AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amritpal Singh: ಖಲಿಸ್ತಾನ್ ನಾಯಕ ಅಮೃತಪಾಲ್ ಸಿಂಗ್ ಬಂಧನ; ನಾಳೆ ಮಧ್ಯಾಹ್ನವರೆಗೆ ಪಂಜಾಬ್​​ನಲ್ಲಿ ಇಂಟರ್ನೆಟ್ ಸ್ಥಗಿತ

ಇದಕ್ಕಿಂತ ಮುನ್ನ ಪಂಜಾಬ್ ಪೊಲೀಸರ ವಿಶೇಷ ತಂಡ ಆತನ ಆರು ಸಹಚರರನ್ನು ಬಂಧಿಸಿದೆ. ಇದಕ್ಕೆ ಸಂಬಂಧಪಟ್ಟಂಚೆ ಮೊಗಾ ಜಿಲ್ಲೆಯಲ್ಲಿ ಭಾರೀ ಪೊಲೀಸ್ ಪಡೆ ನಿಯೋಜಿಸಿದ್ದು, ನಾಳೆ ಮಧ್ಯಾಹ್ನ 12 ಗಂಟೆಯವರೆಗೆ ರಾಜ್ಯಾದ್ಯಂತ ಇಂಟರ್ನೆಟ್ ಅನ್ನು ಸ್ಥಗಿತಗೊಳಿಸಲಾಗಿದೆ

Amritpal Singh: ಖಲಿಸ್ತಾನ್ ನಾಯಕ ಅಮೃತಪಾಲ್ ಸಿಂಗ್ ಬಂಧನ; ನಾಳೆ ಮಧ್ಯಾಹ್ನವರೆಗೆ ಪಂಜಾಬ್​​ನಲ್ಲಿ ಇಂಟರ್ನೆಟ್ ಸ್ಥಗಿತ
ಅಮೃತಪಾಲ್ ಸಿಂಗ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Mar 18, 2023 | 4:43 PM

Share

ದೆಹಲಿ: ಸ್ವಯಂಘೋಷಿತ ಉಗ್ರಗಾಮಿ ಸಿಖ್ ಧರ್ಮ ಪ್ರಚಾರಕ ಮತ್ತು ಖಲಿಸ್ತಾನ್ (Khalistan) ಪರ ಸಹಾನುಭೂತಿ ಹೊಂದಿದ್ದ ಅಮೃತಪಾಲ್ ಸಿಂಗ್​​ನ್ನು (Amritpal Singh) ಪಂಜಾಬ್ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಇದಕ್ಕಿಂತ ಮುನ್ನ ಪಂಜಾಬ್ ಪೊಲೀಸರ (Punjab police)ವಿಶೇಷ ತಂಡ ಆತನ ಆರು ಸಹಚರರನ್ನು ಬಂಧಿಸಿದೆ. ಇದಕ್ಕೆ ಸಂಬಂಧಪಟ್ಟಂತೆ ಮೊಗಾ ಜಿಲ್ಲೆಯಲ್ಲಿ ಭಾರೀ ಪೊಲೀಸ್ ಪಡೆ ನಿಯೋಜಿಸಿದ್ದು, ನಾಳೆ ಮಧ್ಯಾಹ್ನ 12 ಗಂಟೆಯವರೆಗೆ ರಾಜ್ಯಾದ್ಯಂತ ಇಂಟರ್ನೆಟ್ ಅನ್ನು ಸ್ಥಗಿತಗೊಳಿಸಲಾಗಿದೆ. ಸಿಂಗ್ ವಿರುದ್ಧ ಕ್ರಮ ಕೈಗೊಳ್ಳಲು ಜಿ 20 ಕಾರ್ಯಕ್ರಮ ಮುಗಿಯಲಿ ಎಂದು ಸರ್ಕಾರ ಕಾಯುತ್ತಿತ್ತು ಎಂದು ಮೂಲಗಳು ಹೇಳಿವೆ.

ಕಳೆದ ವರ್ಷ ಫೆಬ್ರುವರಿಯಲ್ಲಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ನಟ ಮತ್ತು ಕಾರ್ಯಕರ್ತ ದೀಪ್ ಸಿಧು ಅವರು ಆರಂಭಿಸಿದ “ವಾರಿಸ್ ಪಂಜಾಬ್ ದೇ” ಎಂಬ ಮೂಲಭೂತ ಸಂಘಟನೆಯನ್ನು ಅಮೃತಪಾಲ್ ಮುನ್ನಡೆಸುತ್ತಿದ್ದಾರೆ. ಏಳು ಜಿಲ್ಲೆಗಳ ಪೊಲೀಸ್ ಸಿಬ್ಬಂದಿ ಅಮೃತಪಾಲ್ ಸಿಂಗ್ ಮತ್ತು ಅವರ ಸಹಚರರನ್ನು ಬೆನ್ನಟ್ಟಿದ್ದು, ಜಲಂಧರ್‌ನ ಶಾಕೋಟ್ ತೆಹಸಿಲ್‌ನ ಮೆಹತ್‌ಪುರ ಗ್ರಾಮದಲ್ಲಿ ಬಂಧಿಸಿದ್ದಾರೆ. ಅಮೃತಪಾಲ್ ಸಿಂಗ್ ಭೇಟಿಯ ಪೂರ್ವ ಮಾಹಿತಿ ಇದ್ದ ಕಾರಣ ಪೊಲೀಸರು ಎಲ್ಲಾ ರಸ್ತೆಗಳನ್ನು ಮುಚ್ಚಿ ಶಾಹಕೋಟ್‌ನಲ್ಲಿ ಬೃಹತ್ ಬ್ಯಾರಿಕೇಡ್‌ಗಳನ್ನು ಹಾಕಿದ್ದರು.

ಪಂಜಾಬ್ ಪೊಲೀಸರು ಟ್ವೀಟ್ ಮೂಲಕ, ಎಲ್ಲಾ ನಾಗರಿಕರಿಗೆ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡುವಂತೆ ವಿನಂತಿಸಿದ್ದು ಭಯಪಡಬೇಡಿ. ನಕಲಿ ಸುದ್ದಿ ಅಥವಾ ದ್ವೇಷದ ಭಾಷಣವನ್ನು ಹರಡಬೇಡಿ ಎಂದು ಹೇಳಿದ್ದಾರೆ.

ಇದನ್ನೂ ಓದಿ:ಈರುಳ್ಳಿ ಬೆಲೆಗಾಗಿ ಮುಂಬೈಯತ್ತ ಬೃಹತ್ ಮೆರವಣಿಗೆ ಹೊರಟಿದ್ದ ಮಹಾರಾಷ್ಟ್ರ ರೈತರ ಪ್ರತಿಭಟನೆ ರದ್ದು

ಕೆಲವು ವರ್ಷಗಳಿಂದ ಪಂಜಾಬ್‌ನಲ್ಲಿ ಸಕ್ರಿಯವಾಗಿರುವ ತೀವ್ರಗಾಮಿ ಪ್ರತ್ಯೇಕತಾವಾದಿ ನಾಯಕ ಸಿಂಗ್ ಆಗಾಗ್ಗೆ ಶಸ್ತ್ರಸಜ್ಜಿತ ಬೆಂಬಲಿಗರ ಬೆಂಗಾವಲಿನೊಂದಿಗೆ ಕಾಣಿಸುತ್ತಿರುತ್ತಿದ್ದ. ಅಮೃತಪಾಲ್ ಸಿಂಗ್​​ನ ಪ್ರಮುಖ ಸಹಾಯಕ, ಅಪಹರಣ ಆರೋಪಿ ಲವ್‌ಪ್ರೀತ್ ಸಿಂಗ್ ಬಂಧನದ ವಿರುದ್ಧ ಫೆಬ್ರವರಿ 23 ರಂದು ನಡೆದ ಬೃಹತ್ ಪ್ರತಿಭಟನೆಯಲ್ಲಿ ಈತ ಕಾಣಿಸಿದ್ದ. ಈತನ ಬೆಂಬಲಿಗರಲ್ಲಿ ಕೆಲವರು ಕತ್ತಿ ಮತ್ತು ಬಂದೂಕುಗಳನ್ನು ಝಳಪಿಸುತ್ತಾ, ಬ್ಯಾರಿಕೇಡ್‌ಗಳನ್ನು ಭೇದಿಸಿ ಅಮೃತಸರ ನಗರದ ಹೊರವಲಯದಲ್ಲಿರುವ ಅಜ್ನಾಲಾದಲ್ಲಿನ ಪೊಲೀಸ್ ಠಾಣೆಗೆ ನುಗ್ಗಿ, ಲವ್‌ಪ್ರೀತ್ ಸಿಂಗ್ ನ್ನು ಬಿಡುಗಡೆ ಮಾಡಲಾಗುವುದು ಎಂಬ ಭರವಸೆಯನ್ನು ಪೊಲೀಸರಿಂದ ಪಡೆದಿದ್ದರು. ಅಲ್ಲಿ ನಡೆದ ಹಿಂಸಾಚಾರಕ್ಕೆ ಅವರು ಪಂಜಾಬ್ ಪೊಲೀಸರನ್ನು ದೂಷಿಸಿದ್ದರು.

ಘರ್ಷಣೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಶ್ರೇಣಿಯ ಅಧಿಕಾರಿ ಸೇರಿದಂತೆ ಆರು ಪೊಲೀಸ್ ಸಿಬ್ಬಂದಿ ಈ ಹಿಂಸಾಚಾರದಲ್ಲಿ ಗಾಯಗೊಂಡಿದ್ದರು. ಹಿಂಸಾಚಾರಕ್ಕಾಗಿ ಅಮೃತಪಾಲ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆಯೇ ಎಂಬುದನ್ನು ಪೊಲೀಸರು ಇನ್ನೂ ಬಹಿರಂಗಪಡಿಸಿಲ್ಲ.

ಅಜ್ನಾಲಾ ಘಟನೆಯ ನಂತರ, ಬಿಜೆಪಿ ರಾಜ್ಯದಲ್ಲಿ ರಾಜ್ಯಪಾಲರ ಆಳ್ವಿಕೆಗೆ ಒತ್ತಾಯಿಸಿತು.ತ್ತು ಪಂಜಾಬ್ ಕಾಂಗ್ರೆಸ್ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಅಮೃತಪಾಲ್ ಸಿಂಗ್ ಮತ್ತು ಅವರ ಬೆಂಬಲಿಗರನ್ನು ಬಂಧಿಸಲು ರಾಜ್ಯ ಸರ್ಕಾರದ ಮೇಲೆ ಬಿಜೆಪಿ ಒತ್ತಾಯ ಹೇರಿತ್ತು. ಘಟನೆಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳುವಲ್ಲಿ ಪಂಜಾಬ್ ಪೊಲೀಸರು ವಿಳಂಬ ಮಾಡಿದ್ದಕ್ಕೆ ತೀವ್ರ ಟೀಕೆ ಕೇಳಿ ಬಂದಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:15 pm, Sat, 18 March 23

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ