AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಲ್ ಗಾಂಧಿ ಒಸಾಮಾ ಬಿನ್ ಲಾಡೆನ್‌ನಂತೆ ಗಡ್ಡ ಮಾತ್ರ ಬೆಳಸಲು ಸಾಧ್ಯ, ಪ್ರಧಾನಿಯಾಗಲು ಸಾಧ್ಯವಿಲ್ಲ: ಸಾಮ್ರಾಟ್ ಚೌಧರಿ

ಬಿಜೆಪಿ ಪಕ್ಷದ ಬಿಹಾರ ಘಟಕದ ಅಧ್ಯಕ್ಷ ಸಾಮ್ರಾಟ್ ಚೌಧರಿ ರಾಹುಲ್ ಗಾಂಧಿಯನ್ನು ಹತ್ಯೆಯಾದ ಅಲ್-ಖೈದಾ ಮುಖ್ಯಸ್ಥ ಒಸಾಮಾ ಬಿನ್ ಲಾಡೆನ್‌ಗೆ ಹೋಲಿಸಿದ್ದಾರೆ, ಕೇವಲ ಗಡ್ಡವನ್ನು ಬೆಳೆಸುವುದರಿಂದ ದೇಶದ ಪ್ರಧಾನಿಯಾಗಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿ ಒಸಾಮಾ ಬಿನ್ ಲಾಡೆನ್‌ನಂತೆ ಗಡ್ಡ ಮಾತ್ರ ಬೆಳಸಲು ಸಾಧ್ಯ, ಪ್ರಧಾನಿಯಾಗಲು ಸಾಧ್ಯವಿಲ್ಲ: ಸಾಮ್ರಾಟ್ ಚೌಧರಿ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Jun 10, 2023 | 6:05 PM

Share

ಅರಾರಿಯಾ: ಕಾಂಗ್ರೆಸ್​ ಪಕ್ಷದ ನಾಯಕ ರಾಹುಲ್​​ ಗಾಂಧಿ (Rahul Gandhi) ಅವರನ್ನು ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಅವರು ಒಸಾಮಾ ಬಿನ್ ಲಾಡೆನ್‌ಗೆ ಹೋಲಿಸಿದ್ದಾರೆ. ಬಿಜೆಪಿ ಪಕ್ಷದ ಬಿಹಾರ ಘಟಕದ ಅಧ್ಯಕ್ಷ ಸಾಮ್ರಾಟ್ ಚೌಧರಿ ರಾಹುಲ್ ಗಾಂಧಿಯನ್ನು ಹತ್ಯೆಯಾದ ಅಲ್-ಖೈದಾ ಮುಖ್ಯಸ್ಥ ಒಸಾಮಾ ಬಿನ್ ಲಾಡೆನ್‌ಗೆ ಹೋಲಿಸಿದ್ದಾರೆ, ಕೇವಲ ಗಡ್ಡವನ್ನು ಬೆಳೆಸುವುದರಿಂದ ದೇಶದ ಪ್ರಧಾನಿಯಾಗಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ , ರಾಹುಲ್ ಗಾಂಧಿ ಅವರು ಒಸಾಮಾ ಬಿನ್ ಲಾಡೆನ್‌ನಂತೆ ಗಡ್ಡವನ್ನು ಬೆಳೆಸುತ್ತಾರೆ ಮತ್ತು ಅವರು ಪ್ರಧಾನಿ ನರೇಂದ್ರ ಮೋದಿಯಂತೆ ಆಗುತ್ತಾರೆ ಎಂದು ಕನಸು ಕಾಣುತ್ತಿದ್ದಾರೆ ಎಂದು ಹೇಳಿದರು.

ರಾಹುಲ್ ಗಾಂಧಿ ಅವರ ಭಾರತ್​ ಜೋಡೋ ಯಾತ್ರೆಯ ಸಮಯದಲ್ಲಿ ಗಡ್ಡವನ್ನು ಬಿಟ್ಟು, ಎಲ್ಲರ ಮುಂದೆ ಪ್ರದರ್ಶನ ಮಾಡಿದ್ದಾರೆ. ರ್ಯಾಲಿ ಮುಗಿದ ನಂತರ ಗಡ್ಡ ಕತ್ತರಿಸಿದ್ದಾರೆ ಎಂದು ಸಾಮ್ರಾಟ್ ಚೌಧರಿಯವರ ಟೀಕಿಸಿದ್ದಾರೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧವೂ ಸಾಮ್ರಾಟ್ ಚೌಧರಿ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ:Rahul Gandhi: ಯುಎಸ್​​​ಗೆ ರಾಹುಲ್​​ ಗಾಂಧಿ ಭೇಟಿ, ಸೋನಿಯಾ ಗಾಂಧಿಯವರ ಭಾವಚಿತ್ರ ನೀಡಿದ ಕಲಾವಿದೆ

ನಿತೀಶ್ ಕುಮಾರ್ ಅವರು ದೇಶದ ಪ್ರಧಾನಿ ಎಂದು ಎಲ್ಲರಿಗೂ ಹೇಳುತ್ತಾ ದೇಶ ಸುತ್ತುತ್ತಿದ್ದಾರೆ. ನಿತೀಶ್ ಕುಮಾರ್ ಪ್ರಧಾನಿಯಾ? ಎಂದಾಗ ಸೇರಿದ ಸಭೆಯಲ್ಲಿ ಜೋರಾಗಿ ಹರ್ಷೋದ್ಗಾರ ಕೇಳಿ ಬಂದಿದೆ. ಮುಂಬರುವ ಲೋಕಸಭೆ ಚುನಾವಣೆಗೆ ಕಾರ್ಯತಂತ್ರ ರೂಪಿಸಲು ಜೆಡಿಯು ಅಧ್ಯಕ್ಷ ನಿತೀಶ್ ಕುಮಾರ್ ಅವರು ಈ ತಿಂಗಳ ಕೊನೆಯಲ್ಲಿ ಪಾಟ್ನಾದಲ್ಲಿ ವಿರೋಧ ಪಕ್ಷಗಳ ಸಭೆಯನ್ನು ಆಯೋಜಿಸಿದ್ದಾರೆ.

ನಿತೀಶ್ ಕುಮಾರ್ ಕಳೆದ ವರ್ಷ ಕಾಂಗ್ರೆಸ್, ಆರ್‌ಜೆಡಿ ಮತ್ತು ಎಡಪಕ್ಷಗಳನ್ನು ಒಳಗೊಂಡ ‘ಮಹಾಘಟಬಂಧನ್’ಗೆ ಸೇರಲು ಬಿಜೆಪಿಯೊಂದಿಗಿನ ಸಂಬಂಧವನ್ನು ಕಡಿದುಕೊಂಡಿದ್ದರು. ಈ ಹಿಂದೆ ನವೆಂಬರ್ 2022ರಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಇದೇ ರೀತಿಯ ಹೇಳಿಕೆಗಳನ್ನು ನೀಡಿದ್ದರು ಎಂದು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ