Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Gandhi: ರಾಹುಲ್ ಗಾಂಧಿ ಭಾರತದ ಏಕತೆಗೆ ಅತ್ಯಂತ ಅಪಾಯಕಾರಿ, ಪಪ್ಪು ಬಗ್ಗೆ ವಿದೇಶಿಗರಿಗೆ ಗೊತ್ತಿಲ್ಲ: ಕಿರಣ್ ರಿಜಿಜು

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾರತದ ಏಕತೆಗೆ ಅಪಾಯಕಾರಿಯಾಗಿದ್ದಾರೆ, ಅವರ ಬಗ್ಗೆ ವಿದೇಶಿಗರಿಗೆ ತಿಳಿದಿಲ್ಲ ಎಂದು ಸಚಿವ ಕಿರಣ್ ರಿಜಿಜು ಹೇಳಿದ್ದಾರೆ.ಲಂಡನ್​ನಲ್ಲಿ ರಾಹುಲ್ ಗಾಂಧಿ ಹೇಳಿಕೆಯನ್ನು ಟೀಕಿಸಿರುವ ಅವರು, ಸ್ವಘೋಷಿತ ಕಾಂಗ್ರೆಸ್​ ರಾಜಕುಮಾರ ಎಲ್ಲಾ ಮಿತಿಗಳನ್ನು ದಾಟಿದ್ದಾರೆ ಆದರೆ ವಿದೇಶಿಗರಿಗೆ ಪಪ್ಪು ಎಂದು ತಿಳಿದಿಲ್ಲ ಎಂದಿದ್ದಾರೆ.

Rahul Gandhi: ರಾಹುಲ್ ಗಾಂಧಿ ಭಾರತದ ಏಕತೆಗೆ ಅತ್ಯಂತ ಅಪಾಯಕಾರಿ, ಪಪ್ಪು ಬಗ್ಗೆ ವಿದೇಶಿಗರಿಗೆ ಗೊತ್ತಿಲ್ಲ: ಕಿರಣ್ ರಿಜಿಜು
ಕಿರಣ್ ರಿಜಿಜು
Follow us
ನಯನಾ ರಾಜೀವ್
|

Updated on: Mar 09, 2023 | 9:40 AM

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಭಾರತದ ಏಕತೆಗೆ ಅಪಾಯಕಾರಿಯಾಗಿದ್ದಾರೆ, ಅವರ ಬಗ್ಗೆ ವಿದೇಶಿಗರಿಗೆ ತಿಳಿದಿಲ್ಲ ಎಂದು ಸಚಿವ ಕಿರಣ್ ರಿಜಿಜು ಹೇಳಿದ್ದಾರೆ.ಲಂಡನ್​ನಲ್ಲಿ ರಾಹುಲ್ ಗಾಂಧಿ ಹೇಳಿಕೆಯನ್ನು ಟೀಕಿಸಿರುವ ಅವರು, ಸ್ವಘೋಷಿತ ಕಾಂಗ್ರೆಸ್( Congress)​ ರಾಜಕುಮಾರ ಎಲ್ಲಾ ಮಿತಿಗಳನ್ನು ದಾಟಿದ್ದಾರೆ ಆದರೆ ವಿದೇಶಿಗರಿಗೆ ಪಪ್ಪು ಎಂದು ತಿಳಿದಿಲ್ಲ ಎಂದಿದ್ದಾರೆ. ರಾಹುಲ್ ಗಾಂಧಿಯ ಮೂರ್ಖ ಹೇಳಿಕೆಗೆಲ್ಲಾ ಪ್ರತಿಕ್ರಿಯಿಸುವ ಅಗತ್ಯವಿಲ್ಲ, ಆದರೆ ಬೇಸರದ ಸಂಗತಿ ಎಂದರೆ ಅವರ ಭಾರತ ವಿರೋಧಿ ಹೇಳಿಕೆಗಳನ್ನು ಭಾರತ ವಿರೋಧಿ ಪಡೆಗಳು ದುರುಪಯೋಗಪಡಿಸಿಕೊಂಡಿವೆ. ಭಾರತದ ಪ್ರತಿಷ್ಠೆಯನ್ನು ಹಾಳು ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ರಿಜಿಜು ಹೇಳಿದರು.

ಭಾರತದ ಏಕೈಕ ಮಂತ್ರ ಏಕ ಭಾರತ ಶ್ರೇಷ್ಠ ಭಾರತ ಎಂದು ಆದರೆ ವಿದೇಶಿ ನೆಲದಲ್ಲಿ ದೇಶವನ್ನು ಅವಮಾನಿಸಿದ್ದಾರೆ. ಹರಿವಂಶ್ ಮಾತನಾಡಿ, ರಾಹುಲ್ ಗಾಂಧಿ ಮಾಡಿರುವ ಆರೋಪವೆಲ್ಲವೂ ಆಧಾರರಹಿತ ಹಾಗೂ ಸುಳ್ಳು, ನಾನು ಕಳೆದ 9 ವರ್ಷಗಳಿಂದ ಸಂಸತ್ತಿನಲ್ಲಿದ್ದು, ಇಲ್ಲಿಯವರೆಗೆ ಯಾರ ಬಾಯಿಂದಲೂ ಇಂತಹ ಮಾತು ಕೇಳಿಲ್ಲ. ನನಗೆ ತಿಳಿದಂತೆ ಸಂಸತ್ತಿನ ಒಳಗೆ ಅಥವಾ ಸಂಸತ್ತಿನ ಹೊರಗೆ ಯಾರೂ ಈ ರೀತಿ ಹೇಳಿಕೆ ನೀಡಿಲ್ಲ ಎಂದು ಅವರು ಹೇಳಿದರು.

ರಾಹುಲ್ ಗಾಂಧಿ ಏನು ಹೇಳಿದ್ದರು ಭಾರತದ ಸಂಸತ್ತಿನಲ್ಲಿ ಪ್ರತಿಪಕ್ಷ ನಾಯಕರ ಧ್ವನಿಯನ್ನು ಹತ್ತಿಕ್ಕಲಾಗುತ್ತಿದೆ, ನಾವು ಸರ್ಕಾರದ ವಿರುದ್ಧ ಧ್ವನಿ ಎತ್ತಲು ಹೋದರೆ ನಮ್ಮ ಮೈಕ್​ಗಳನ್ನು ಆಫ್​ ಮಾಡಲಾಗುತ್ತಿತ್ತು ಎಂದು ಹೇಳಿದ್ದರು.

ವಿಪಕ್ಷ ರಾಜಕಾರಣಿಗಳ ಫೋನ್‌ಗಳನ್ನು ಕದ್ದಾಲಿಸಲು ಭಾರತ ಸರ್ಕಾರ ಪೆಗಾಸಸ್‌ ಸ್ಪೈವೇರ್‌ನ್ನು ಬಳಸಿಕೊಂಡಿತ್ತು. ನಾನೂ ಕೂಡ ಈ ಬೇಹುಗಾರಿಕೆಯ ಬಲಿಪಶು. ಪೆಗಾಸಸ್‌ ಮೂಲಕ ಗುಪ್ತಚರ ಇಲಾಖೆ ಅಧಿಕಾರಿಗಳಿಗೆ ಒತ್ತಡ ಹೇರಿ, ಕೇಂದ್ರ ಸರ್ಕಾರ ಪ್ರತಿಪಕ್ಷ ನಾಯಕರ ಫೋನ್‌ ಕದ್ದಾಲಿಸಿದೆ. ಅಲ್ಲದೇ ವಿಪಕ್ಷಗಳ ಧ್ವನಿಯನ್ನು ಅಡಗಿಸಲು ಹಲವಾರು ಕ್ರಿಮಿನಲ್‌ ಮೊಕದ್ದಮೆಗಳನ್ನು ಹಾಕಲಾಗಿದೆ. ನನ್ನ ಮೇಲೂ ಹಲವು ಸುಳ್ಳು ಮೊಕದ್ದಮೆಗಳು ದಾಖಲಾಗಿವೆ ಎಂದು ರಾಹುಲ್‌ ಗಾಂಧಿ ಹೇಳಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಿಜೆಪಿ ಶಾಸಕರು ಪೀಠಕ್ಕೆ ಆಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಆಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್