AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು: ಸಾಂಪ್ರದಾಯಿಕ ಶಾಲು ಹೊದ್ದು, ಆದಿವಾಸಿಗಳ ಕೈ ಹಿಡಿದು ನೃತ್ಯ ಮಾಡಿದ ರಾಹುಲ್ ಗಾಂಧಿ

ಲೋಕಸಭಾ ಚುನಾವಣೆ ಸನ್ನಿಹಿತವಾಗುತ್ತಿದ್ದು, ಜನರ ಮತ ಸೆಳೆಯಲು ವಿವಿಧ ಪಕ್ಷಗಳ ನಾಯಕರು ಒಂದೊಂದು ರೀತಿಯ ಸರ್ಕಸ್ ಮಾಡುತ್ತಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ತಮಿಳುನಾಡಿನ ನೀಲಗಿರಿ ಜಿಲ್ಲೆಯಲ್ಲಿ ತೋಡಾ ಸಮುದಾಯದ ಸದಸ್ಯರೊಂದಿಗೆ ಸ್ವಲ್ಪ ಸಮಯ ಕಳೆದರು. ಈ ಸಮಯದಲ್ಲಿ, ಅವರ ಸಾಂಪ್ರದಾಯಿಕ ಶಾಲು ಹೊದ್ದು, ತೋಡಾ ಜನರ ದೇವಾಲಯಕ್ಕೆ ಭೇಟಿ ನೀಡಿದರು ಮತ್ತು ಅವರೊಂದಿಗೆ ನೃತ್ಯ ಮಾಡಿದರು.

ತಮಿಳುನಾಡು: ಸಾಂಪ್ರದಾಯಿಕ ಶಾಲು ಹೊದ್ದು, ಆದಿವಾಸಿಗಳ ಕೈ ಹಿಡಿದು ನೃತ್ಯ ಮಾಡಿದ ರಾಹುಲ್ ಗಾಂಧಿ
ರಾಹುಲ್ ಗಾಂಧಿ
ನಯನಾ ರಾಜೀವ್
|

Updated on:Aug 13, 2023 | 11:13 AM

Share

ಚೆನ್ನೈ, ಆಗಸ್ಟ್ 13: ಲೋಕಸಭಾ ಚುನಾವಣೆ ಸನ್ನಿಹಿತವಾಗುತ್ತಿದ್ದು, ಜನರ ಮತ ಸೆಳೆಯಲು ವಿವಿಧ ಪಕ್ಷಗಳ ನಾಯಕರು ಒಂದೊಂದು ರೀತಿಯ ಸರ್ಕಸ್ ಮಾಡುತ್ತಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ಶನಿವಾರ ತಮಿಳುನಾಡಿನ ನೀಲಗಿರಿ ಜಿಲ್ಲೆಯಲ್ಲಿ ತೋಡಾ ಸಮುದಾಯದ ಸದಸ್ಯರೊಂದಿಗೆ ಸ್ವಲ್ಪ ಸಮಯ ಕಳೆದರು. ಈ ಸಮಯದಲ್ಲಿ, ಅವರ ಸಾಂಪ್ರದಾಯಿಕ ಶಾಲು ಹೊದ್ದು, ತೋಡಾ ಜನರ ದೇವಾಲಯಕ್ಕೆ ಭೇಟಿ ನೀಡಿದರು ಮತ್ತು ಅವರೊಂದಿಗೆ ನೃತ್ಯ ಮಾಡಿದರು. ಮೋದಿ ಉಪನಾಮದ ಕುರಿತಾದ ಮಾನನಷ್ಟ ಮೊಕದ್ದಮೆಯಲ್ಲಿ ಸುಪ್ರೀಂ ಕೋರ್ಟ್ ಶಿಕ್ಷೆಗೆ ತಡೆ ನೀಡಿದ ನಂತರ ರಾಹುಲ್ ಗಾಂಧಿ ಕೇರಳದ ತಮ್ಮ ಕ್ಷೇತ್ರಕ್ಕೆ ತೆರಳಿದ್ದರು. ಇದೇ ವೇಳೆ ಅವರು ಇಲ್ಲಿನ ಮುತ್ತುನಾಡು ಮಂಡುವಿನಲ್ಲಿ ಬುಡಕಟ್ಟು ಸಮುದಾಯದವರೊಂದಿಗೆ ಸಂವಾದ ನಡೆಸಿದರು.

ಸಂದರ್ಭದಲ್ಲಿ ತೋಡಾ ಸಮುದಾಯದ ಮಹಿಳೆಯರು ರಾಹುಲ್ ಗಾಂಧಿ ಪ್ರಧಾನಿಯಾಗಿ ಇಲ್ಲಿಗೆ ಬರಲಿ ಎಂದು ಹಾರೈಸಿದರು. ಮುಂದಿನ ವರ್ಷ ಲೋಕಸಭೆ ಚುನಾವಣೆ ನಡೆಯಲಿದೆ . ಕೊಯಮತ್ತೂರಿನಿಂದ ರಸ್ತೆ ಮಾರ್ಗವಾಗಿ ಇಲ್ಲಿಗೆ ಆಗಮಿಸಿದ ಅವರಿಗೆ ಸಾಂಪ್ರದಾಯಿಕ ಶಾಲು ಹೊದಿಸಲಾಯಿತು.

ರಾಹುಲ್ ಗಾಂಧಿ ಅವರು ತೋಡಾ ಬುಡಕಟ್ಟು ಜನಾಂಗದವರೊಂದಿಗೆ ನೃತ್ಯ ಮಾಡಿದರು ಮತ್ತು ಅವರ ಸಾಂಪ್ರದಾಯಿಕ ಆಹಾರವನ್ನೂ ಸವಿದರು.

ಮತ್ತಷ್ಟು ಓದಿ: ಬಿಜೆಪಿ ನನ್ನನ್ನು 50 ಅಥವಾ 100 ಬಾರಿ ಅನರ್ಹಗೊಳಿಸಬಹುದು, ಆದರೆ ನಮ್ಮ ನಡುವಿನ ಸಂಬಂಧ ದೃಢವಾಗಿಯೇ ಇರುತ್ತದೆ: ವಯನಾಡಿನಲ್ಲಿ ರಾಹುಲ್ ಗಾಂಧಿ

ರಾಹುಲ್, ಸಮುದಾಯದ ದೇವರ ದೇವಸ್ಥಾನಕ್ಕೆ ಭೇಟಿ ನೀಡಿದರು ಮತ್ತು ಅಲ್ಲಿನ ಸಾಂಪ್ರದಾಯಿಕ ಆಚರಣೆಗಳನ್ನು ವೀಕ್ಷಿಸಿದರು. ಬಳಿಕ ಯುವತಿಯರು ತಮ್ಮೆಲ್ಲ ಶಕ್ತಿ ಬಳಸಿ ದುಂಡು ಕಲ್ಲು ಎತ್ತುವ ಸಾಂಪ್ರದಾಯಿಕ ಕ್ರೀಡೆ ಇಲವಟ್ಟಕ್ಕಲ್ ಗೆ ರಾಹುಲ್ ಗಾಂಧಿ ಸಾಕ್ಷಿಯಾದರು.

ರಾಹುಲ್ ಗಾಂಧಿ ನೃತ್ಯ ಟ್ವೀಟ್​

ರಾಹುಲ್ ಗಾಂಧಿ ಶನಿವಾರದಿಂದ ವಯನಾಡಿನ ಪ್ರವಾಸದಲ್ಲಿದ್ದಾರೆ. ಲೋಕಸಭೆಯ ಸದಸ್ಯತ್ವವನ್ನು ಮರುಸ್ಥಾಪಿಸಿದ ನಂತರ ವಯನಾಡ್‌ಗೆ ಇದು ಅವರ ಮೊದಲ ಭೇಟಿಯಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:11 am, Sun, 13 August 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ