AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ಸರ್ಕಾರದ ಕೊವಿಡ್​ ಲಸಿಕೆ ನೀತಿ ಭಾರತ ಮಾತೆಯ ಎದೆಗೆ ಚೂರಿ ಹಾಕಿದಂತಿದೆ: ರಾಹುಲ್ ಗಾಂಧಿ

ನವದೆಹಲಿ: ಕಾಂಗ್ರೆಸ್ ಪಕ್ಷದ ನಾಯಕ ಮತ್ತು ಸಂಸದ ರಾಹುಲ್ ಗಾಂಧಿ ಅವರು ಭಾರತದಲ್ಲಿ ಕೋವಿಡ್-19 ಪಿಡುಗಿನ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಟೀಕಿಸುವುದನ್ನು ಮುಂದಿವರೆಸಿದ್ದಾರೆ. ಕೇಂದ್ರ ಸರ್ಕಾರವು ಶೂನ್ಯ ಲಸಿಕಾ ನೀತಿಯನ್ನು ಅನುಸರಿಸುತ್ತಿದ್ದು ಅದು ಭಾರತ ಮಾತೆಯ ಎದೆಗೆ ಚೂರಿ ಇರಿದಂತಾಗುತ್ತಿದೆ ಎಂದು ಅವರು ತಮ್ಮ ಟ್ವೀಟ್​ ಒಂದರಲ್ಲಿ ಹೇಳಿದ್ದಾರೆ. ಕೋವಿಡ್-19 ಭಾರತವನ್ನು ಅಪ್ಪಳಿಸಿದ ನಂತರ ದೇಶದಲ್ಲಿ ನಿರುದ್ಯೋಗ ಪ್ರಮಾಣ ಈ ವರ್ಷದ ಮೇ ತಿಂಗಳಿನಲ್ಲಿ ಎರಡಂಕಿ ತಲುಪಿದೆ ಎಂಬ ಮಾಧ್ಯಮದ ವರದಿಗಳನ್ನು […]

ಮೋದಿ ಸರ್ಕಾರದ ಕೊವಿಡ್​ ಲಸಿಕೆ ನೀತಿ ಭಾರತ ಮಾತೆಯ ಎದೆಗೆ ಚೂರಿ ಹಾಕಿದಂತಿದೆ: ರಾಹುಲ್ ಗಾಂಧಿ
ರಾಹುಲ್ ಗಾಂಧಿ
ಅರುಣ್​ ಕುಮಾರ್​ ಬೆಳ್ಳಿ
|

Updated on: Jun 01, 2021 | 12:34 AM

Share

ನವದೆಹಲಿ: ಕಾಂಗ್ರೆಸ್ ಪಕ್ಷದ ನಾಯಕ ಮತ್ತು ಸಂಸದ ರಾಹುಲ್ ಗಾಂಧಿ ಅವರು ಭಾರತದಲ್ಲಿ ಕೋವಿಡ್-19 ಪಿಡುಗಿನ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಟೀಕಿಸುವುದನ್ನು ಮುಂದಿವರೆಸಿದ್ದಾರೆ. ಕೇಂದ್ರ ಸರ್ಕಾರವು ಶೂನ್ಯ ಲಸಿಕಾ ನೀತಿಯನ್ನು ಅನುಸರಿಸುತ್ತಿದ್ದು ಅದು ಭಾರತ ಮಾತೆಯ ಎದೆಗೆ ಚೂರಿ ಇರಿದಂತಾಗುತ್ತಿದೆ ಎಂದು ಅವರು ತಮ್ಮ ಟ್ವೀಟ್​ ಒಂದರಲ್ಲಿ ಹೇಳಿದ್ದಾರೆ. ಕೋವಿಡ್-19 ಭಾರತವನ್ನು ಅಪ್ಪಳಿಸಿದ ನಂತರ ದೇಶದಲ್ಲಿ ನಿರುದ್ಯೋಗ ಪ್ರಮಾಣ ಈ ವರ್ಷದ ಮೇ ತಿಂಗಳಿನಲ್ಲಿ ಎರಡಂಕಿ ತಲುಪಿದೆ ಎಂಬ ಮಾಧ್ಯಮದ ವರದಿಗಳನ್ನು ಉಲ್ಲೇಖಿಸಿರುವ ರಾಹುಲ್ ಅವರು ಆ ವಿಷಯವಾಗಿಯೂ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಟೀಕಿಸಿದ್ದಾರೆ.

‘ಮೋದಿ ಸರ್ಕಾರದ ಲಸಿಕೆ-ರಕಿತ ಯೋಜನೆಯು ಭಾರತ ಮಾತೆಯ ಹೃದಯಕ್ಕೆ ನಾಟಿರುವ ಚೂರಿಯಾಗಿದೆ, ಇದು ದುರಂತ ಸತ್ಯ,’ ಎಂದು ರಾಹುಲ್ ಅವರು ಟ್ವೀಟ್​ ಮಾಡಿದ್ದಾರೆ

ಮತ್ತೊಂದು ಟ್ವೀಟ್​ನಲ್ಲಿ ಅವರು, ಕೊವಿಡ್​ ನಂತರ ಶೇಕಡಾ 97ರಷ್ಟು ಜನ ಬಡವರಾಗಿದ್ದಾರೆ ಎಂದು ಹೇಳಿರುವ ವರದಿಯನ್ನು ಉಲ್ಲೇಖಿಸುತ್ತಾ ರಾಹುಲ್, ‘ಒಬ್ಬ ವ್ಯಕ್ತಿ ಮತ್ತು ಆತನ ದುರಹಂಕಾರ + ಒಂದು ವೈರಸ್ ಮತ್ತು ಅದರ ರೂಪಾಂತರಿಗಳು’ ಅಂತ ಟ್ವೀಟ್​ ಮಾಡಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರದ ಕೋವಿಡ್-19 ಪಿಡುಗಿನ ನಿರ್ವಹಣೆ ಹಾಗೂ ಲಸಿಕೆ ನೀತಿಯನ್ನು ರಾಹುಲ್ ಅರಂಭದಿಂದಲೂ ಟೀಕಿಸುತ್ತಾ ಬಂದಿದ್ದಾರೆ ಇದಕ್ಕೆ ಉತ್ತರವಾಗಿ ಬಿಜೆಪಿ, ಕಾಂಗ್ರೆಸ್ ಪಕ್ಷವು ಮೋದಿ ಸರ್ಕಾರದ ಹೆಸರಿಗೆ ಮಸಿ ಬಳಿಯುವ ಪ್ರಯತ್ನ ಮಾಡುತ್ತಾ ಲಸಿಕೆಯ ಬಗ್ಗೆ ತಪ್ಪು ಮಾಹಿತಿಯನ್ನು ಹರಡಿ ಜನರಲ್ಲಿ ಭೀತಿ ಮೂಡಿಸುತ್ತಿದೆ ಎಂದು ಆರೋಪಿಸಿದೆ.

ರಾಹುಲ್ ಗಾಂದಿಯವರು ಮೋದಿ ಸರ್ಕಾರವನ್ನು ಟೀಕಿಸುವ ಬದಲು ಕಾಂಗ್ರೆಸ್ ಆಡಳಿತ ನಡೆಸುತ್ತಿರುವ ರಾಜ್ಯಗಳ ಬಗ್ಗೆ ಕಾಳಜಿ ಹೊಂದಿರಬೇಕು ಯಾಕೆಂದರೆ ಆ ರಾಜ್ಯಗಳು ತಮ್ಮ ಕೋಟಾದ ಲಸಿಕೆಗಳನ್ನು ತಯಾರಕರಿಂದ ಖರೀದಿಸಲು ಹೆಣಗಾಡುತ್ತಿವೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ.

ಇದನ್ನೂ ಓದಿ: Vaccine Utsav: ಭಾರತೀಯರೆಲ್ಲರಿಗೂ ಕೊರೊನಾ ಲಸಿಕೆ ನೀಡಬೇಕು; ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್ ಗಾಂಧಿ

ಇದನ್ನೂ ಓದಿ: Rahul Gandhi ಬಹುತೇಕ ಸರ್ವಾಧಿಕಾರಿಗಳ ಹೆಸರು M ನಿಂದಲೇ ಶುರುವಾಗುತ್ತದೆ ಎಂದ ರಾಹುಲ್ ಗಾಂಧಿ; ಟಾರ್ಗೆಟ್ ಮಿಸ್​ ಆಯ್ತಲ್ಲ ಅಂದ್ರು ನೆಟ್ಟಿಗರು!

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್