AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇಷನ್ ಅಂಗಡಿಯಲ್ಲಿ ರಾಷ್ಟ್ರಧ್ವಜಕ್ಕಾಗಿ ಬಡವರಿಂದ ಹಣ ವಸೂಲಿ ಮಾಡುತ್ತಿರುವುದು ನಾಚಿಕೆಗೇಡಿನ ಸಂಗತಿ; ರಾಹುಲ್ ಗಾಂಧಿ ಆರೋಪ

"ರಾಷ್ಟ್ರೀಯತೆಯನ್ನು ಎಂದಿಗೂ ಮಾರಲು ಸಾಧ್ಯವಿಲ್ಲ. ರೇಷನ್ ನೀಡುವಾಗ ಬಡವರಿಂದ ತ್ರಿವರ್ಣ ಧ್ವಜಕ್ಕಾಗಿ 20 ರೂ. ವಸೂಲಿ ಮಾಡುತ್ತಿರುವುದು ನಾಚಿಕೆಗೇಡಿನ ಸಂಗತಿ" ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ರೇಷನ್ ಅಂಗಡಿಯಲ್ಲಿ ರಾಷ್ಟ್ರಧ್ವಜಕ್ಕಾಗಿ ಬಡವರಿಂದ ಹಣ ವಸೂಲಿ ಮಾಡುತ್ತಿರುವುದು ನಾಚಿಕೆಗೇಡಿನ ಸಂಗತಿ; ರಾಹುಲ್ ಗಾಂಧಿ ಆರೋಪ
ರಾಹುಲ್ ಗಾಂಧಿ
TV9 Web
| Updated By: ಸುಷ್ಮಾ ಚಕ್ರೆ|

Updated on:Aug 11, 2022 | 10:10 AM

Share

ನವದೆಹಲಿ: ರೇಷನ್ ಕಾರ್ಡ್​ ಇರುವ ಎಲ್ಲರಿಗೂ ರಾಷ್ಟ್ರಧ್ವಜ (National Flag) ಖರೀದಿಸುವಂತೆ ರೇಷನ್ ಅಂಗಡಿಯವರು ಒತ್ತಾಯಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಆರೋಪಿಸಿದ್ದಾರೆ. ಬಿಜೆಪಿಯು ಧ್ವಜದ ಹೆಸರಿನಲ್ಲಿ ರಾಷ್ಟ್ರೀಯತೆಯನ್ನು ಮಾರಾಟ ಮಾಡುತ್ತಿದೆ, ಇದರಿಂದ ಬಡವರ ಆತ್ಮಗೌರವಕ್ಕೆ ಧಕ್ಕೆ ಉಂಟಾಗಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಈ ಬಗ್ಗೆ ಹಿಂದಿಯಲ್ಲಿ ಫೇಸ್‌ಬುಕ್ ಪೋಸ್ಟ್‌ (Facebook Post) ಮಾಡಿರುವ ರಾಹುಲ್ ಗಾಂಧಿ ಭಾರತದ ತ್ರಿವರ್ಣ ಧ್ವಜ ನಮ್ಮ ಹೆಮ್ಮೆಯಾಗಿದೆ. ತ್ರಿವರ್ಣ ಧ್ವಜ ಪ್ರತಿಯೊಬ್ಬ ಭಾರತೀಯನ ಹೃದಯದಲ್ಲಿ ನೆಲೆಸಿದೆ ಎಂದು ಹೇಳಿದ್ದಾರೆ.

“ರಾಷ್ಟ್ರೀಯತೆಯನ್ನು ಎಂದಿಗೂ ಮಾರಲು ಸಾಧ್ಯವಿಲ್ಲ. ರೇಷನ್ ನೀಡುವಾಗ ಬಡವರಿಂದ ತ್ರಿವರ್ಣ ಧ್ವಜಕ್ಕಾಗಿ 20 ರೂ. ವಸೂಲಿ ಮಾಡುತ್ತಿರುವುದು ನಾಚಿಕೆಗೇಡಿನ ಸಂಗತಿ” ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

“ತ್ರಿವರ್ಣ ಧ್ವಜದ ಜೊತೆಗೆ ಬಿಜೆಪಿ ಸರ್ಕಾರವು ನಮ್ಮ ದೇಶದ ಬಡವರ ಸ್ವಾಭಿಮಾನದ ಮೇಲೂ ದಾಳಿ ಮಾಡುತ್ತಿದೆ” ಎಂದಿರುವ ರಾಹುಲ್ ಗಾಂಧಿ ಕೆಲವು ಪಡಿತರ ಚೀಟಿದಾರರು ತಮ್ಮ ಬಳಿ ರೇಷನ್ ಅಂಗಡಿಯವರು 20 ರೂ. ಕೊಟ್ಟು ಬಾವುಟ ಖರೀದಿಸಲು ಒತ್ತಾಯಿಸಿದ್ದಾರೆ ಎಂದು ದೂರುತ್ತಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ
Image
PM Modi Speech: ಯೋಗ ಶಾಂತಿ ತಂದುಕೊಡುತ್ತದೆ; ಶಾಂತಿ ವ್ಯಕ್ತಿಗೆ ಸೀಮಿತವಾಗಿಲ್ಲ, ಇಡೀ ಜಗತ್ತಿಗೆ ಅನ್ವಯ ಆಗುತ್ತೆ
Image
International Yoga Day 2022: ರಾಧಿಕಾ ನಾರಾಯಣ್​ ಫಿಟ್ನೆಸ್​ ರಹಸ್ಯವೇ ಯೋಗಾಸನ; ಇಲ್ಲಿವೆ ಫೋಟೋಗಳು
Image
International Yoga Day 2022: ಜಗತ್ತಿಗೆ ಯೋಗ ಸೂತ್ರವನ್ನು ನೀಡಿದ ಮಹಾತ್ಮರು ಇವರೇ, ಮಹರ್ಷಿ ಪತಂಜಲಿ
Image
International Yoga Day 2022: ಯೋಗದಿಂದ ಬದಲಾಯಿತು ಈ ಬಾಲಿವುಡ್ ನಟಿಯರ ಬದುಕು; ಇಲ್ಲಿದೆ ವಿವರ

ಇದನ್ನೂ ಓದಿ: ಮನೆ ಮನೆಯಲ್ಲಿ ತ್ರಿವರ್ಣ ಧ್ವಜ ಅಭಿಯಾನದ ಪ್ರಯುಕ್ತ ಅಧಿಕಾರಿಗಳೊಂದಿಗೆ ಸಿಎಂ ಬೊಮ್ಮಾಯಿ ಸಭೆ

ಇದಕ್ಕೂ ಮುನ್ನ ಬಿಜೆಪಿ ಸಂಸದ ವರುಣ್ ಗಾಂಧಿ ಕೂಡ ಪಡಿತರ ಚೀಟಿದಾರರು ರೇಷನ್ ಪಡೆಯಲು ರಾಷ್ಟ್ರಧ್ವಜವನ್ನು ಖರೀದಿಸುವಂತೆ ಒತ್ತಾಯಿಸಲಾಗುತ್ತಿದೆ ಎಂದು ಆರೋಪಿಸಿದ್ದರು. ಸ್ವಾತಂತ್ರ್ಯ ದಿನಾಚರಣೆಯ 75ನೇ ಆಚರಣೆಗಳು ಬಡವರಿಗೆ ಹೊರೆಯಾದರೆ ಅದು ದುರದೃಷ್ಟಕರ ಎಂದಿದ್ದರು.

ಹಿಂದಿಯಲ್ಲಿ ಟ್ವೀಟ್ ಮಾಡಿರುವ ವರುಣ್ ಗಾಂಧಿ, ತ್ರಿವರ್ಣ ಧ್ವಜಕ್ಕಾಗಿ ಬಡವರಿಗೆ ಹಣ ನೀಡುವಂತೆ ಒತ್ತಾಯಿಸುವುದು ಮತ್ತು ಅವರಿಗೆ ನೀಡಲಾಗುವ ಆಹಾರವನ್ನು ನಿರಾಕರಿಸುವುದು ನಾಚಿಕೆಗೇಡು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸ್ವಾತಂತ್ರ್ಯ ದಿನಾಚರಣೆ: ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣಕ್ಕೆ ಸಚಿವರನ್ನು ನೇಮಿಸಿದ ಸರ್ಕಾರ

ಕೇಂದ್ರ ಸರ್ಕಾರವು ತನ್ನ ‘ಹರ್ ಘರ್ ತಿರಂಗ’ ಕಾರ್ಯಕ್ರಮದ ಭಾಗವಾಗಿ ಆಗಸ್ಟ್ 13ರಿಂದ 15ರವರೆಗೆ ತಮ್ಮ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸಬೇಕು ಎಂದು ಜನರಲ್ಲಿ ಮನವಿ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಈ ಕರೆಯ ಹಿನ್ನೆಲೆಯಲ್ಲಿ ಆಜಾದಿ ಕಾ ಅಮೃತ ಮಹೋತ್ಸವವವನ್ನು ದೊಡ್ಡ ಮಟ್ಟದಲ್ಲಿ ಯಶಸ್ವಿಗೊಳಿಸಲು ಬಿಜೆಪಿ ಅಭಿಯಾನ ನಡೆಸುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:08 am, Thu, 11 August 22

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ