AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Raghav Chadha: ದೆಹಲಿ ಮದ್ಯ ನೀತಿ ಪ್ರಕರಣ, ಆರೋಪಪಟ್ಟಿಯಲ್ಲಿ ರಾಘವ್ ಚಡ್ಡಾ ಹೆಸರು

ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ತನ್ನ ಪೂರಕ ಆರೋಪಪಟ್ಟಿಯಲ್ಲಿ ಎಎಪಿ ಪಕ್ಷದ ರಾಜ್ಯಸಭಾ ಸದಸ್ಯ ರಾಘವ್ ಚಡ್ಡಾ ಹೆಸರು ಸೇರಿಸಿದೆ ಎಂದು ಹೇಳಿದೆ.

Raghav Chadha: ದೆಹಲಿ ಮದ್ಯ ನೀತಿ ಪ್ರಕರಣ, ಆರೋಪಪಟ್ಟಿಯಲ್ಲಿ ರಾಘವ್ ಚಡ್ಡಾ ಹೆಸರು
ರಾಘವ್ ಚಡ್ಡಾ
ಅಕ್ಷಯ್​ ಪಲ್ಲಮಜಲು​​
|

Updated on:May 02, 2023 | 1:34 PM

Share

ದೆಹಲಿ: ದೆಹಲಿ ಮದ್ಯ ನೀತಿ ಪ್ರಕರಣಕ್ಕೆ (Delhi liquor policy case) ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು (ED) ತನ್ನ ಪೂರಕ ಆರೋಪಪಟ್ಟಿಯಲ್ಲಿ ಎಎಪಿ ಪಕ್ಷದ (Aam Aadmi Party) ರಾಜ್ಯಸಭಾ ಸದಸ್ಯ ರಾಘವ್ ಚಡ್ಡಾ ಹೆಸರು ಸೇರಿಸಿದೆ ಎಂದು ಹೇಳಿದೆ. ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ರಾಘವ್ ಚಡ್ಡಾ(Raghav Chadha) ಅವರನ್ನು ಮದ್ಯ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಉಲ್ಲೇಖಿಸಿದೆ. ಆರೋಪಿಯಾಗಿಲ್ಲದಿದ್ದರೂ ಸಂಸದರ ಹೆಸರನ್ನು ತನಿಖಾ ಸಂಸ್ಥೆಯು ಪೂರಕ ಚಾರ್ಜ್ ಶೀಟ್‌ನಲ್ಲಿ ಸೇರಿಸಿದೆ.

ಚಾರ್ಜ್ ಶೀಟ್‌ನಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಸಂಜಯ್ ಸಿಂಗ್ ಸೇರಿ ಪಕ್ಷದ ಇತರ ನಾಯಕರನ್ನು ಹೆಸರಿಸಲಾಗಿದೆ. ಬಂಧಿತ ಮಾಜಿ ಸಚಿವ ಮನೀಶ್ ಸಿಸೋಡಿಯಾ ಅವರ ಮನೆಯಲ್ಲಿ ನಡೆದ ಸಭೆಯಲ್ಲಿ ರಾಘವ್ ಚಡ್ಡಾ ಭಾಗವಹಿಸಿದ್ದರು, ಇದೀಗ ರದ್ದುಗೊಂಡಿರುವ ಮದ್ಯ ನೀತಿಯನ್ನು ತರುವ ಯೋಜನೆಯ ಬಗ್ಗೆ ಉದ್ಯಮಿಗಳೊಂದಿಗೆ ಚರ್ಚಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯ ತಿಳಿಸಿದೆ.

ಇದನ್ನೂ ಓದಿ: Delhi Liquor Policy Case: ದೆಹಲಿ ಅಬಕಾರಿ ನೀತಿ ಹಗರಣ: ತೆಲಂಗಾಣ ಸಿಎಂ ಪುತ್ರಿ ಕವಿತಾರ ಮಾಜಿ ಆಡಿಟರ್ ಬಂಧನ

ದೆಹಲಿಯಲ್ಲಿ ಹೊಸ ಮದ್ಯ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿ ಅಕ್ರಮವಾಗಿದೆ ಎಂದು ಮನೀಶ್ ಸಿಸೋಡಿಯಾ ಅವರನ್ನು ಫೆಬ್ರವರಿಯಲ್ಲಿ ಬಂಧಿಸಲಾಯಿತು. ಇದೀಗ ಇದಕ್ಕೆ ಸಂಬಂಧಿಸಿದಂತೆ ಇ.ಡಿ ಅನೇಕರ ಹೆಸರನ್ನು ಚಾರ್ಜ್ ಶೀಟ್‌ ಹೆಸರಿಸಿದೆ.

Published On - 12:50 pm, Tue, 2 May 23

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ