AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Gandhi: ಪ್ರಧಾನಿ ಮೋದಿ 2 ಭಾರತ ಸೃಷ್ಟಿಸುತ್ತಿದ್ದಾರೆ; ಪೋರ್ಷೆ ಅಪಘಾತದ ಬಗ್ಗೆ ರಾಹುಲ್ ಗಾಂಧಿ ವಾಗ್ದಾಳಿ

ಪುಣೆ ಪೋರ್ಷೆ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದರು. ಈ ರಸ್ತೆ ಅಪಘಾತ ಪ್ರಕರಣದ ಆರೋಪಿಗಳಿಗೆ ಕೂಡಲೇ ಜಾಮೀನು ನೀಡಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಆದರೆ, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ತಪ್ಪಿತಸ್ಥರ ವಿರುದ್ಧ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುವಂತೆ ಉನ್ನತ ಪೊಲೀಸರಿಗೆ ಸೂಚಿಸಿದ್ದಾರೆ.

Rahul Gandhi: ಪ್ರಧಾನಿ ಮೋದಿ 2 ಭಾರತ ಸೃಷ್ಟಿಸುತ್ತಿದ್ದಾರೆ; ಪೋರ್ಷೆ ಅಪಘಾತದ ಬಗ್ಗೆ ರಾಹುಲ್ ಗಾಂಧಿ ವಾಗ್ದಾಳಿ
ರಾಹುಲ್ ಗಾಂಧಿ
ಸುಷ್ಮಾ ಚಕ್ರೆ
|

Updated on: May 21, 2024 | 9:18 PM

Share

ಪುಣೆ: ಮಹಾರಾಷ್ಟ್ರದ ಪುಣೆ ಪೋರ್ಷೆ ಅಪಘಾತ (Pune Porsche accident) ಪ್ರಕರಣದ ಬಗ್ಗೆ ಜುವೆನೈಲ್ ಜಸ್ಟೀಸ್ ಬೋರ್ಡ್ ಇತ್ತೀಚೆಗೆ ನೀಡಿರುವ ಆದೇಶದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿ ಟೀಕಾಪ್ರಹಾರ ನಡೆಸಿದ್ದಾರೆ. ‘ನರೇಂದ್ರ ಮೋದಿ (Narendra Modi) ಎರಡು ಭಾರತಗಳನ್ನು ಸೃಷ್ಟಿಸುತ್ತಿದ್ದಾರೆ. ಅಲ್ಲಿ ನ್ಯಾಯವೂ ಸಂಪತ್ತಿನ ಮೇಲೆ ಅವಲಂಬಿತವಾಗಿದೆ’ ಎಂಬ ಶೀರ್ಷಿಕೆಯೊಂದಿಗೆ ರಾಹುಲ್ ಗಾಂಧಿ ಎಕ್ಸ್​ನಲ್ಲಿ ವೀಡಿಯೊ ಹೇಳಿಕೆಯನ್ನು ಪ್ರಕಟಿಸಿದ್ದಾರೆ.

“ಬಸ್, ಟ್ರಕ್ ಅಥವಾ ಓಲಾ-ಉಬರ್ ಚಾಲಕರು ತಪ್ಪಾಗಿ ಯಾರನ್ನಾದರೂ ರಸ್ತೆ ಅಪಘಾತದಲ್ಲಿ ಕೊಂದರೆ, ಅವರನ್ನು 10 ವರ್ಷಗಳ ಕಾಲ ಜೈಲಿಗೆ ಕಳುಹಿಸಲಾಗುತ್ತದೆ, ವಾಹನದ ಕೀಯನ್ನು ಕಸಿದುಕೊಳ್ಳಲಾಗುತ್ತದೆ. ಆದರೆ, 16 ವರ್ಷ ವಯಸ್ಸಿನವನು ಪೋರ್ಷೆ ಕಾರನ್ನು ಅಮಲೇರಿದ ಸ್ಥಿತಿಯಲ್ಲಿ ಓಡಿಸಿ ಇಬ್ಬರು ವ್ಯಕ್ತಿಗಳನ್ನು ಕೊಂದಿದ್ದಾನೆ. ಆದರೂ ಅವನಿಗೆ ಸೂಕ್ತ ಶಿಕ್ಷೆಯಾಗಿಲ್ಲ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ.

ಇದನ್ನೂ ಓದಿ: ಅಪ್ರಾಪ್ತ ಚಾಲಕನಿಂದ ಪ್ರಮಾದ, ಕಾರು ಅಪಘಾತ, ಇಬ್ಬರು ಸಾವು, ಬಾಲಕನ ತಂದೆಯ ಬಂಧನ

ಈ ಹಿಂದೆ ಪುಣೆಯ ಜುವೆನೈಲ್ ಜಸ್ಟಿಸ್ ಬೋರ್ಡ್ ಇಬ್ಬರು ಜನರನ್ನು ಕೊಂದ ಕಾರು ಅಪಘಾತದಲ್ಲಿ ಭಾಗಿಯಾಗಿದ್ದ ಅಪ್ರಾಪ್ತನಿಗೆ ಜಾಮೀನು ನೀಡಿತ್ತು. ಆದರೆ, ಆತನನ್ನು ವಯಸ್ಕ ಆರೋಪಿ ಎಂದು ಪರಿಗಣಿಸಿ ವಿಚಾರಣೆ ನಡೆಸಲು ಉನ್ನತ ನ್ಯಾಯಾಲಯದ ಅನುಮತಿ ಪಡೆಯುವುದಾಗಿ ಪೊಲೀಸರು ತಿಳಿಸಿದ್ದರು. ಯುವಕನನ್ನು ಬಾಲಾಪರಾಧ ನ್ಯಾಯ ಮಂಡಳಿಯ ಮುಂದೆ ಹಾಜರುಪಡಿಸಲಾಯಿತು, ಅದು ಕೆಲವೇ ಗಂಟೆಗಳ ನಂತರ ಅವನಿಗೆ ಜಾಮೀನು ನೀಡಿದೆ. ಪ್ರಾದೇಶಿಕ ಸಾರಿಗೆ ಕಚೇರಿಗೆ ಭೇಟಿ ನೀಡಿ ಸಂಚಾರ ನಿಯಮಗಳ ಬಗ್ಗೆ ಅಧ್ಯಯನ ನಡೆಸಿ 15 ದಿನಗಳೊಳಗೆ ಮಂಡಳಿಗೆ ಪ್ರಸ್ತುತಿ ಸಲ್ಲಿಸುವಂತೆಯೂ ಸೂಚಿಸಿದೆ.

ಇದನ್ನೂ ಓದಿ: ಪೋರ್ಷೆ ಕಾರು ಅಪಘಾತ ಪ್ರಕರಣ: ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ ಆರೋಪಿಗೆ ಪೊಲೀಸ್ ಕಸ್ಟಡಿಯಲ್ಲಿ ಪಿಜ್ಜಾ ನೀಡಲಾಗಿತ್ತು; ಕಾಂಗ್ರೆಸ್ ಆರೋಪ

ಪಾನಮತ್ತನಾಗಿದ್ದ ಹುಡುಗ ಚಲಾಯಿಸುತ್ತಿದ್ದ ಪೋರ್ಷೆ ಕಾರು ಭಾನುವಾರ ಮುಂಜಾನೆ ಪುಣೆ ನಗರದ ಕಲ್ಯಾಣಿ ನಗರ ಪ್ರದೇಶದಲ್ಲಿ ಇಬ್ಬರು ಮೋಟಾರ್ ಬೈಕ್ ಸವಾರರನ್ನು ಡಿಕ್ಕಿ ಹೊಡೆದು ಅವರ ಸಾವಿಗೆ ಕಾರಣವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಅನೀಶ್ ಅವಧಿಯಾ ಮತ್ತು ಅಶ್ವಿನಿ ಕೋಷ್ಟ ಎಂದು ಗುರುತಿಸಲಾಗಿದ್ದು, ಇಬ್ಬರೂ ಮಧ್ಯಪ್ರದೇಶದ 24 ವರ್ಷದ ಐಟಿ ಉದ್ಯೋಗಿಗಳಾಗಿದ್ದಾರೆ. ಆರೋಪಿ ಬಾಲಾಪರಾಧಿ ತನ್ನ ಸ್ನೇಹಿತರೊಂದಿಗೆ ರಾತ್ರಿ 9.30ರಿಂದ 1 ಗಂಟೆಯ ನಡುವೆ ಬಾರ್​ಗೆ ಹೋಗಿ ಮದ್ಯ ಸೇವಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!