AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Bajaj Passes Away: ಬಜಾಜ್ ಗ್ರೂಪ್ ಚೇರ್ಮನ್ ರಾಹುಲ್ ಬಜಾಜ್ ನಿಧನ

ಬಜಾಜ್ ಸಮೂಹಗಳ ಚೇರ್ಮನ್ ರಾಹುಲ್ ಬಜಾಜ್ ಇಂದು (ಶನಿವಾರ) ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು.

Rahul Bajaj Passes Away: ಬಜಾಜ್ ಗ್ರೂಪ್ ಚೇರ್ಮನ್ ರಾಹುಲ್ ಬಜಾಜ್ ನಿಧನ
ರಾಹುಲ್ ಬಜಾಜ್
TV9 Web
| Edited By: |

Updated on:Feb 12, 2022 | 4:32 PM

Share

ಪುಣೆ: ಖ್ಯಾತ ಉದ್ಯಮಿ ಮತ್ತು ಬಜಾಜ್ ಸಮೂಹಗಳ (Bajaj Group) ಚೇರ್ಮನ್ ರಾಹುಲ್ ಬಜಾಜ್ (Rahul Bajaj) ಇಂದು (ಶನಿವಾರ) ಪುಣೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. ರಾಹುಲ್ ಬಜಾಜ್ ಅವರಿಗೆ ನ್ಯುಮೋನಿಯಾ ಮತ್ತು ಹೃದಯ ಸಮಸ್ಯೆಯೂ ಇತ್ತು. ಕಳೆದ ಒಂದು ತಿಂಗಳಿನಿಂದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ರೂಬಿ ಹಾಲ್ ಕ್ಲಿನಿಕ್‌ನ ಮ್ಯಾನೇಜಿಂಗ್ ಟ್ರಸ್ಟಿ ಡಾ. ಪುರವೇಜ್ ಗ್ರಾಂಟ್ ಹೇಳಿದ್ದಾರೆ. ಇಂದು ಮಧ್ಯಾಹ್ನ 2.30ಕ್ಕೆ ರಾಹುಲ್ ಬಜಾಜ್ ಕೊನೆಯುಸಿರೆಳೆದಿದ್ದಾರೆ.

ರಾಹುಲ್ ಬಜಾಜ್ ಸಾವನ್ನಪ್ಪುವಾಗ ಅವರ ಆಪ್ತ ಕುಟುಂಬಸ್ಥರು ಪಕ್ಕದಲ್ಲೇ ಇದ್ದರು ಎಂದು ಬಜಾಜ್ ಗ್ರೂಪ್‌ನ ಪ್ರಕಟಣೆ ತಿಳಿಸಿದೆ. ರಾಹುಲ್ ಬಜಾಜ್ ಕಳೆದ ವರ್ಷ ಏಪ್ರಿಲ್‌ನಲ್ಲಿ ಬಜಾಜ್ ಆಟೋ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

1938ರ ಜೂನ್ 10ರಂದು ಜನಿಸಿದ ರಾಹುಲ್ ಬಜಾಜ್ ಅವರು 40 ವರ್ಷಗಳ ಕಾಲ ಬಜಾಜ್ ಗ್ರೂಪ್‌ನ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ರಾಹುಲ್ ಬಜಾಜ್ ಕಳೆದ ವರ್ಷ ಏಪ್ರಿಲ್‌ನಲ್ಲಿ ಬಜಾಜ್ ಆಟೋ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು ಮತ್ತು ಪ್ರಸ್ತುತ ಬಜಾಜ್ ಸಂಸ್ಥೆಯ ಎಮೆರಿಟಸ್ ಅಧ್ಯಕ್ಷರಾಗಿದ್ದರು.

ರಾಹುಲ್ ಬಜಾಜ್ ಅವರಿಗೆ 2001ರಲ್ಲಿ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಭೂಷಣ ಪ್ರಶಸ್ತಿಯನ್ನು ನೀಡಲಾಗಿತ್ತು. ರಾಹುಲ್ ಬಜಾಜ್ ರಾಜ್ಯಸಭಾ ಸಂಸದರಾಗಿಯೂ ಸೇವೆ ಸಲ್ಲಿಸಿದ್ದರು.

ಇದನ್ನೂ ಓದಿ: ಪಲ್ಸರ್ ಸರಣಿಯ ಪಲ್ಸರ್ ಎಫ್250 ಮತ್ತು ಎನ್250 ಬೈಕ್ ಗಳನ್ನು ಬಿಡುಗಡೆ ಮಾಡಿದೆ ಬಜಾಜ್ ಆಟೋ

ಬಜಾಜ್ ಆಟೋ ಕಂಪೆನಿ ಅಧ್ಯಕ್ಷ ಹುದ್ದೆಗೆ ರಾಹುಲ್ ಬಜಾಜ್ ರಾಜೀನಾಮೆ

Published On - 4:21 pm, Sat, 12 February 22

Follow Us
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ