AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾದ ವಿರುದ್ಧ ದುರ್ಬಲವಾಗುತ್ತಿದೆ ಭಾರತ: ಸಂಸದ ರಾಹುಲ್ ಗಾಂಧಿ

ಕೃಷಿ ಕ್ಷೇತ್ರದ ಸುಧಾರಣೆ ಮಾಡುವುದಾಗಿ ಕಾಂಗ್ರೆಸ್​ನ ಪ್ರಣಾಳಿಕೆಯಲ್ಲಿ ಘೋಷಿಸಿದ್ದೆವು. ಆದರೆ, ಕೃಷಿ ಕ್ಷೇತ್ರವನ್ನು ನಾಶಮಾಡುವ ಬಗ್ಗೆ ಮಾತನಾಡಿರಲಿಲ್ಲ ಎಂದು ಸಹ ರಾಹುಲ್ ಗಾಂಧಿ ವ್ಯಂಗ್ಯವಾಡಿದ್ದಾರೆ.

ಚೀನಾದ ವಿರುದ್ಧ ದುರ್ಬಲವಾಗುತ್ತಿದೆ ಭಾರತ: ಸಂಸದ ರಾಹುಲ್ ಗಾಂಧಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
guruganesh bhat
|

Updated on:Jan 19, 2021 | 8:04 PM

Share

ದೆಹಲಿ: ಕೇಂದ್ರ ಸರ್ಕಾರ ಭಾರತದ ರಕ್ಷಣೆಯ ತನ್ನ ಮೂಲ ಜವಾಬ್ದಾರಿಯನ್ನು ಮರೆತಿದೆ. ಹೀಗಾಗಿ, ಚೀನಾ ವಿರುದ್ಧ ದಿನೇದಿನೇ ದುರ್ಬಲವಾಗುತ್ತಿದೆ. ಚೀನಾ ವಿರುದ್ಧ ಜಾಗತಿಕವಾಗಿ ಸಮರ್ಪಕ ರಾಜಕೀಯ ಮತ್ತು ಮಿಲಿಟರಿ ಕಾರ್ಯತಂತ್ರಗಳನ್ನು ರೂಪಿಸಬೇಕಿದೆ ಎಂದು ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ಮೇಲೆ ಹರಿಹಾಯ್ದಿದ್ದಾರೆ.

ಜತೆಗೆ, ಅರ್ನಬ್ ಗೋಸ್ವಾಮಿ ಮತ್ತು ಮಾಜಿ ಬಾರ್ಕ್ ಮುಖ್ಯಸ್ಥ ಪಾರ್ಥೋ ದಾಸ್​ಗುಪ್ತಾ ನಡುವಿನ ವಾಟ್ಸ್​ಆ್ಯಪ್ ಚಾಟ್ ಎನ್ನಲಾದ ಸೋರಿಕೆಯಾದ ದಾಖಲೆಗಳಲ್ಲಿ ಪಾಕ್​ನ ಬಾಲಾಕೋಟ್ ದಾಳಿ ಕುರಿತು ಉಲ್ಲೇಖವಿರುವುದನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ.

ಬಾಲಾಕೋಟ್ ದಾಳಿಯಂತಹ ಸೂಕ್ಷ್ಮ ನಿರ್ಧಾರಗಳು ದೇಶದ ಪ್ರಧಾನಿ, ಕೇಂದ್ರ ಗೃಹ ಸಚಿವರು, ರಕ್ಷಣಾ ಇಲಾಖೆ ಸಚಿವರು ಮತ್ತು ವಾಯು ಸೇನೆ ಮುಖ್ಯಸ್ಥರಿಗೆ ಮಾತ್ರ ತಿಳಿದಿರುತ್ತದೆ. ಆದರೆ ದಾಳಿಯ ಮುನ್ನವೇ ಈ ಕುರಿತು ರಿಪಬ್ಲಿಕ್ ವಾಹಿನಿ ಮುಖ್ಯಸ್ಥ ಅರ್ನಬ್ ಗೋಸ್ವಾಮಿ ಮಾಹಿತಿ ಹೊಂದಿದ್ದರೆ ಅದು ಗಂಭೀರ ಅಪರಾಧವಾಗಿದೆ. ದೇಶದ ಭದ್ರತೆಗೆ ಸಂಬಂಧಿಸಿದ ರಹಸ್ಯ ಮಾಹಿತಿ ಸೋರಿಕೆ ಮಾಡಿದವರ ವಿರುದ್ಧ ತನಿಖೆ ನಡೆಸಿ ಕಾರಾಗೃಹಕ್ಕೆ ಅಟ್ಟಬೇಕಿದೆ ಎಂದು ರಾಹುಲ್ ಗಾಂಧಿ ಹರಿಹಾಯ್ದಿದ್ದಾರೆ.

ಕೃಷಿ ಕ್ಷೇತ್ರದ ಸುಧಾರಣೆ ಮಾಡುವುದಾಗಿ ಕಾಂಗ್ರೆಸ್​ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿತ್ತು. ಆದರೆ, ಕೃಷಿ ಕ್ಷೇತ್ರವನ್ನು ನಾಶಮಾಡುವ ಬಗ್ಗೆ ಮಾತನಾಡಿರಲಿಲ್ಲ ಎಂದು ಅವರು ವ್ಯಂಗ್ಯ ಮಾಡಿದರು.

ಅರುಣಾಚಲ ಪ್ರದೇಶದಲ್ಲಿ ಚೀನಾ ಹಳ್ಳಿ ನಿರ್ಮಾಣ; ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

Published On - 8:03 pm, Tue, 19 January 21

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ