AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Bajaj Passes Away: ಬಜಾಜ್ ಗ್ರೂಪ್ ಚೇರ್ಮನ್ ರಾಹುಲ್ ಬಜಾಜ್ ನಿಧನ

ಬಜಾಜ್ ಸಮೂಹಗಳ ಚೇರ್ಮನ್ ರಾಹುಲ್ ಬಜಾಜ್ ಇಂದು (ಶನಿವಾರ) ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು.

Rahul Bajaj Passes Away: ಬಜಾಜ್ ಗ್ರೂಪ್ ಚೇರ್ಮನ್ ರಾಹುಲ್ ಬಜಾಜ್ ನಿಧನ
ರಾಹುಲ್ ಬಜಾಜ್
TV9 Web
| Edited By: |

Updated on:Feb 12, 2022 | 4:32 PM

Share

ಪುಣೆ: ಖ್ಯಾತ ಉದ್ಯಮಿ ಮತ್ತು ಬಜಾಜ್ ಸಮೂಹಗಳ (Bajaj Group) ಚೇರ್ಮನ್ ರಾಹುಲ್ ಬಜಾಜ್ (Rahul Bajaj) ಇಂದು (ಶನಿವಾರ) ಪುಣೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. ರಾಹುಲ್ ಬಜಾಜ್ ಅವರಿಗೆ ನ್ಯುಮೋನಿಯಾ ಮತ್ತು ಹೃದಯ ಸಮಸ್ಯೆಯೂ ಇತ್ತು. ಕಳೆದ ಒಂದು ತಿಂಗಳಿನಿಂದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ರೂಬಿ ಹಾಲ್ ಕ್ಲಿನಿಕ್‌ನ ಮ್ಯಾನೇಜಿಂಗ್ ಟ್ರಸ್ಟಿ ಡಾ. ಪುರವೇಜ್ ಗ್ರಾಂಟ್ ಹೇಳಿದ್ದಾರೆ. ಇಂದು ಮಧ್ಯಾಹ್ನ 2.30ಕ್ಕೆ ರಾಹುಲ್ ಬಜಾಜ್ ಕೊನೆಯುಸಿರೆಳೆದಿದ್ದಾರೆ.

ರಾಹುಲ್ ಬಜಾಜ್ ಸಾವನ್ನಪ್ಪುವಾಗ ಅವರ ಆಪ್ತ ಕುಟುಂಬಸ್ಥರು ಪಕ್ಕದಲ್ಲೇ ಇದ್ದರು ಎಂದು ಬಜಾಜ್ ಗ್ರೂಪ್‌ನ ಪ್ರಕಟಣೆ ತಿಳಿಸಿದೆ. ರಾಹುಲ್ ಬಜಾಜ್ ಕಳೆದ ವರ್ಷ ಏಪ್ರಿಲ್‌ನಲ್ಲಿ ಬಜಾಜ್ ಆಟೋ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

1938ರ ಜೂನ್ 10ರಂದು ಜನಿಸಿದ ರಾಹುಲ್ ಬಜಾಜ್ ಅವರು 40 ವರ್ಷಗಳ ಕಾಲ ಬಜಾಜ್ ಗ್ರೂಪ್‌ನ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ರಾಹುಲ್ ಬಜಾಜ್ ಕಳೆದ ವರ್ಷ ಏಪ್ರಿಲ್‌ನಲ್ಲಿ ಬಜಾಜ್ ಆಟೋ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು ಮತ್ತು ಪ್ರಸ್ತುತ ಬಜಾಜ್ ಸಂಸ್ಥೆಯ ಎಮೆರಿಟಸ್ ಅಧ್ಯಕ್ಷರಾಗಿದ್ದರು.

ರಾಹುಲ್ ಬಜಾಜ್ ಅವರಿಗೆ 2001ರಲ್ಲಿ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಭೂಷಣ ಪ್ರಶಸ್ತಿಯನ್ನು ನೀಡಲಾಗಿತ್ತು. ರಾಹುಲ್ ಬಜಾಜ್ ರಾಜ್ಯಸಭಾ ಸಂಸದರಾಗಿಯೂ ಸೇವೆ ಸಲ್ಲಿಸಿದ್ದರು.

ಇದನ್ನೂ ಓದಿ: ಪಲ್ಸರ್ ಸರಣಿಯ ಪಲ್ಸರ್ ಎಫ್250 ಮತ್ತು ಎನ್250 ಬೈಕ್ ಗಳನ್ನು ಬಿಡುಗಡೆ ಮಾಡಿದೆ ಬಜಾಜ್ ಆಟೋ

ಬಜಾಜ್ ಆಟೋ ಕಂಪೆನಿ ಅಧ್ಯಕ್ಷ ಹುದ್ದೆಗೆ ರಾಹುಲ್ ಬಜಾಜ್ ರಾಜೀನಾಮೆ

Published On - 4:21 pm, Sat, 12 February 22

Follow Us
Web contact
Web contact

TV9 Kannada

Read More
4500 ಕೋಟಿ ರೂ. ವಂಚನೆ ಕೇಸ್: ಶಿವಂ ಅಸೋಸಿಯೇಟ್‌ ಮಾಲೀಕ ಅರೆಸ್ಟ್​​​
4500 ಕೋಟಿ ರೂ. ವಂಚನೆ ಕೇಸ್: ಶಿವಂ ಅಸೋಸಿಯೇಟ್‌ ಮಾಲೀಕ ಅರೆಸ್ಟ್​​​
ಹೈದರಾಬಾದ್-ಜೈಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ದುರಂತ
ಹೈದರಾಬಾದ್-ಜೈಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ದುರಂತ
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ