AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Congress Protest: ಸಂಸದ ಸ್ಥಾನದಿಂದ ರಾಹುಲ್ ಅನರ್ಹ: ಸಂಸತ್​ನಲ್ಲಿ ಕಪ್ಪು ಬಟ್ಟೆ ಧರಿಸಿ ಕಾಂಗ್ರೆಸ್ ಸಂಸದರಿಂದ ಪ್ರತಿಭಟನೆ

ರಾಹುಲ್ ಗಾಂಧಿ(Rahul Gandhi)ಯನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಂಸದರು ಸಂಸತ್​ನಲ್ಲಿ ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸಿದ್ದಾರೆ.

Congress Protest: ಸಂಸದ ಸ್ಥಾನದಿಂದ ರಾಹುಲ್ ಅನರ್ಹ: ಸಂಸತ್​ನಲ್ಲಿ ಕಪ್ಪು ಬಟ್ಟೆ ಧರಿಸಿ ಕಾಂಗ್ರೆಸ್ ಸಂಸದರಿಂದ ಪ್ರತಿಭಟನೆ
ಕಾಂಗ್ರೆಸ್ ಸಂಸದರ ಪ್ರತಿಭಟನೆ
ನಯನಾ ರಾಜೀವ್
|

Updated on: Mar 27, 2023 | 12:01 PM

Share

ರಾಹುಲ್ ಗಾಂಧಿ(Rahul Gandhi)ಯನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಂಸದರು ಸಂಸತ್​ನಲ್ಲಿ ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸಿದ್ದಾರೆ. ಸಂಜೆ 4 ಗಂಟೆವರೆಗೆ ಲೋಕಸಭಾ ಕಲಾಪವನ್ನು ಮುಂದೂಡಲಾಗಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಪ್ಪು ಬಟ್ಟೆ ಧರಿಸಿ ಆಗಮಿಸಿದ್ದರು. ರಾಹುಲ್ ಗಾಂಧಿ ಮೋದಿ ಉಪನಾಮದ ಕುರಿತು ಹೇಳಿಕೆ ನೀಡಿದ್ದಕ್ಕಾಗಿ ಸೂರತ್ ನ್ಯಾಯಾಲಯವು ಅವರು ದೋಷಿ ಎಂದು ತೀರ್ಪು ನೀಡಿತ್ತು. ಜತೆಗೆ 2 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತ್ತು. ಇದೀಗ ಅವರು 30 ದಿನಗಳ ಜಾಮೀನಿನ ಮೇಲೆ ಹೊರಗಿದ್ದಾರೆ.

ಲೋಕಸಭೆಯಿಂದ ರಾಹುಲ್ ಗಾಂಧಿ ಅನರ್ಹತೆ ಮತ್ತು ಅದಾನಿ ವಿಷಯಕ್ಕೆ ಸಂಬಂಧಿಸಿದಂತೆ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಸಂಸದರು ಕಪ್ಪು ಬಟ್ಟೆ ಧರಿಸಿ ಸಂಸತ್ತಿನಲ್ಲಿ ಹಾಗೂ ದೇಶಾದ್ಯಂತ ರಾಜ್ಯ ವಿಧಾನಸಭೆಗಳಲ್ಲಿ ಪ್ರತಿಭಟನೆ ನಡೆಸಿದರು. ಇಂದು ನಡೆದ ಸಂಸತ್ ಅಧಿವೇಶನದಲ್ಲಿ ಕಾಂಗ್ರೆಸ್ ಸಂಸದರು ಕಪ್ಪು ಬಟ್ಟೆ ಧರಿಸಿ ಭಾಗವಹಿಸಿದ್ದರು. ರಾಹುಲ್ ಗಾಂಧಿ ಅವರ ಅನರ್ಹತೆಯ ವಿರುದ್ಧ ಪ್ರತಿಭಟನೆ ನಡೆಸಿದರು.

ಮತ್ತಷ್ಟು ಓದಿ: Rahul Gandhi: ಸತ್ಯ, ಸಾಹಸ, ಬಲಿದಾನ ಇದುವೆ ಗಾಂಧಿ ಕುಟುಂಬದ ಪರಂಪರೆ: ರಾಹುಲ್ ಗಾಂಧಿ ಇನ್​ಸ್ಟಾಗ್ರಾಂ ಪೋಸ್ಟ್​

ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿರುವುದನ್ನು ವಿರೋಧಿಸಿ ಮಹಾಘಟಬಂಧನ್ ನಾಯಕರು ಪಾಟ್ನಾದಲ್ಲಿ ಕಪ್ಪು ಪಟ್ಟಿಗಳನ್ನು ಧರಿಸಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಲೋಕಸಭೆಯ ರಾಜ್ಯಸಭೆ ಮತ್ತು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ ಸಭಾಂಗಣದಲ್ಲಿ ವಿರೋಧ ಪಕ್ಷದ ನಾಯಕರ ಕಾರ್ಯತಂತ್ರದ ಸಭೆ ನಡೆಯುತ್ತಿದೆ. INC, DMK, SP, JD(U), BRS, CPI(M), RJD, NCP, CPI, IUML, MDMK, Kerala Congress, TMC, RSP, AAP, J&K NC & ಶಿವಸೇನೆ ನಾಯಕರು ಉಪಸ್ಥಿತರಿದ್ದರು.

ರಾಹುಲ್ ಗಾಂಧಿ ಅವರ ಸದಸ್ಯತ್ವವನ್ನು ಕಸಿದುಕೊಳ್ಳುವ ವಿಧಾನವು ಸಂಪೂರ್ಣವಾಗಿ ಪ್ರಜಾಪ್ರಭುತ್ವ ವಿರೋಧಿಯಾಗಿದೆ ಎಂದು ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಹೇಳಿದ್ದಾರೆ. ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸುವ ಹಕ್ಕಿದೆ.

ನ್ಯಾಯಾಲಯವು ಅವರಿಗೆ ಮೇಲ್ಮನವಿ ಸಲ್ಲಿಸಲು 30 ದಿನಗಳ ಕಾಲಾವಕಾಶವನ್ನೂ ನೀಡಿದೆ. ಆಗ ಅವರ ಸದಸ್ಯತ್ವ ಕಿತ್ತುಕೊಳ್ಳುವ ಆತುರ ಏನಿತ್ತು? ನಮ್ಮ ದೇಶದ ಇತಿಹಾಸದಲ್ಲಿ ಇದೊಂದು ಕರಾಳ ದಿನ. ನಡೆದದ್ದು ಅನ್ಯಾಯ, ಇದರ ವಿರುದ್ಧ ಪ್ರತಿಭಟಿಸುತ್ತೇವೆ ಎಂದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ