AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ, ಕಾಂಗ್ರೆಸ್​ ಪೋಸ್ಟರ್ ವಾರ್:ರಾಹುಲ್​ ಗಾಂಧಿಯನ್ನು ರಾವಣ ಎಂದ ಬಿಜೆಪಿ, ಮೋದಿ ಸುಳ್ಳುಗಾರ ಎಂದ ಕಾಂಗ್ರೆಸ್​

ಲೋಕಸಭಾ ಚುನಾವಣೆ ಸನ್ನಿಹಿತವಾಗುತ್ತಿದ್ದಂತೆ ಬಿಜೆಪಿ(BJP) ಹಾಗೂ ಕಾಂಗ್ರೆಸ್(Congress)​ ನಡುವೆ ರಾಜಕೀಯ ಯುದ್ಧ ಶುರುವಾಗಿದೆ. ಬಿಜೆಪಿ ಹಾಗೂ ಕಾಂಗ್ರೆಸ್​ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ಪೋಸ್ಟರ್​ ವಾರ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಆಡಳಿತಾರೂಢ ಬಿಜೆಪಿಯು ಟ್ವಿಟ್ಟರ್​ನಲ್ಲಿ ಪೋಸ್ಟರ್​ವೊಂದನ್ನು ಹಂಚಿಕೊಂಡಿದ್ದು ಅದರಲ್ಲಿ ರಾಹುಲ್ ಗಾಂಧಿ(Rahul Gandhi)ಯನ್ನು ಹೊಸ ಯುಗದ ರಾವಣ ಎಂದು ಕರೆದಿದೆ ಇದನ್ನು ಕಾಂಗ್ರೆಸ್​ ಬದಲವಾಗಿ ಟೀಕಿಸಿದ್ದು, ಪ್ರಧಾನಿ ನರೇಂದ್ರ ಮೋದಿ(Narendra Modi)ಯವರ ಚಿತ್ರವನ್ನು ಹಾಕಿ ಸುಳ್ಳುಗಾರ ಎಂದು ಕರೆದಿದೆ.

ಬಿಜೆಪಿ, ಕಾಂಗ್ರೆಸ್​ ಪೋಸ್ಟರ್ ವಾರ್:ರಾಹುಲ್​ ಗಾಂಧಿಯನ್ನು ರಾವಣ ಎಂದ ಬಿಜೆಪಿ, ಮೋದಿ ಸುಳ್ಳುಗಾರ ಎಂದ ಕಾಂಗ್ರೆಸ್​
ರಾಹುಲ್ ಗಾಂಧಿImage Credit source: India Today
ನಯನಾ ರಾಜೀವ್
|

Updated on:Oct 06, 2023 | 9:57 AM

Share

ಲೋಕಸಭಾ ಚುನಾವಣೆ ಸನ್ನಿಹಿತವಾಗುತ್ತಿದ್ದಂತೆ ಬಿಜೆಪಿ(BJP) ಹಾಗೂ ಕಾಂಗ್ರೆಸ್(Congress)​ ನಡುವೆ ರಾಜಕೀಯ ಯುದ್ಧ ಶುರುವಾಗಿದೆ. ಬಿಜೆಪಿ ಹಾಗೂ ಕಾಂಗ್ರೆಸ್​ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ಪೋಸ್ಟರ್​ ವಾರ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಆಡಳಿತಾರೂಢ ಬಿಜೆಪಿಯು ಟ್ವಿಟ್ಟರ್​ನಲ್ಲಿ ಪೋಸ್ಟರ್​ವೊಂದನ್ನು ಹಂಚಿಕೊಂಡಿದ್ದು ಅದರಲ್ಲಿ ರಾಹುಲ್ ಗಾಂಧಿ(Rahul Gandhi)ಯನ್ನು ನವ ಯುಗದ ರಾವಣ ಎಂದು ಕರೆದಿದೆ ಇದನ್ನು ಕಾಂಗ್ರೆಸ್​ ಬದಲವಾಗಿ ಟೀಕಿಸಿದ್ದು, ಪ್ರಧಾನಿ ನರೇಂದ್ರ ಮೋದಿ(Narendra Modi)ಯವರ ಚಿತ್ರವನ್ನು ಹಾಕಿ ಸುಳ್ಳುಗಾರ ಎಂದು ಕರೆದಿದೆ.

ಜಾರ್ಜ್ ಸೊರೊಸ್ ನಿರ್ದೇಶನದ – ಇಂಡಿಯಾ ಇನ್ ಡೇಂಜರ್ – ಕಾಂಗ್ರೆಸ್ ಪಾರ್ಟಿ ಪ್ರೊಡಕ್ಷನ್ ಎಂಬ ಶೀರ್ಷಿಕೆಯ ಹ್ಯಾಂಡಲ್‌ನಲ್ಲಿ ರಾಹುಲ್ ಗಾಂಧಿಯ ಬಹು-ತಲೆಯ ಪೋಸ್ಟರ್ ಅನ್ನು ಬಿಡುಗಡೆ ಮಾಡಲಾಗಿದೆ. ಹೊಸ ಯುಗದ ರಾವಣ ಎಂದು ಬಿಜೆಪಿ ಬರೆದಿದೆ.

ಟ್ವೀಟ್‌ನಲ್ಲಿ ಬಿಜೆಪಿ ಹಂಗೇರಿ-ಅಮೆರಿಕನ್ ಉದ್ಯಮಿ ಜಾರ್ಜ್ ಸೊರಸ್ ಅವರನ್ನೂ ಗುರಿಯಾಗಿಸಿದೆ. ಪೋಸ್ಟರ್ ನಲ್ಲಿ ರಾಹುಲ್ ಗಾಂಧಿ ರಾವಣನ ರೂಪದಲ್ಲಿರುವ ಚಿತ್ರವನ್ನು ಶೇರ್ ಮಾಡುವ ಭರದಲ್ಲಿ ಬಿಜೆಪಿ ಹೊಸ ಯುಗದ ರಾವಣ ಎಂದು ಬರೆದುಕೊಂಡಿದೆ. ಅವರು ದುಷ್ಟ, ಧರ್ಮ ವಿರೋಧಿ ಮತ್ತು ರಾಮ ವಿರೋಧಿ. ಭಾರತವನ್ನು ನಾಶ ಮಾಡುವುದು ಇವರ ಗುರಿಯಾಗಿದೆ ಎಂದು ಬರೆದಿದೆ.

ಈ ಬಗ್ಗೆ ಕಾಂಗ್ರೆಸ್​ನ ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಪ್ರತಿದಾಳಿ ನಡೆಸಿದ್ದಾರೆ. ಹಿಂಸಾಚಾರವನ್ನು ಉತ್ತೇಜಿಸುವುದು ಬಿಜೆಪಿಯ ಪ್ರಯತ್ನವಾಗಿದೆ ಎಂದು ಅವರು ಹೇಳಿದ್ದಾರೆ. ಪ್ರಧಾನಿ ಅವರು ಪ್ರತಿದಿನ ಹೇಳುವುದೆಲ್ಲಾ ಸುಳ್ಳು ಅವರು ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದಾರೆ ಎಂದು ಹೇಳಿದ್ದಾರೆ.

ನೀವು ರಾಜಕೀಯ ಮತ್ತು ಚರ್ಚೆಯನ್ನು ಯಾವ ಮಟ್ಟಕ್ಕೆ ಕೊಂಡೊಯ್ಯಲು ಬಯಸುತ್ತೀರಿ? ಹಿಂಸಾತ್ಮಕ ಮತ್ತು ಪ್ರಚೋದನಕಾರಿ ಟ್ವೀಟ್‌ಗಳನ್ನು ನೀವು ಒಪ್ಪುತ್ತೀರಾ? ನಿಮ್ಮ ಪಕ್ಷದ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಿಂದ ಪೋಸ್ಟ್ ಮಾಡಲಾಗಿದೆಯೇ ಎಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಜೆಪಿ ನಡ್ಡಾ ಅವರ ಬಳಿ ಪ್ರಿಯಾಂಕಾ ಗಾಂಧಿ ವಾದ್ರಾ ಪ್ರಶ್ನಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:44 am, Fri, 6 October 23

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ