AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಡಾಖ್​​ನಲ್ಲಿ ಚೀನಾ ಉಪಟಳ: ಮತ್ತೆ 56 ಇಂಚಿನ ಎದೆ ಬಗ್ಗೆ ಪ್ರಸ್ತಾಪಿಸಿ, ಪ್ರಧಾನಿಯನ್ನು ಟೀಕಿಸಿದ ರಾಹುಲ್​ ಗಾಂಧಿ

ಚೀನಾದ ಸೈನಿಕರು ಆಗಸ್ಟ್​ 30ರಂದು ಉತ್ತರಾಖಂಡ್​​ನ ಬಾರಾಹೋಟಿ ವಲಯದಲ್ಲಿ ಇರುವ ಗಡಿ ವಾಸ್ತವಿಕ ನಿಯಂತ್ರಣಾ ರೇಖೆ (ಎಲ್​ಎಸಿ)ಯನ್ನು ದಾಟಿ ಬಂದಿದ್ದರು ಎನ್ನಲಾಗಿದೆ.

ಲಡಾಖ್​​ನಲ್ಲಿ ಚೀನಾ ಉಪಟಳ: ಮತ್ತೆ 56 ಇಂಚಿನ ಎದೆ ಬಗ್ಗೆ ಪ್ರಸ್ತಾಪಿಸಿ, ಪ್ರಧಾನಿಯನ್ನು ಟೀಕಿಸಿದ ರಾಹುಲ್​ ಗಾಂಧಿ
ರಾಹುಲ್​ ಗಾಂಧಿ
TV9 Web
| Updated By: Lakshmi Hegde|

Updated on: Oct 03, 2021 | 4:01 PM

Share

ಲಡಾಖ್​ ಮತ್ತು ಉತ್ತರಾಖಂಡ್​​ ಗಡಿಗಳಲ್ಲಿ ಚೀನಾ ಸೇನಾ ಪಡೆಯ ನಿಯೋಜನೆ ಪ್ರಮಾಣ ಹೆಚ್ಚುತ್ತಿದೆ. ಪೂರ್ವ ಮತ್ತು ಉತ್ತರ ಲಡಾಖ್​​ನಲ್ಲಿ ಚೀನಾದ ಸೈನಿಕರ ಸಂಖ್ಯೆ ಹೆಚ್ಚುತ್ತಿದ್ದು, ಅವರನ್ನು ಎದುರಿಸಲು ಭಾರತ ಕೂಡ ಎಲ್ಲ ರೀತಿಯ ಸಿದ್ಧತೆಯಲ್ಲಿ ತೊಡಗಿದೆ. ನಿನ್ನೆ ಈ ಬಗ್ಗೆ ಮಾತನಾಡಿದ್ದ ಸೇನಾ ಮುಖ್ಯಸ್ಥ ನರವಾನೆ ಕೂಡ, ತಾವು ಯಾವುದೇ ಸಂದರ್ಭ ಬಂದರೂ ಎದುರಿಸಲು ಸಜ್ಜಾಗಿದ್ದೇವೆ ಎಂದು ಹೇಳಿಕೊಂಡಿದ್ದಾರೆ. ಆದರೆ ಈ ಮಧ್ಯೆ ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿ ಟ್ವೀಟ್​ ಮಾಡಿ ಕೇಂದ್ರ ಸರ್ಕಾರ, ಪ್ರಧಾನಿ ಮೋದಿಯನ್ನು ವ್ಯಂಗ್ಯಮಾಡಿದ್ದಾರೆ.

ಚೀನಾ+ಪಾಕಿಸ್ತಾನ+ಮಿ.56 ಇಂಚ್ -ಇವಿಷ್ಟೂ ಕೂಡಿಸಿದರೆ ಬರುವ ಉತ್ತರ ‘ಭಾರತದಲ್ಲಿ ಚೀನಾ ಯೋಧರ ಆಕ್ರಮಣ ಹೆಚ್ಚಳ’ ಎಂಬ ಉತ್ತರ ಬರುತ್ತದೆ ಎಂದು ಟ್ವೀಟ್​ ಮಾಡಿದ್ದಾರೆ. (“China plus Pakistan plus ‘Mr 56 inch’ is equal to Increasing Chinese occupation of India’s land). ಚೀನಾ ಸೇನಾ ಪಡೆ ಲಡಾಖ್​​ನಲ್ಲಿ ನೀಡುತ್ತಿರುವ ಉಪಟಳದ ವಿಚಾರ ಇಟ್ಟುಕೊಂಡು ರಾಹುಲ್​ ಗಾಂಧಿ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಕಿಡಿಕಾರುತ್ತಿರುವುದು ಇದೇ ಮೊದಲೇನೂ ಇಲ್ಲ. ಹಿಂದೆ ಚೀನಾ ಸೈನಿಕರ ದಾಳಿಗೆ ಭಾರತದ ಸುಮಾರು 20 ಯೋಧರು ಮಡಿದಾಗಲೂ ಕಾಂಗ್ರೆಸ್​ನ ರಾಹುಲ್​ ಗಾಂಧಿ ಸೇರಿ ಹಲವು ಮುಖಂಡರು ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರಿದ್ದರು.

ಉತ್ತರಾಖಂಡ್​​ನಲ್ಲಿ ಗಡಿ ದಾಟಿದ ಚೀನಾ? ಚೀನಾದ ಪೀಪಲ್ಸ್​ ಲಿಬರೇಶನ್​ ಆರ್ಮಿ ಸೈನಿಕರು ಆಗಸ್ಟ್​ 30ರಂದು ಉತ್ತರಾಖಂಡ್​​ನ ಬಾರಾಹೋಟಿ ವಲಯದಲ್ಲಿ ಇರುವ ಗಡಿ ವಾಸ್ತವಿಕ ನಿಯಂತ್ರಣಾ ರೇಖೆ (ಎಲ್​ಎಸಿ)ಯನ್ನು ದಾಟಿ ಬಂದಿದ್ದರು. ನಂತರ ಅಲ್ಲಿ ಕೆಲ ಕಾಲ ಇದ್ದು ವಾಪಸ್​ ಹೋಗಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ. ಹಾಗಂತ ಭಾರತೀಯ ಸೇನೆಯಿಂದಾಗಲಿ, ಸರ್ಕಾರದಿಂದಾಗಲೀ ಈ ಬಗ್ಗೆ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಇನ್ನು ಪೂರ್ವ ಲಡಾಖ್​​ನಲ್ಲಿ ಕಳೆದ ವರ್ಷ ಮೇ 5ರಿಂದಲೂ ಭಾರತ-ಚೀನಾ ಸೈನಿಕರ ನಡುವೆ ಸಂಘರ್ಷ ನಡೆಯುತ್ತಲೇ ಇದೆ. ಕಳೆದ ಜೂನ್​ನಲ್ಲಿ ಗಲ್ವಾನ್​ ಕಣಿವೆಯಲ್ಲಿ ಚೀನಾ ಸೈನಿಕರ ದಾಳಿಗೆ ಭಾರತದ 20 ಯೋಧರು ಹುತಾತ್ಮರಾಗಿದ್ದರು. ಅಂದಿನಿಂದಲೂ ಅಲ್ಲಿ ಆಗಾಗ ಉದ್ವಿಗ್ನ ಪರಿಸ್ಥಿತಿ ಉಂಟಾಗುತ್ತಿದೆ. ಎರಡೂ ದೇಶಗಳು ತಮ್ಮ ಮಿಲಿಟರಿ ಪ್ರಾಬಲ್ಯ ಹೆಚ್ಚಿಸುತ್ತಿವೆ. ಅದರಾಚೆ ಹಲವು ಸುತ್ತಿನ ರಾಜತಾಂತ್ರಿಕ, ಮಿಲಿಟರಿ ಹಂತದ ಮಾತುಕತೆಗಳೂ ಭಾರತ-ಚೀನಾ ಮಧ್ಯೆ ನಡೆದಿದೆ. ಆದರೆ ಚೀನಾ ಮತ್ತೆಮತ್ತೆ ಅಲ್ಲಿ ತನ್ನ ಉಪಟಳ ಮುಂದುವರಿಸಿದೆ.

ಇದನ್ನೂ ಓದಿ: ಪೊಲೀಸ್​ ಗೆಟಪ್​ನಲ್ಲಿ ಬ್ಯಾಡ್​ ಮ್ಯಾನರ್ಸ್​ ತೋರಿಸಲು ಬಂದ ಅಭಿಷೇಕ್​ ಅಂಬರೀಷ್​; ಇಲ್ಲಿದೆ ಸ್ಯಾಂಪಲ್​

ಶೇಂಗಾ ಬಿತ್ತನೆ ಬೀಜಕ್ಕಾಗಿ ಪರದಾಟ; ರೈತ ಸಂಪರ್ಕ ಕೇಂದ್ರದ ಮುಂದೆ 3 ದಿನಗಳಿಂದ ಕಾದರೂ ರೈತರಿಗೆ ನಿರಾಸೆ

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್