AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯ ಸೇನೆ ವಿರುದ್ಧ ಅವಹೇಳನಕಾರಿ ಹೇಳಿಕೆ; ರಾಹುಲ್ ಗಾಂಧಿಗೆ ಜಾಮೀನು

2022ರ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಭಾರತೀಯ ಸೇನೆಯ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಾಗಿದೆ. ಇಂದು ಲಕ್ನೋ ನ್ಯಾಯಾಲಯದ ಮುಂದೆ ವಿಚಾರಣೆಗೆ ಹಾಜರಾದ ರಾಹುಲ್ ಗಾಂಧಿಗೆ ಜಾಮೀನು ಮಂಜೂರು ಮಾಡಲಾಗಿದೆ. ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ರಾಹುಲ್ ಗಾಂಧಿ ಭಾರತೀಯ ಸೈನಿಕರ ವಿರುದ್ಧ ನೀಡಿದ ಮಾನನಷ್ಟ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಅಜಯ್ ರೈ ಮತ್ತು ಉಸ್ತುವಾರಿ ಅವಿನಾಶ್ ಪಾಂಡೆ ಅವರೊಂದಿಗೆ ವಿಶೇಷ ಸಂಸದ/ಶಾಸಕ ನ್ಯಾಯಾಲಯಕ್ಕೆ ಅವರನ್ನು ಕರೆದೊಯ್ಯಲಾಯಿತು.

ಭಾರತೀಯ ಸೇನೆ ವಿರುದ್ಧ ಅವಹೇಳನಕಾರಿ ಹೇಳಿಕೆ; ರಾಹುಲ್ ಗಾಂಧಿಗೆ ಜಾಮೀನು
Rahul Gandhi
ಸುಷ್ಮಾ ಚಕ್ರೆ
|

Updated on: Jul 15, 2025 | 6:22 PM

Share

ಲಕ್ನೋ, ಜುಲೈ 15: 2022ರ ಭಾರತ್ ಜೋಡೋ ಯಾತ್ರೆಯ (Bharat Jodo Yatra) ಸಂದರ್ಭದಲ್ಲಿ ಭಾರತೀಯ ಸೇನೆಯ ಬಗ್ಗೆ ನೀಡಿದ ಅವಹೇಳನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಅವರಿಗೆ ಲಕ್ನೋ ನ್ಯಾಯಾಲಯ ಜಾಮೀನು ನೀಡಿದೆ. ಮಾಹಿತಿಯ ಪ್ರಕಾರ, ಹೆಚ್ಚುವರಿ ಸಿಜೆಎಂ ಅಲೋಕ್ ವರ್ಮಾ ನೇತೃತ್ವದ ಸಂಸದ-ಶಾಸಕ ನ್ಯಾಯಾಲಯವು ತಲಾ 20,000 ರೂ.ಗಳ ಎರಡು ಬಾಂಡ್‌ಗಳನ್ನು ಒದಗಿಸುವ ಮೂಲಕ ರಾಹುಲ್ ಗಾಂಧಿ ಅವರಿಗೆ ರಿಲೀಫ್ ನೀಡಿದೆ.

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಭಾರತೀಯ ಸೈನಿಕರ ವಿರುದ್ಧ ರಾಹುಲ್ ಗಾಂಧಿ ನೀಡಿದ ಅವಹೇಳನಕಾರಿ ಹೇಳಿಕೆಗಳ ಕಾರಣದಿಂದ ಈ ಮಾನನಷ್ಟ ಪ್ರಕರಣ ದಾಖಲಿಸಲಾಗಿತ್ತು. ನ್ಯಾಯಾಲಯದ ಸಮನ್ಸ್‌ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಲಕ್ನೋದಲ್ಲಿರುವ ಸಂಸದರು ಮತ್ತು ಶಾಸಕರ ವಿಶೇಷ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಇಂದು ಹಾಜರಾದರು.

ಇದನ್ನೂ ಓದಿ: ರಾಹುಲ್ ಗಾಂಧಿ, ರೇವಂತ್ ರೆಡ್ಡಿಯಿಂದ ಸಶಸ್ತ್ರ ಪಡೆಗಳಿಗೆ ಅವಮಾನ; ಕೇಂದ್ರ ಸಚಿವ ಕಿಶನ್ ರೆಡ್ಡಿ ಟೀಕೆ

ರಾಹುಲ್ ಗಾಂಧಿ ಏನು ಹೇಳಿದ್ದರು?:

ಡಿಸೆಂಬರ್ 16, 2022ರಂದು ಭಾರತ್ ಜೋಡೋ ಯಾತ್ರೆಯ ಸಮಯದಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ ಗಾಲ್ವಾನ್ ಕಣಿವೆಯಲ್ಲಿ ನಡೆದ ಘರ್ಷಣೆಯನ್ನು ಪ್ರಸ್ತಾಪಿಸಿದ್ದರು. “ಚೀನಾದ ಸೈನಿಕರು ನಮ್ಮ ಸೈನಿಕರನ್ನು ಥಳಿಸುತ್ತಿದ್ದಾರೆ. ಯಾರೂ ಅದರ ಬಗ್ಗೆ ಪ್ರಶ್ನೆಗಳನ್ನು ಕೇಳುತ್ತಿಲ್ಲ” ಎಂದು ರಾಹುಲ್ ಟೀಕಿಸಿದ್ದರು. “ಚೀನಾದ ಸೈನಿಕರು ನಮ್ಮ ಸೈನಿಕರನ್ನು ಥಳಿಸುತ್ತಿದ್ದಾರೆ” ಎಂದು ಹೇಳಿದ್ದು ವಿವಾದಕ್ಕೆ ಕಾರಣವಾಗಿತ್ತು. ಏಕೆಂದರೆ ಭಾರತೀಯ ಸೇನೆಯು ಡಿಸೆಂಬರ್ 12ರಂದು ಅಧಿಕೃತ ಹೇಳಿಕೆಯನ್ನು ನೀಡಿತ್ತು. ಚೀನಾದ ಸೈನಿಕರು ಭಾರತದ ಪ್ರದೇಶಕ್ಕೆ ನುಸುಳಲು ಪ್ರಯತ್ನಿಸಿದರು. ಆದರೆ ಅವರಿಗೆ ದೃಢ ಮತ್ತು ಸೂಕ್ತ ಪ್ರತಿಕ್ರಿಯೆಯನ್ನು ನೀಡಲಾಯಿತು ಎಂದು ಸ್ಪಷ್ಟಪಡಿಸಿತ್ತು.

ಇದನ್ನೂ ಓದಿ: ನವದೆಹಲಿ: ಹುಟ್ಟುಹಬ್ಬದ ದಿನವೇ ಹೊಸ ಬಂಗಲೆಗೆ ಸ್ಥಳಾಂತರಗೊಂಡ ರಾಹುಲ್ ಗಾಂಧಿ

ರಾಹುಲ್ ಗಾಂಧಿಯವರ ಹೇಳಿಕೆಗಳ ನಂತರ, ಗಡಿ ರಸ್ತೆಗಳ ಸಂಘಟನೆಯ (BRO) ಮಾಜಿ ನಿರ್ದೇಶಕ ಉದಯ್ ಶಂಕರ್ ಶ್ರೀವಾಸ್ತವ ಲಕ್ನೋ ನ್ಯಾಯಾಲಯದಲ್ಲಿ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು. ರಾಹುಲ್ ಗಾಂಧಿ ಪರಿಹಾರ ಕೋರಿ ಅಲಹಾಬಾದ್ ಹೈಕೋರ್ಟ್ ಅನ್ನು ಸಂಪರ್ಕಿಸಿದ್ದರು. ಆದರೆ ಅವರ ಅರ್ಜಿಯನ್ನು ವಜಾಗೊಳಿಸಲಾಯಿತು. ಚೀನಾ ಸೈನಿಕರು ಭಾರತೀಯ ಸೈನಿಕರನ್ನು ಥಳಿಸಿದ್ದಾರೆ ಎಂಬ ರಾಹುಲ್ ಗಾಂಧಿಯವರ ಹೇಳಿಕೆಯಿಂದ ತಮ್ಮ ಭಾವನೆಗಳಿಗೆ ನೋವಾಗಿದೆ ಎಂದು ದೂರುದಾರರು ಆರೋಪಿಸಿದ್ದರು. ಆದರೆ, ಕಳೆದ 5 ವಿಚಾರಣೆಗಳಲ್ಲಿ ರಾಹುಲ್ ಗಾಂಧಿ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಇದೇ ಮೊದಲ ಬಾರಿ ಅವರು ವಿಚಾರಣೆಗೆ ಹಾಜರಾಗಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!