AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Gandhi: ತೆಲಂಗಾಣದ ಬುಡಕಟ್ಟು ಕಲಾವಿದರ ಜೊತೆ ಸೇರಿ ಡ್ಯಾನ್ಸ್​ ಮಾಡಿದ ರಾಹುಲ್ ಗಾಂಧಿ

ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ತೆಲಂಗಾಣದಲ್ಲಿ 9ನೇ ದಿನಕ್ಕೆ ಕಾಲಿಡುತ್ತಿದ್ದಂತೆ ಈ ವಿಡಿಯೋವನ್ನು ಕಾಂಗ್ರೆಸ್ ಟ್ವಿಟರ್‌ನಲ್ಲಿ ಹಂಚಿಕೊಂಡಿದೆ.

Rahul Gandhi: ತೆಲಂಗಾಣದ ಬುಡಕಟ್ಟು ಕಲಾವಿದರ ಜೊತೆ ಸೇರಿ ಡ್ಯಾನ್ಸ್​ ಮಾಡಿದ ರಾಹುಲ್ ಗಾಂಧಿ
ರಾಹುಲ್ ಗಾಂಧಿ ಡ್ಯಾನ್ಸ್​
TV9 Web
| Updated By: ಸುಷ್ಮಾ ಚಕ್ರೆ|

Updated on: Nov 03, 2022 | 12:35 PM

Share

ಹೈದರಾಬಾದ್: ಕಳೆದ ವಾರ ಬುಡಕಟ್ಟು ಸಮುದಾಯದೊಂದಿಗೆ ಕೊಮ್ಮು ನೃತ್ಯ ಪ್ರದರ್ಶಿಸಿ ಎಲ್ಲರನ್ನೂ ಅಚ್ಚರಿಗೊಳಿಸಿದ್ದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ (Rahul Gandhi) ಬುಧವಾರ ಆಂಧ್ರಪ್ರದೇಶ, ತೆಲಂಗಾಣ ಮತ್ತು ದಕ್ಷಿಣ ಒಡಿಶಾದ ಸಮುದಾಯಗಳ ಸಾಂಪ್ರದಾಯಿಕ ಜಾನಪದ ನೃತ್ಯವಾದ ದಿಮ್ಸಾ ಪ್ರದರ್ಶಿಸಿದ್ದಾರೆ. ಆಂಧ್ರದ ಇತರ ಜಾನಪದ ಕಲಾವಿದರೊಂದಿಗೆ ರಾಹುಲ್ ಗಾಂಧಿ ಡೋಲು ಬಾರಿಸಿ, ನೃತ್ಯ ಮಾಡಿದ್ದಾರೆ.

ಅಕ್ಟೋಬರ್ 29ರಂದು ಭದ್ರಾಚಲಂನಲ್ಲಿ ಆದಿವಾಸಿಗಳೊಂದಿಗೆ ಕೊಮ್ಮು ನೃತ್ಯದಲ್ಲಿ ಭಾಗವಹಿಸಿದ ರಾಹುಲ್ ಗಾಂಧಿ ಈ ಬಾರಿ ಬುಡಕಟ್ಟು ಸಮುದಾಯದ ಶಿರಸ್ತ್ರಾಣವನ್ನು ಧರಿಸಿರಲಿಲ್ಲ. ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ತೆಲಂಗಾಣದಲ್ಲಿ 9ನೇ ದಿನಕ್ಕೆ ಕಾಲಿಡುತ್ತಿದ್ದಂತೆ ಈ ವಿಡಿಯೋವನ್ನು ಕಾಂಗ್ರೆಸ್ ಟ್ವಿಟರ್‌ನಲ್ಲಿ ಹಂಚಿಕೊಂಡಿದೆ.

ಬುಧವಾರ ತೆಲಂಗಾಣದ ರಸ್ತೆಯೊಂದು ಯುವ ಬ್ಯಾಟರ್‌ಗೆ ರಾಹುಲ್ ಗಾಂಧಿ ಬೌಲಿಂಗ್ ಮಾಡಿದ್ದರಿಂದ ಆ ರಸ್ತೆ ಸ್ವಲ್ಪ ಸಮಯದವರೆಗೆ ಕ್ರಿಕೆಟ್ ಪಿಚ್ ಆಗಿ ಮಾರ್ಪಟ್ಟಿತು. ರಾಹುಲ್ ಗಾಂಧಿ ಕ್ರಿಕೆಟ್ ಆಡುತ್ತಿರುವ ವಿಡಿಯೋ ವೈರಲ್ ಆಗಿತ್ತು.

ಇದನ್ನೂ ಓದಿ: Rahul Gandhi: ಪುಟ್ಟ ಬಾಲಕನಿಗೆ ಕರಾಟೆ ಕಲಿಸಿದ ರಾಹುಲ್ ಗಾಂಧಿ; ಬಿಜೆಪಿ ವಿರುದ್ಧ ಕಾಂಗ್ರೆಸ್ ಲೇವಡಿ

ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಜೊತೆ ಸೇರಿಕೊಂಡು ಇಂದು ಬೆಳಗ್ಗೆಯಿಂದ ರಾಹುಲ್ ಗಾಂಧಿ ತಮ್ಮ ಪಾದಯಾತ್ರೆಯನ್ನು ಪುನರಾರಂಭಿಸಿದ್ದರು. ಭಾರತ್ ಜೋಡೋ ಯಾತ್ರೆಯು ನವೆಂಬರ್ 7ರಂದು ಮಹಾರಾಷ್ಟ್ರವನ್ನು ಪ್ರವೇಶಿಸುವ ಮೊದಲು ತೆಲಂಗಾಣದಲ್ಲಿ ಒಟ್ಟು 375 ಕಿ.ಮೀ ದೂರವನ್ನು ವ್ಯಾಪಿಸಿರುವ ತೆಲಂಗಾಣದ 19 ಅಸೆಂಬ್ಲಿ ಮತ್ತು 7 ಸಂಸದೀಯ ಕ್ಷೇತ್ರಗಳನ್ನು ಒಳಗೊಳ್ಳಲಿದೆ. ಈ ಯಾತ್ರೆಯು ನವೆಂಬರ್ 4ರಂದು ಒಂದು ದಿನದ ವಿರಾಮವನ್ನು ತೆಗೆದುಕೊಳ್ಳುತ್ತದೆ.

ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆ ಬುಧವಾರ ಹೈದರಾಬಾದ್‌ನಲ್ಲಿದ್ದು, ಅಲ್ಲಿ ಬಾಲಿವುಡ್ ನಟಿ ಪೂಜಾ ಭಟ್ ಅವರು ಕಾಂಗ್ರೆಸ್ ನಾಯಕಿಯೊಂದಿಗೆ ಸೇರಿಕೊಂಡು ಸುಮಾರು 10.5 ಕಿ.ಮೀ. ನಡೆದಿದ್ದಾರೆ. ಮಂಗಳವಾರ ಹೈದರಾಬಾದ್‌ನ ಚಾರ್ಮಿನಾರ್‌ನಲ್ಲಿ ರಾಹುಲ್ ಗಾಂಧಿ ರಾಷ್ಟ್ರಧ್ವಜಾರೋಹಣ ಮಾಡಿದರು. ಕಿರುಕುಳ ಆರೋಪದ ನಂತರ 2016 ರಲ್ಲಿ ಆತ್ಮಹತ್ಯೆ ಮಾಡಿಕೊಂಡ ದಲಿತ ವಿದ್ಯಾರ್ಥಿ ರೋಹಿತ್ ವೇಮುಲಾ ಅವರ ತಾಯಿ ರಾಧಿಕಾ ವೇಮುಲಾ ಅವರು ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡರು. ಬುಧವಾರವೂ ರಾಹುಲ್ ಗಾಂಧಿ ಪಟಂಚೇರುವಿನಲ್ಲಿ 5ನೇ ತರಗತಿ ವಿದ್ಯಾರ್ಥಿಯೊಂದಿಗೆ ಕ್ರಿಕೆಟ್ ಆಡಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!