AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Bajaj Passes Away: ಬಜಾಜ್ ಗ್ರೂಪ್ ಚೇರ್ಮನ್ ರಾಹುಲ್ ಬಜಾಜ್ ನಿಧನ

ಬಜಾಜ್ ಸಮೂಹಗಳ ಚೇರ್ಮನ್ ರಾಹುಲ್ ಬಜಾಜ್ ಇಂದು (ಶನಿವಾರ) ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು.

Rahul Bajaj Passes Away: ಬಜಾಜ್ ಗ್ರೂಪ್ ಚೇರ್ಮನ್ ರಾಹುಲ್ ಬಜಾಜ್ ನಿಧನ
ರಾಹುಲ್ ಬಜಾಜ್
TV9 Web
| Edited By: |

Updated on:Feb 12, 2022 | 4:32 PM

Share

ಪುಣೆ: ಖ್ಯಾತ ಉದ್ಯಮಿ ಮತ್ತು ಬಜಾಜ್ ಸಮೂಹಗಳ (Bajaj Group) ಚೇರ್ಮನ್ ರಾಹುಲ್ ಬಜಾಜ್ (Rahul Bajaj) ಇಂದು (ಶನಿವಾರ) ಪುಣೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. ರಾಹುಲ್ ಬಜಾಜ್ ಅವರಿಗೆ ನ್ಯುಮೋನಿಯಾ ಮತ್ತು ಹೃದಯ ಸಮಸ್ಯೆಯೂ ಇತ್ತು. ಕಳೆದ ಒಂದು ತಿಂಗಳಿನಿಂದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ರೂಬಿ ಹಾಲ್ ಕ್ಲಿನಿಕ್‌ನ ಮ್ಯಾನೇಜಿಂಗ್ ಟ್ರಸ್ಟಿ ಡಾ. ಪುರವೇಜ್ ಗ್ರಾಂಟ್ ಹೇಳಿದ್ದಾರೆ. ಇಂದು ಮಧ್ಯಾಹ್ನ 2.30ಕ್ಕೆ ರಾಹುಲ್ ಬಜಾಜ್ ಕೊನೆಯುಸಿರೆಳೆದಿದ್ದಾರೆ.

ರಾಹುಲ್ ಬಜಾಜ್ ಸಾವನ್ನಪ್ಪುವಾಗ ಅವರ ಆಪ್ತ ಕುಟುಂಬಸ್ಥರು ಪಕ್ಕದಲ್ಲೇ ಇದ್ದರು ಎಂದು ಬಜಾಜ್ ಗ್ರೂಪ್‌ನ ಪ್ರಕಟಣೆ ತಿಳಿಸಿದೆ. ರಾಹುಲ್ ಬಜಾಜ್ ಕಳೆದ ವರ್ಷ ಏಪ್ರಿಲ್‌ನಲ್ಲಿ ಬಜಾಜ್ ಆಟೋ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

1938ರ ಜೂನ್ 10ರಂದು ಜನಿಸಿದ ರಾಹುಲ್ ಬಜಾಜ್ ಅವರು 40 ವರ್ಷಗಳ ಕಾಲ ಬಜಾಜ್ ಗ್ರೂಪ್‌ನ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ರಾಹುಲ್ ಬಜಾಜ್ ಕಳೆದ ವರ್ಷ ಏಪ್ರಿಲ್‌ನಲ್ಲಿ ಬಜಾಜ್ ಆಟೋ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು ಮತ್ತು ಪ್ರಸ್ತುತ ಬಜಾಜ್ ಸಂಸ್ಥೆಯ ಎಮೆರಿಟಸ್ ಅಧ್ಯಕ್ಷರಾಗಿದ್ದರು.

ರಾಹುಲ್ ಬಜಾಜ್ ಅವರಿಗೆ 2001ರಲ್ಲಿ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಭೂಷಣ ಪ್ರಶಸ್ತಿಯನ್ನು ನೀಡಲಾಗಿತ್ತು. ರಾಹುಲ್ ಬಜಾಜ್ ರಾಜ್ಯಸಭಾ ಸಂಸದರಾಗಿಯೂ ಸೇವೆ ಸಲ್ಲಿಸಿದ್ದರು.

ಇದನ್ನೂ ಓದಿ: ಪಲ್ಸರ್ ಸರಣಿಯ ಪಲ್ಸರ್ ಎಫ್250 ಮತ್ತು ಎನ್250 ಬೈಕ್ ಗಳನ್ನು ಬಿಡುಗಡೆ ಮಾಡಿದೆ ಬಜಾಜ್ ಆಟೋ

ಬಜಾಜ್ ಆಟೋ ಕಂಪೆನಿ ಅಧ್ಯಕ್ಷ ಹುದ್ದೆಗೆ ರಾಹುಲ್ ಬಜಾಜ್ ರಾಜೀನಾಮೆ

Published On - 4:21 pm, Sat, 12 February 22

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ