AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಡಿ ವಿಚಾರಣೆಯಿಂದ ಹೊರಬರುತ್ತಿದ್ದಂತೆ ಮೋದಿ ವಿರುದ್ಧ ರಾಹುಲ್‌ ಟ್ವೀಟ್‌; ಇದು ಮಹಾ ಜುಮ್ಲಾಗಳ ಸರ್ಕಾರ ಎಂದು ತೀವ್ರ ವಾಗ್ದಾಳಿ

8 ವರ್ಷಗಳ ಹಿಂದೆ ಯುವಕರಿಗೆ ಪ್ರತಿ ವರ್ಷ 2 ಕೋಟಿ ಉದ್ಯೋಗ ಎಂಬ 'ಮಹಾ ಜುಮ್ಲಾ' ನೀಡಿದ್ದ ಮೋದಿ ಜೀ ಮತ್ತೊಮ್ಮೆ ಯುವಕರಿಗೆ ಮುಂದಿನ 1.5 ವರ್ಷಗಳಲ್ಲಿ 10 ಲಕ್ಷ ಸರ್ಕಾರಿ ಉದ್ಯೋಗಗಳ ಭರವಸೆ ನೀಡಿದ್ದಾರೆ - ರಾಹುಲ್‌ ಗಾಂಧಿ ಟ್ವೀಟ್‌

ಇಡಿ ವಿಚಾರಣೆಯಿಂದ ಹೊರಬರುತ್ತಿದ್ದಂತೆ ಮೋದಿ ವಿರುದ್ಧ ರಾಹುಲ್‌ ಟ್ವೀಟ್‌; ಇದು ಮಹಾ ಜುಮ್ಲಾಗಳ ಸರ್ಕಾರ ಎಂದು ತೀವ್ರ ವಾಗ್ದಾಳಿ
ಇಡಿ ವಿಚಾರಣೆಯಿಂದ ಹೊರಬರುತ್ತಿದ್ದಂತೆ ಮೋದಿ ವಿರುದ್ಧ ರಾಹುಲ್‌ ಟ್ವೀಟ್‌; ಇದು ಮಹಾ ಜುಮ್ಲಾಗಳ ಸರ್ಕಾರ ಎಂದು ತೀವ್ರ ವಾಗ್ದಾಳಿ
TV9 Web
| Updated By: ಸಾಧು ಶ್ರೀನಾಥ್​|

Updated on:Jun 14, 2022 | 5:49 PM

Share

ನವದೆಹಲಿ: ನ್ಯಾಷನಲ್ ಹೆರಾಲ್ಡ್​​ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಎರಡನೆಯ ದಿನವಾದ ಇಂದು ವಿಚಾರಣೆ ಮುಗಿಸಿಕೊಂಡು ಹೊರಬಂದ ಕಾಂಗ್ರೆಸ್​ ನಾಯಕ ರಾಹುಲ್‌ ಗಾಂಧಿ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ವಿರುದ್ಧ ಹಿಂದಿಯಲ್ಲಿ ಟ್ವೀಟ್ ಮಾಡಿ (Rahul Gandhi Tweet), ತೀವ್ರ ವಾಗ್ದಾಳಿ ನಡೆಸಿದ್ದಾರೆ. ಉದ್ಯೋಗ ನೀಡುವ ಭರವಸೆ ನೀಡಿದ್ದ ಮೋದಿ ವಿರುದ್ಧ ಮುಗಿಬಿದ್ದಿದ್ದಾರೆ. 8 ವರ್ಷಗಳ ಹಿಂದೆ ಯುವಕರಿಗೆ ಪ್ರತಿ ವರ್ಷ 2 ಕೋಟಿ ಉದ್ಯೋಗಗಳ ಭರವಸೆ ನೀಡಲಾಗಿತ್ತು. ಆದರೆ ಈಗ 10 ಲಕ್ಷ ಸರ್ಕಾರಿ ಉದ್ಯೋಗ ನೀಡುವ ಸರದಿ ಬಂದಿದೆ. ಇದು ‘ಜುಮ್ಲಾ’ಗಳ ಸರ್ಕಾರವಲ್ಲ, ‘ಮಹಾ ಜುಮ್ಲಾ’ಗಳ ಸರ್ಕಾರ. ಪ್ರಧಾನ ಮಂತ್ರಿ ಉದ್ಯೋಗ ಸೃಷ್ಟಿಸುವುದರಲ್ಲಿ ಪರಿಣತರಲ್ಲ, ಉದ್ಯೋಗಗಳ ಕುರಿತು ‘ಸುದ್ದಿ’ ಮಾಡುವುದರಲ್ಲಿ ನಿಪುಣರು ಎಂದು ಜರಿದಿದ್ದಾರೆ.

ಕಾಂಗ್ರೆಸ್​ ನಾಯಕ ರಾಹುಲ್‌ ಗಾಂಧಿ ಟ್ವೀಟ್ ಸಾರಾಂಶ ಹೀಗಿದೆ:

8 ವರ್ಷಗಳ ಹಿಂದೆ ಯುವಕರಿಗೆ ಪ್ರತಿ ವರ್ಷ 2 ಕೋಟಿ ಉದ್ಯೋಗ ಎಂಬ ‘ಮಹಾ ಜುಮ್ಲಾ’ ನೀಡಿದ್ದ ಮೋದಿ ಜೀ ಮತ್ತೊಮ್ಮೆ ಯುವಕರಿಗೆ ಮುಂದಿನ 1.5 ವರ್ಷಗಳಲ್ಲಿ 10 ಲಕ್ಷ ಸರ್ಕಾರಿ ಉದ್ಯೋಗಗಳ ಭರವಸೆ ನೀಡಿದ್ದಾರೆ.

60 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇರುವಾಗ 10 ಲಕ್ಷ ಉದ್ಯೋಗಗಳ ಬಗ್ಗೆ ಮಾತನಾಡುತ್ತಾ ಯಾರನ್ನು ಗೊಂದಲಗೊಳಿಸುತ್ತೀರಿ ಮೋದಿ ಜೀ? ಪ್ರಧಾನ ಮಂತ್ರಿಯವರು ಉದ್ಯೋಗ ಸೃಷ್ಟಿಸುವುದರಲ್ಲಿ ಪರಿಣತರಲ್ಲ, ಉದ್ಯೋಗಗಳ ಕುರಿತು ‘ಸುದ್ದಿ’ ಮಾಡುವುದರಲ್ಲಿ ನಿಪುಣರಲ್ಲ.

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್; 10 ಲಕ್ಷ ಹುದ್ದೆಗಳ ಭರ್ತಿಗೆ ಕೇಂದ್ರ ಸರ್ಕಾರ ನಿರ್ಧಾರ

ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು ಮತ್ತು ಸಚಿವಾಲಯಗಳಲ್ಲಿ ಬಾಕಿಯಿರುವ ಸುಮಾರು 10 ಲಕ್ಷ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಧಾನ ಮಂತ್ರಿ ಕಚೇರಿಯು (Prime Minister’s Office – PMO) ಮಂಗಳವಾರ ತಿಳಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಕಾರ್ಯಾಲಯವು, ‘ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲ ಇಲಾಖೆಗಳು ಸಚಿವಾಲಯಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸುವಂತೆ ಸೂಚನೆ ನೀಡಿದ್ದಾರೆ’ ಎಂದು ಹೇಳಿದೆ.

ವಿವಿಧ ಇಲಾಖೆಗಳ ಉದ್ಯೋಗಿಗಳ ಪರಿಸ್ಥಿತಿ, ಮಾನವ ಸಂಪನ್ಮೂಲದ ಸ್ಥಿತಿಗತಿ ಪರಿಶೀಲಿಸಿದ ಪ್ರಧಾನಿ, ಮುಂದಿನ ಒಂದೂವರೆ ವರ್ಷಗಳ ಅವಧಿಯಲ್ಲಿ 10 ಲಕ್ಷ ಮಂದಿಯನ್ನು ನೇಮಿಸಿಕೊಳ್ಳಬೇಕು ಎಂದು ಸೂಚಿಸಿದ್ದಾರೆ ಎಂದು ಟ್ವೀಟ್​ನಲ್ಲಿ ಮಾಹಿತಿ ನೀಡಲಾಗಿದೆ. ಕಳೆದ ಏಪ್ರಿಲ್ ತಿಂಗಳಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳ ಸಭೆ ನಡೆಸಿದ್ದ ಪ್ರಧಾನಿ, ನೇಮಕಾತಿ ಪ್ರಕ್ರಿಯೆಗೆ ವೇಗ ಕೊಡಬೇಕು ಎಂದು ಸೂಚಿಸಿದ್ದರು. ರಾಜ್ಯಸಭೆಗೆ ಕಳೆದ ಫೆಬ್ರುವರಿ ತಿಂಗಳಲ್ಲಿ ಮಾಹಿತಿ ನೀಡಿದ್ದ ಸರ್ಕಾರವು ಮಾರ್ಚ್ 1, 2020ಕ್ಕೆ ದೇಶದಲ್ಲಿ ಪ್ರಸ್ತುತ 87 ಲಕ್ಷ ಖಾಲಿ ಹುದ್ದೆಗಳಿವೆ ಎಂದು ಹೇಳಿತ್ತು.

ನಿರುದ್ಯೋಗ ವಿಚಾರವಾಗಿ ಕೇಂದ್ರ ಸರ್ಕಾರವನ್ನು ವಿರೋಧ ಪಕ್ಷಗಳು ಸಾಕಷ್ಟು ಬಾರಿ ಟೀಕಿಸಿದ್ದವು. ಇದೀಗ ದೊಡ್ಡಮಟ್ಟದಲ್ಲಿ ಉದ್ಯೋಗ ನೇಮಕಾತಿಗೆ ಆದೇಶಿಸಿರುವ ಸರ್ಕಾರವು ಈ ಟೀಕೆಗಳಿಗೆ ಉತ್ತರ ಕೊಡಲು ಮುಂದಾಗಿದೆ. ವಿವಿಧ ಸರ್ಕಾರಿ ಇಲಾಖೆ ಮತ್ತು ಸಚಿವವಾಲಯಗಳಲ್ಲಿ ಬಾಕಿಯಿರುವ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಇನ್ನು ಮುಂದೆ ಚುರುಕಾಗಲಿದೆ.

ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:33 pm, Tue, 14 June 22

ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ