನಡೆದಿದೆ.

ಹೈದರಾಬಾದ್‌ನ ಬಾಗ್ ಅಂಬರ್‌ಪೇಟ್‌ನ ಪೋಚಮ್ಮ ಬಸ್ತಿ ಶ್ರೀನಿಧಿ ರೆಸಿಡೆನ್ಸಿಯ ಫ್ಲಾಟ್ ನಂ. 402 ನಿವಾಸಿ ಮಣಿಕಂಠ (36) ನಾಂಪಲ್ಲಿ ನ್ಯಾಯಾಲಯದಲ್ಲಿ ಜುಡಿಷಿಯಲ್ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ (ಅಬಕಾರಿ) ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರು ಏಳು ವರ್ಷಗಳ ಹಿಂದೆ ಮಹೆಬೂಬ್‌ನಗರ ಜಿಲ್ಲೆಯ ಭೂತ್‌ಪುರ ಮಂಡಲ ಕೇಂದ್ರದ ಲಲಿತಾ ಅವರನ್ನು ವಿವಾಹವಾಗಿದ್ದರು.

ಈ ದಂಪತಿಗೆ ಒಬ್ಬ ಮಗನಿದ್ದಾನೆ. ಆದರೆ ಎರಡು ವರ್ಷಗಳ ಹಿಂದೆ ಪತಿ-ಪತ್ನಿಯ ನಡುವೆ ಜಗಳ ನಡೆಯುತ್ತಿತ್ತು. ಇದರಿಂದ ಪತಿ-ಪತ್ನಿ ಇಬ್ಬರೂ ಕಳೆದ ಕೆಲ ದಿನಗಳಿಂದ ಬೇರೆ ಬೇರೆಯಾಗಿ ವಾಸವಾಗಿದ್ದರು. ಮಣಿಕಂಠನ ಪತ್ನಿ ಲಲಿತಾ ಪುತ್ತಿಗೆಯಲ್ಲಿ ನೆಲೆಸಿದ್ದಾರೆ. ಮಣಿಕಂಠ ತನ್ನ ಫ್ಲ್ಯಾಟ್ ನಲ್ಲಿ ವಾಸವಾಗಿದ್ದಾನೆ.

ಇತ್ತೀಚೆಗೆ ಮಣಿಕಂಠನ ತಾಯಿ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ತಂದೆ ಆಸ್ಪತ್ರೆಯಲ್ಲಿಯೇ ಉಳಿದು ತಾಯಿಯನ್ನು ನೋಡಿಕೊಳ್ಳುತ್ತಾರೆ. ಭಾನುವಾರ ಮಧ್ಯಾಹ್ನ ಮಣಿಕಂಠ ಪತ್ನಿಗೆ ಕರೆ ಮಾಡಿ ಮತ್ತೆ ಜಗಳವಾಡಿದ್ದಾನೆ. ಇದರಿಂದ ತೀವ್ರ ಮನನೊಂದ ಮಣಿಕಂಠ ಅವರು ಕಠಿಣ ನಿರ್ಧಾರ ಕೈಗೊಂಡಿದ್ದಾರೆ.

Also Read: 1980ರಲ್ಲಿ ನಡೆದಿತ್ತು ಹತ್ಯೆ, ಒಂದು ಚ್ಯೂಯಿಂಗ್​ ಗಮ್​ನಿಂದ 40 ವರ್ಷದ ಬಳಿಕ ಸಿಕ್ಕಿಬಿದ್ದ ಕೊಲೆಗಾರ

ವೃತ್ತಿಪರವಾಗಿ, ಎರಡೂ ಕಡೆಯ ವಾದಗಳನ್ನು ಆಲಿಸಿ, ಯಾರದು ತಪ್ಪು, ಯಾರು ಸರಿ ಎಂದು ಅಳೆದು ತೂಗಿ ಪ್ರತಿವಾದಿಗೆ ಶಿಕ್ಷೆ ವಿಧಿಸುವ ನ್ಯಾಯಾಧೀಶರು… ಜೀವನದಲ್ಲಿ ತಪ್ಪು ನಿರ್ಧಾರ ತೆಗೆದುಕೊಂಡಿದ್ದಾರೆ. ಜಗಳದ ನಂತರ ಪತ್ನಿ ಮಲಗುವ ಕೋಣೆಗೆ ತೆರಳಿ ಫ್ಯಾನ್​ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಎಷ್ಟು ಹೊತ್ತಾದರೂ ಮಣಿಕಂಠ ಹೊರಗೆ ಬಾರದೆ ಬಾಗಿಲು ತಟ್ಟಿದರೂ ಯಾವುದೇ ಪ್ರತಿಕ್ರಿಯೆ ಬಾರದೆ ಇದ್ದುದರಿಂದ ಅನುಮಾನಗೊಂಡ ಕುಟುಂಬಸ್ಥರು ಬಾಗಿಲು ಒಡೆದು ನೋಡಿದಾಗ ಮಣಿಕಂಠ ಫ್ಯಾನ್‌ಗೆ ನೇಣು ಬಿಗಿದುಕೊಂಡಿರುವುದು ಕಂಡು ಬಂದಿದೆ. ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕಾಗಮಿಸಿ ಮಣಿಕಂಠನ ಶವವನ್ನು ಉಸ್ಮಾನಿಯಾಕ್ಕೆ ರವಾನಿಸಿದ್ದಾರೆ. ಮಣಿಕಂಠ ತಂದೆ ಶ್ರೀಶೈಲಂ ನೀಡಿದ ದೂರಿನ ಮೇರೆಗೆ ಅಂಬರ್ ಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಈ ವಿಷಯ ತಿಳಿದ ಸಹ ನ್ಯಾಯಾಧೀಶರು ಮತ್ತು ವಕೀಲರು ಉಸ್ಮಾನಿಯಾ ಶವಾಗಾರಕ್ಕೆ ಆಗಮಿಸಿ ತೀವ್ರ ಆಘಾತ ವ್ಯಕ್ತಪಡಿಸಿದರು. ಮಣಿಕಂಠ ಅವರ ಸಾವಿಗೆ ಸ್ಥಳೀಯರು ಮಮ್ಮಲಮರುಗಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ