Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಅತ್ಯಾಚಾರ ಸಂತ್ರಸ್ತೆಯ ಪಾಲಕರ ಫೋಟೋ ಡಿಲೀಟ್​ ಮಾಡಿದ ರಾಹುಲ್​ ಗಾಂಧಿ..

9 ವರ್ಷದ ದಲಿತ ಬಾಲಕಿ ಚಿತಾಗಾರದ ಕೂಲರ್​​ನಿಂದ ತಣ್ಣೀರು ತರಲು ಹೋದಾಗ ಅಲ್ಲಿನ ಅರ್ಚಕ ಮತ್ತು ಸಹಚರರು ಅತ್ಯಾಚಾರ ಮಾಡಿ, ಹತ್ಯೆಗೈದಿದ್ದಾರೆ ಎಂದು ಬಾಲಕಿಯ ಕುಟುಂಬದವರು ಆರೋಪಿಸಿದ್ದಾರೆ.

ದೆಹಲಿ ಅತ್ಯಾಚಾರ ಸಂತ್ರಸ್ತೆಯ ಪಾಲಕರ ಫೋಟೋ ಡಿಲೀಟ್​ ಮಾಡಿದ ರಾಹುಲ್​ ಗಾಂಧಿ..
ರಾಹುಲ್ ಗಾಂಧಿ
Follow us
TV9 Web
| Updated By: Lakshmi Hegde

Updated on:Aug 07, 2021 | 9:06 AM

ದೆಹಲಿ ಚಿತಾಗಾರದಲ್ಲಿ ಅತ್ಯಾಚಾರಕ್ಕೀಡಾಗಿದ್ದ ಬಾಲಕಿಯ ಪಾಲಕರ ಫೋಟೋವನ್ನು ಟ್ವಿಟರ್​ನಲ್ಲಿ ಶೇರ್​ ಮಾಡಿಕೊಂಡಿದ್ದ ರಾಹುಲ್​ ಗಾಂಧಿ (Rahul Gandhi), ಇದೀಗ ಆ ಫೋಟೋವನ್ನು ಡಿಲೀಟ್​ ಮಾಡಿದ್ದಾರೆ. 9 ವರ್ಷದ ದಲಿತ ಬಾಲಕಿ ಚಿತಾಗಾರದ ಕೂಲರ್​​ನಿಂದ ತಣ್ಣೀರು ತರಲು ಹೋದಾಗ ಅಲ್ಲಿನ ಅರ್ಚಕ ಮತ್ತು ಸಹಚರರು ಅತ್ಯಾಚಾರ ಮಾಡಿ, ಹತ್ಯೆಗೈದಿದ್ದಾರೆ ಎಂದು ಬಾಲಕಿಯ ಕುಟುಂಬದವರು ಆರೋಪಿಸಿದ್ದಾರೆ. ಈ ಬಾಲಕಿಯ ಪಾಲಕರಿಗೆ ಸಾಂತ್ವನ ಹೇಳಲು ಹೋಗಿದ್ದ ರಾಹುಲ್​ ಗಾಂಧಿ, ಟ್ವೀಟ್ (Tweet)​ ಮಾಡಿ ಅವರ ಫೋಟೋ ಪೋಸ್ಟ್ ಮಾಡಿಕೊಂಡಿದ್ದರು. ಈ ಬಾಲಕಿಯ ಕುಟುಂಬದೊಂದಿಗೆ ನಾನು ಇದ್ದೇನೆ ಎಂದು ಭರವಸೆಯನ್ನೂ ನೀಡಿದ್ದರು.

ಆದರೆ ಅತ್ಯಾಚಾರ ಸಂತ್ರಸ್ತೆಯ ಪಾಲಕರ ಫೋಟೋ ಬಹಿರಂಗಗೊಳಿಸಿದ ರಾಹುಲ್ ಗಾಂಧಿ ವಿರುದ್ಧ ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗ ಮತ್ತು ಕೆಲವು ವಕೀಲರು ದೂರು ನೀಡಿದ್ದರು. ಪಾಲಕರ ಫೋಟೋ ಹಂಚಿಕೊಂಡ ರಾಹುಲ್ ಗಾಂಧಿಯವರ ಟ್ವಿಟರ್​ ಅಕೌಂಟ್​ ವಿರುದ್ಧ ಕ್ರಮಕೈಗೊಳ್ಳುವಂತೆ ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗ ಟ್ವಿಟರ್​ ಇಂಡಿಯಾಗೆ ಹೇಳಿತ್ತು. ಹಾಗೇ ದೆಹಲಿ ಮೂಲದ ವಕೀಲರೊಬ್ಬರು ರಾಹುಲ್​ ಗಾಂಧಿ ವಿರುದ್ಧ ದೆಹಲಿ ಠಾಣೆಯಲ್ಲಿ ದೂರು ದಾಖಲು ಮಾಡಿದ್ದರು.

ಮೃತ ಬಾಲಕಿಯ ಕುಟುಂಬದವರನ್ನು ಭೇಟಿ ಮಾಡಿದ್ದ ರಾಹುಲ್​ ಗಾಂಧಿ ನಂತರ ಆ ಫೋಟೋ ಹಂಚಿಕೊಂಡು, ಆ ಬಾಲಕಿ ಈ ದೇಶದ ಮಗಳು. ಅವಳ ಸಾವಿಗೆ ನ್ಯಾಯ ಒದಗಬೇಕು. ನ್ಯಾಯಕ್ಕಾಗಿ ಹೋರಾಟ ಮಾಡುವ ಹಾದಿಯಲ್ಲಿ ನಾನು ಆಕೆಯ ಪಾಲಕರ ಜತೆ ಸದಾ ಇರುತ್ತೇನೆ ಎಂದು ಹೇಳಿದ್ದರು.  ಆದರೆ ಈಗ ಅವರ ಟ್ವಿಟರ್​​ನಲ್ಲಿ ಈ ಫೋಟೋ ಇಲ್ಲ. ಟ್ವಿಟರ್​​ನ ನಿಯಮಗಳನ್ನು ಉಲ್ಲಂಘಿಸಿದ ಕಾರಣಕ್ಕೆ ಟ್ವೀಟ್​ ತೆಗೆಯಲಾಗಿದೆ ಎಂದು ಅಲ್ಲಿ ಸಂದೇಶ ತೋರಿಸುತ್ತಿದೆ.

ಇದನ್ನೂ ಓದಿ: ರಾಜಧಾನಿಯಲ್ಲಿ ಸದ್ದಿಲ್ಲದೇ ಎಂಟ್ರಿ ಕೊಡ್ತಿದೆ ಡೆಡ್ಲಿ ವೈರಸ್; ಈ ವಾರ್ಡ್​​​ಗಳ ಕಡೆ ಹೋಗುವ ಮುನ್ನ ಇರಲಿ ಎಚ್ಚರ

Published On - 9:02 am, Sat, 7 August 21

ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ