
ನವದೆಹಲಿ, ಮೇ 25: ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ನಿರಂತರ ಏರಿಕೆಯನ್ನು ಖಂಡಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಅವರು ಇಂದು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ‘ಹಣದುಬ್ಬರ ಮನುಷ್ಯ’ ಎಂದು ಕರೆದಿರುವ ರಾಹುಲ್ ಗಾಂಧಿ ಕೇಂದ್ರ ಸರ್ಕಾರವು ಜನರ ಜೇಬಿಗೆ ಕತ್ತರಿ ಹಾಕುತ್ತಿದೆ ಎಂದು ಆರೋಪಿಸಿದ್ದಾರೆ.
ಪ್ರಮುಖ ಮುಖ್ಯಾಂಶಗಳು:
“ಹಣದುಬ್ಬರದ ಮನುಷ್ಯ ಪ್ರಧಾನಿ ಮೋದಿ ಜನರಿಗೆ ತಕ್ಷಣಕ್ಕೆ ತಿಳಿಯದಂತೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಕಂತುಗಳಲ್ಲಿ ಹೆಚ್ಚಿಸುತ್ತಿದ್ದಾರೆ. ಇದರಿಂದ ಸಾರ್ವಜನಿಕರ ಜೇಬಿನಿಂದ ಲೂಟಿ ಮಾಡುತ್ತಿದ್ದಾರೆ” ಎಂದು ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.
ಇದನ್ನೂ ಓದಿ: ಮೋದಿ, ಬಿಜೆಪಿ, ಆರ್ಎಸ್ಎಸ್ ದೇಶದ್ರೋಹಿಗಳು ಎಂದ ರಾಹುಲ್ಗೆ ಜೋಶಿ ತಿರುಗೇಟು
“ದೇಶದಲ್ಲಿ ಆರ್ಥಿಕ ಬಿಕ್ಕಟ್ಟು ಹಾಗೂ ಬೆಲೆ ಏರಿಕೆಯ ಬಿರುಗಾಳಿ ಬರಲಿದೆ ಎಂದು ನಾನು ಕೆಲವು ತಿಂಗಳುಗಳಿಂದ ಎಚ್ಚರಿಸುತ್ತಿದ್ದೆ. ಆದರೆ, ಮೋದಿ ಅವರು ಎಂದಿನಂತೆ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದರು. ಈಗ ಚುನಾವಣೆಗಳು ಮುಗಿಯುತ್ತಿದ್ದಂತೆ ಪೆಟ್ರೋಲ್-ಡೀಸೆಲ್ ಬೆಲೆಯನ್ನು ಬರೋಬ್ಬರಿ 8 ರೂ.ಗಳಷ್ಟು ಹೆಚ್ಚಿಸಲಾಗಿದೆ. ಚುನಾವಣೆಯ ಸಮಯದಲ್ಲಿ ದೊಡ್ಡ ದೊಡ್ಡ ಭರವಸೆಗಳನ್ನು ನೀಡುವುದು, ಆ ನಂತರದ ಸಮಯದಲ್ಲಿ ಜನರ ಜೇಬಿಗೆ ಕತ್ತರಿ ಹಾಕುವುದೇ ಈ ಸರ್ಕಾರದ ಕೆಲಸ” ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ.
महंगाई मानव मोदी का फिर से हमला।
पेट्रोल-डीज़ल के दाम किश्तों में बढ़ाते हैं – ताकि चुपके-चुपके आपकी जेब कटती रहे।
मैं महीनों से आर्थिक तूफान आने की बात कह रहा था। पर मोदी जी तब हमेशा की तरह चुनाव में व्यस्त थे – और चुनाव खत्म होते ही पेट्रोल-डीजल ₹8 महंगा कर दिया।
और, ये…
— Rahul Gandhi (@RahulGandhi) May 25, 2026
ಇರಾನ್ ಯುದ್ಧದ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಗಳು ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವುದರಿಂದ, ಭಾರತೀಯ ತೈಲ ಕಂಪನಿಗಳು ಮೇ 15ರಿಂದ ಸತತವಾಗಿ ಇಂಧನ ದರವನ್ನು ಪರಿಷ್ಕರಿಸುತ್ತಿವೆ. ಕೇವಲ 10 ದಿನಗಳಲ್ಲಿ ಒಟ್ಟಾರೆ ತೈಲ ಬೆಲೆ ಸುಮಾರು 7.50 ರೂ.ಗಳಷ್ಟು ಹೆಚ್ಚಾಗಿದೆ.
ಇದನ್ನೂ ಓದಿ: ಜಗತ್ತಿಗೆ ಎದುರಾಗಿದೆ ಭೀಕರ ಬಡತನದ ಭೀತಿ, ಕೋವಿಡ್, ಯುದ್ಧ ಮತ್ತು ಇಂಧನ ಬಿಕ್ಕಟ್ಟಿನ ಬಗ್ಗೆ ಪ್ರಧಾನಿ ಮೋದಿ ಗಂಭೀರ ಎಚ್ಚರಿಕೆ
ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೂ ಸಹ ಕೇಂದ್ರದ ವಿರುದ್ಧ ಹರಿಹಾಯ್ದಿದ್ದು, ಇದನ್ನು “ಇಂಧನ ಲೂಟಿ” ಎಂದು ಕರೆದಿದ್ದಾರೆ. ಮೋದಿ ಸರ್ಕಾರವು ಸಾಮಾನ್ಯ ಜನರ ಉಳಿತಾಯದ ಹಣವನ್ನು ಸುಟ್ಟು ಹಾಕಲು ಪೆಟ್ರೋಲ್ ಚಿಮುಕಿಸುತ್ತಿದೆ. ತೈಲ ಬೆಲೆ ಏರಿಕೆಯಿಂದಾಗಿ ಸಾರಿಗೆ ವೆಚ್ಚಗಳು ಹೆಚ್ಚಾಗಲಿದ್ದು, ಇದರ ನೇರ ಹೊರೆ ರೈತರು, ಸಣ್ಣ ಉದ್ಯಮಗಳು (MSME) ಮತ್ತು ಮಧ್ಯಮ ವರ್ಗದ ಕುಟುಂಬಗಳ ಬಜೆಟ್ ಮೇಲೆ ಬೀಳಲಿದೆ” ಎಂದು ಮಲ್ಲಿಕಾರ್ಜುನ ಖರ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ