AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುದ್ದೆಗೆ ಅರ್ಹತೆಯೇ ಮುಖ್ಯ: ಮೀಸಲಾತಿಯಲ್ಲಿ ಮಿಸ್ ಆದ್ರೂ ಜನರಲ್​ನಲ್ಲಿ ಪರಿಗಣನೆ

ಮೀಸಲಾತಿ ವರ್ಗದ ಸ್ಥಾನಗಳಲ್ಲಿ ಅಭ್ಯರ್ಥಿಗಳ ಲಭ್ಯತೆ ಇರದಿದ್ದಾಗ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಆ ಸ್ಥಾನಗಳನ್ನು ಹಂಚಬಹುದಾದರೆ, ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗಿಂತ ಹೆಚ್ಚು ಅರ್ಹತೆ ಹೊಂದಿರುವ ಮೀಸಲು ಅಭ್ಯರ್ಥಿಗಳನ್ನು ಏಕೆ ಪರಿಗಣಿಸಬಾರದು ಎಂದು ಕೋರ್ಟ್ ಪ್ರಶ್ನಿಸಿದೆ.

ಹುದ್ದೆಗೆ ಅರ್ಹತೆಯೇ ಮುಖ್ಯ: ಮೀಸಲಾತಿಯಲ್ಲಿ ಮಿಸ್ ಆದ್ರೂ ಜನರಲ್​ನಲ್ಲಿ ಪರಿಗಣನೆ
ಸುಪ್ರೀಂ ಕೋರ್ಟ್
guruganesh bhat
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Dec 20, 2020 | 4:22 PM

Share

ದೆಹಲಿ: ಸಾಮಾನ್ಯ ವರ್ಗಕ್ಕೆ ಕಾಯ್ದಿರಿಸಿದ ಹುದ್ದೆಗಳನ್ನು ವಿಶೇಷ ಸಂದರ್ಭಗಳಲ್ಲಿ ಮೀಸಲಾತಿ ವರ್ಗಕ್ಕೂ ನೀಡಬಹುದು ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಒಂದು ವೇಳೆ, ಮೀಸಲಾತಿ ವರ್ಗದ ಅಭ್ಯರ್ಥಿಯೋರ್ವ ಸಾಮಾನ್ಯ ವರ್ಗದ ಅಭ್ಯರ್ಥಿಗಿಂತ ಹೆಚ್ಚು ಅರ್ಹತೆ ಹೊಂದಿದ್ದರೆ ಸಾಮಾನ್ಯ ವರ್ಗದಲ್ಲೇ ಆತನಿಗೆ ಕೆಲಸ ನೀಡಬಹುದು ಎಂದು ತೀರ್ಪಿನಲ್ಲಿ ಉಲ್ಲೇಖಿಸಲಾಗಿದೆ.

ನ್ಯಾಯಾಧೀಶರಾದ ಯು.ಯು.ಲಲಿತ್, ರವೀಂದ್ರ ಭಟ್, ಹೃಷಿಕೇಶ್ ರಾಯ್ ಅವರಿದ್ದ ತ್ರಿಸದಸ್ಯ ಪೀಠ ಈ ತೀರ್ಪು ನೀಡಿದೆ. ಉತ್ತರ ಪ್ರದೇಶ ಪೊಲೀಸ್ ಕಾನ್​ಸ್ಟೆಬಲ್ ಹುದ್ದೆಗೆ ಒಬಿಸಿ ಮಹಿಳೆ ಮತ್ತು ಪರಿಶಿಷ್ಟ ಜಾತಿ ಮಹಿಳೆ ಮೀಸಲಾತಿಯಡಿ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳ ಮನವಿ ಆಲಿಸಿದ ನ್ಯಾಯಾಲಯ ಈ ಮಹತ್ವದ ತೀರ್ಪು ನೀಡಿದೆ.

ಏನಿದು ಪ್ರಕರಣ? ಸಾಮಾನ್ಯ ಮಹಿಳೆ ವರ್ಗದ ಅಭ್ಯರ್ಥಿಯೋರ್ವರು 274.8928 ಅಂಕಗಳನ್ನು ಗಳಿಸಿ ಉದ್ಯೋಗ ಪಡೆದಿದ್ದರು. ಆದರೆ, ಒಬಿಸಿ ಮಹಿಳೆ ವರ್ಗದ 21 ಅಭ್ಯರ್ಥಿಗಳು ಇದಕ್ಕಿಂತಲೂ ಹೆಚ್ಚು ಅಂಕ ಪಡೆದೂ ಆಯ್ಕೆಯಾಗಿರಲಿಲ್ಲ. ಇದು ಉತ್ತರ ಪ್ರದೇಶ ಸರ್ಕಾರ ಮೀಸಲಾತಿ ನಿಯಮಗಳನ್ನು ಉಲ್ಲಂಘಿಸಿದ ಸ್ಪಷ್ಟ ನಿದರ್ಶನ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

274.8928 ಕ್ಕಿಂತ ಹೆಚ್ಚು ಅಂಕ ಪಡೆದ ಓಬಿಸಿ ಮಹಿಳಾ ವರ್ಗದ ಅಭ್ಯರ್ಥಿಗಳಿಗೆ ಈ ಪ್ರಕರಣದಲ್ಲಿ ಕಾನ್​ಸ್ಟೆಬಲ್ ಹುದ್ದೆ ನೀಡಬೇಕು ಎಂದು ನ್ಯಾಯಾಲಯ ಉತ್ತರ ಪ್ರದೇಶ ಸರ್ಕಾರಕ್ಕೆ ಸೂಚಿಸಿತು. ಅಲ್ಲದೇ, ಈ ತೀರ್ಪಿನಿಂದ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ನಾಲ್ಕು ವಾರದೊಳಗೆ ಅಧಿಕೃತ ಪತ್ರ ಕಳಿಸಬೇಕು ಎಂದು ನ್ಯಾಯಾಲಯ ತಿಳಿಸಿದೆ.

ಮೀಸಲಾತಿ ವರ್ಗದ ಸ್ಥಾನಗಳಲ್ಲಿ ಅಭ್ಯರ್ಥಿಗಳ ಲಭ್ಯತೆ ಇರದಿದ್ದಾಗ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಆ ಸ್ಥಾನಗಳನ್ನು ಹಂಚಬಹುದಾದರೆ, ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗಿಂತ ಹೆಚ್ಚು ಅರ್ಹತೆ ಹೊಂದಿರುವ ಮೀಸಲು ಅಭ್ಯರ್ಥಿಗಳನ್ನು ಏಕೆ ಪರಿಗಣಿಸಬಾರದು ಎಂದು ಕೋರ್ಟ್ ಪ್ರಶ್ನಿಸಿದೆ.

‘ಸಾಮಾನ್ಯ ವರ್ಗದಲ್ಲಿ ಎಲ್ಲರಿಗೂ ಅವಕಾಶ ನೀಡಬೇಕು. ಕೇವಲ‌ ಮೆರಿಟ್ ಆಧಾರದ ಮೇಲೆ ಮಾತ್ರ ಸ್ಥಾನಗಳ ಹಂಚಿಕೆ ಆಗಬೇಕು. ಅರ್ಹ ಮೀಸಲು ಅಭ್ಯರ್ಥಿಗಳಿಗೆ ಮೀಸಲಾತಿ ಮತ್ತು ಸಾಮಾನ್ಯ ವರ್ಗಗಳೆರಡರಲ್ಲೂ ಅವಕಾಶ ಒದಗಿಸಬೇಕು’ ಎಂದು ನ್ಯಾಯಾಧೀಶ ರವೀಂದ್ರ ಭಟ್ ಅಭಿಪ್ರಾಯಪಟ್ಟರು.

Published On - 4:05 pm, Sun, 20 December 20

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ