AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಅತ್ಯಾಚಾರ ಸಂತ್ರಸ್ತೆಯ ಪಾಲಕರ ಫೋಟೋ ಡಿಲೀಟ್​ ಮಾಡಿದ ರಾಹುಲ್​ ಗಾಂಧಿ..

9 ವರ್ಷದ ದಲಿತ ಬಾಲಕಿ ಚಿತಾಗಾರದ ಕೂಲರ್​​ನಿಂದ ತಣ್ಣೀರು ತರಲು ಹೋದಾಗ ಅಲ್ಲಿನ ಅರ್ಚಕ ಮತ್ತು ಸಹಚರರು ಅತ್ಯಾಚಾರ ಮಾಡಿ, ಹತ್ಯೆಗೈದಿದ್ದಾರೆ ಎಂದು ಬಾಲಕಿಯ ಕುಟುಂಬದವರು ಆರೋಪಿಸಿದ್ದಾರೆ.

ದೆಹಲಿ ಅತ್ಯಾಚಾರ ಸಂತ್ರಸ್ತೆಯ ಪಾಲಕರ ಫೋಟೋ ಡಿಲೀಟ್​ ಮಾಡಿದ ರಾಹುಲ್​ ಗಾಂಧಿ..
ರಾಹುಲ್ ಗಾಂಧಿ
TV9 Web
| Updated By: Lakshmi Hegde|

Updated on:Aug 07, 2021 | 9:06 AM

Share

ದೆಹಲಿ ಚಿತಾಗಾರದಲ್ಲಿ ಅತ್ಯಾಚಾರಕ್ಕೀಡಾಗಿದ್ದ ಬಾಲಕಿಯ ಪಾಲಕರ ಫೋಟೋವನ್ನು ಟ್ವಿಟರ್​ನಲ್ಲಿ ಶೇರ್​ ಮಾಡಿಕೊಂಡಿದ್ದ ರಾಹುಲ್​ ಗಾಂಧಿ (Rahul Gandhi), ಇದೀಗ ಆ ಫೋಟೋವನ್ನು ಡಿಲೀಟ್​ ಮಾಡಿದ್ದಾರೆ. 9 ವರ್ಷದ ದಲಿತ ಬಾಲಕಿ ಚಿತಾಗಾರದ ಕೂಲರ್​​ನಿಂದ ತಣ್ಣೀರು ತರಲು ಹೋದಾಗ ಅಲ್ಲಿನ ಅರ್ಚಕ ಮತ್ತು ಸಹಚರರು ಅತ್ಯಾಚಾರ ಮಾಡಿ, ಹತ್ಯೆಗೈದಿದ್ದಾರೆ ಎಂದು ಬಾಲಕಿಯ ಕುಟುಂಬದವರು ಆರೋಪಿಸಿದ್ದಾರೆ. ಈ ಬಾಲಕಿಯ ಪಾಲಕರಿಗೆ ಸಾಂತ್ವನ ಹೇಳಲು ಹೋಗಿದ್ದ ರಾಹುಲ್​ ಗಾಂಧಿ, ಟ್ವೀಟ್ (Tweet)​ ಮಾಡಿ ಅವರ ಫೋಟೋ ಪೋಸ್ಟ್ ಮಾಡಿಕೊಂಡಿದ್ದರು. ಈ ಬಾಲಕಿಯ ಕುಟುಂಬದೊಂದಿಗೆ ನಾನು ಇದ್ದೇನೆ ಎಂದು ಭರವಸೆಯನ್ನೂ ನೀಡಿದ್ದರು.

ಆದರೆ ಅತ್ಯಾಚಾರ ಸಂತ್ರಸ್ತೆಯ ಪಾಲಕರ ಫೋಟೋ ಬಹಿರಂಗಗೊಳಿಸಿದ ರಾಹುಲ್ ಗಾಂಧಿ ವಿರುದ್ಧ ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗ ಮತ್ತು ಕೆಲವು ವಕೀಲರು ದೂರು ನೀಡಿದ್ದರು. ಪಾಲಕರ ಫೋಟೋ ಹಂಚಿಕೊಂಡ ರಾಹುಲ್ ಗಾಂಧಿಯವರ ಟ್ವಿಟರ್​ ಅಕೌಂಟ್​ ವಿರುದ್ಧ ಕ್ರಮಕೈಗೊಳ್ಳುವಂತೆ ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗ ಟ್ವಿಟರ್​ ಇಂಡಿಯಾಗೆ ಹೇಳಿತ್ತು. ಹಾಗೇ ದೆಹಲಿ ಮೂಲದ ವಕೀಲರೊಬ್ಬರು ರಾಹುಲ್​ ಗಾಂಧಿ ವಿರುದ್ಧ ದೆಹಲಿ ಠಾಣೆಯಲ್ಲಿ ದೂರು ದಾಖಲು ಮಾಡಿದ್ದರು.

ಮೃತ ಬಾಲಕಿಯ ಕುಟುಂಬದವರನ್ನು ಭೇಟಿ ಮಾಡಿದ್ದ ರಾಹುಲ್​ ಗಾಂಧಿ ನಂತರ ಆ ಫೋಟೋ ಹಂಚಿಕೊಂಡು, ಆ ಬಾಲಕಿ ಈ ದೇಶದ ಮಗಳು. ಅವಳ ಸಾವಿಗೆ ನ್ಯಾಯ ಒದಗಬೇಕು. ನ್ಯಾಯಕ್ಕಾಗಿ ಹೋರಾಟ ಮಾಡುವ ಹಾದಿಯಲ್ಲಿ ನಾನು ಆಕೆಯ ಪಾಲಕರ ಜತೆ ಸದಾ ಇರುತ್ತೇನೆ ಎಂದು ಹೇಳಿದ್ದರು.  ಆದರೆ ಈಗ ಅವರ ಟ್ವಿಟರ್​​ನಲ್ಲಿ ಈ ಫೋಟೋ ಇಲ್ಲ. ಟ್ವಿಟರ್​​ನ ನಿಯಮಗಳನ್ನು ಉಲ್ಲಂಘಿಸಿದ ಕಾರಣಕ್ಕೆ ಟ್ವೀಟ್​ ತೆಗೆಯಲಾಗಿದೆ ಎಂದು ಅಲ್ಲಿ ಸಂದೇಶ ತೋರಿಸುತ್ತಿದೆ.

ಇದನ್ನೂ ಓದಿ: ರಾಜಧಾನಿಯಲ್ಲಿ ಸದ್ದಿಲ್ಲದೇ ಎಂಟ್ರಿ ಕೊಡ್ತಿದೆ ಡೆಡ್ಲಿ ವೈರಸ್; ಈ ವಾರ್ಡ್​​​ಗಳ ಕಡೆ ಹೋಗುವ ಮುನ್ನ ಇರಲಿ ಎಚ್ಚರ

Published On - 9:02 am, Sat, 7 August 21

Daily Devotional: ಶ್ರೀ ಸೂಕ್ತದ ಮಹತ್ವ ಹಾಗೂ ಯಾವಾಗ ಪಠಿಸಬೇಕು ತಿಳಿಯಿರಿ
Daily Devotional: ಶ್ರೀ ಸೂಕ್ತದ ಮಹತ್ವ ಹಾಗೂ ಯಾವಾಗ ಪಠಿಸಬೇಕು ತಿಳಿಯಿರಿ
Daily horoscope: ಗಂಡ-ಹೆಂಡತಿಯ ನಡುವೆ ಸಣ್ಣಪುಟ್ಟ ಕಲಹಗಳಾಗುವ ಸಾಧ್ಯತೆ
Daily horoscope: ಗಂಡ-ಹೆಂಡತಿಯ ನಡುವೆ ಸಣ್ಣಪುಟ್ಟ ಕಲಹಗಳಾಗುವ ಸಾಧ್ಯತೆ
ಡಾ. ರಾಜ್​ಕುಮಾರ್ ಅಪಹರಣಕ್ಕೂ ಮುನ್ನ ಏನೆಲ್ಲ ನಡೆದಿತ್ತು? ವಿವರಿಸಿದ ಅಳಿಯ
ಡಾ. ರಾಜ್​ಕುಮಾರ್ ಅಪಹರಣಕ್ಕೂ ಮುನ್ನ ಏನೆಲ್ಲ ನಡೆದಿತ್ತು? ವಿವರಿಸಿದ ಅಳಿಯ
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್