ರಫೇಲ್ ವಾಯುಪಡೆ ಸೇರ್ಪಡೆಗೆ ಕೊನೆಗೂ ಮುಹೂರ್ತ ನಿಗದಿಯಾಯ್ತು

ಭಾರತೀಯ ವಾಯುಪಡೆಗೆ ಬಾಹುಬಲಿ ರಫೇಲ್ ಯುದ್ಧ ವಿಮಾನಗಳ ಸೇರ್ಪಡೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದೆ. ಫ್ರಾನ್ಸ್ ನಿರ್ಮಿತ ಐದು ರಫೇಲ್ ಯುದ್ಧ ವಿಮಾನಗಳು, ಸೆಪ್ಟೆಂಬರ್ 10 ರಂದು ಭಾರತೀಯ ವಾಯುಪಡೆಗೆ ಅಧಿಕೃತವಾಗಿ ಸೇರ್ಪಡೆಯಾಗಲಿವೆ. ಹರಿಯಾಣದ ಅಂಬಾಲ ವಾಯುನೆಲೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾಗವಹಿಸಲಿದ್ದು, ಅವರ ಸಮ್ಮುಖದಲ್ಲಿ ರಫೇಲ್ ಯುದ್ಧ ವಿಮಾನಗಳು ವಾಯುಪಡೆಯಲ್ಲಿ ವಿಲೀನಗೊಳ್ಳಲಿವೆ. ಜುಲೈ 29 ರಂದು ಭಾರತಕ್ಕೆ ಬಂದಿರುವ ಐದು ರಫೇಲ್ ಜೆಟ್ ವಿಮಾನಗಳ ಈ ಸೇರ್ಪಡೆ ಕಾರ್ಯಕ್ರಮಕ್ಕೆ, ರಫೇಲ್ ಯುದ್ಧ ವಿಮಾನಗಳ […]

ರಫೇಲ್ ವಾಯುಪಡೆ ಸೇರ್ಪಡೆಗೆ ಕೊನೆಗೂ ಮುಹೂರ್ತ ನಿಗದಿಯಾಯ್ತು
ರಫೇಲ್​ ವಿಮಾನ
ಸಾಧು ಶ್ರೀನಾಥ್​

Updated on: Aug 28, 2020 | 1:51 PM

ಭಾರತೀಯ ವಾಯುಪಡೆಗೆ ಬಾಹುಬಲಿ ರಫೇಲ್ ಯುದ್ಧ ವಿಮಾನಗಳ ಸೇರ್ಪಡೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದೆ.

ಫ್ರಾನ್ಸ್ ನಿರ್ಮಿತ ಐದು ರಫೇಲ್ ಯುದ್ಧ ವಿಮಾನಗಳು, ಸೆಪ್ಟೆಂಬರ್ 10 ರಂದು ಭಾರತೀಯ ವಾಯುಪಡೆಗೆ ಅಧಿಕೃತವಾಗಿ ಸೇರ್ಪಡೆಯಾಗಲಿವೆ. ಹರಿಯಾಣದ ಅಂಬಾಲ ವಾಯುನೆಲೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾಗವಹಿಸಲಿದ್ದು, ಅವರ ಸಮ್ಮುಖದಲ್ಲಿ ರಫೇಲ್ ಯುದ್ಧ ವಿಮಾನಗಳು ವಾಯುಪಡೆಯಲ್ಲಿ ವಿಲೀನಗೊಳ್ಳಲಿವೆ.

ಜುಲೈ 29 ರಂದು ಭಾರತಕ್ಕೆ ಬಂದಿರುವ ಐದು ರಫೇಲ್ ಜೆಟ್ ವಿಮಾನಗಳ ಈ ಸೇರ್ಪಡೆ ಕಾರ್ಯಕ್ರಮಕ್ಕೆ, ರಫೇಲ್ ಯುದ್ಧ ವಿಮಾನಗಳ ಜನಕ ದೇಶ ಫ್ರಾನ್ಸ್​ನ ರಕ್ಷಣಾ ಸಚಿವ ಪ್ಲೋರೆನ್ಸ್ ಪಾರ್ಲೆಗೂ ಆಹ್ವಾನ ನೀಡಲಾಗಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us