AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮಿತ್ ಶಾ ವಿರುದ್ಧ ಮಾನನಷ್ಟ ಹೇಳಿಕೆ ನೀಡಿದ್ದ ರಾಹುಲ್ ಗಾಂಧಿಗೆ ಜಾರ್ಖಂಡ್ ನ್ಯಾಯಾಲಯದಿಂದ ಜಾಮೀನು

2018ರಲ್ಲಿ ಜಾರ್ಖಂಡ್​​ನ ಚೈಬಾಸಾದಲ್ಲಿ ನಡೆದ ರ್ಯಾಲಿಯಲ್ಲಿ ಅಮಿತ್ ಶಾ ವಿರುದ್ಧ ಮಾನನಷ್ಟ ಹೇಳಿಕೆ ನೀಡಿದ ಆರೋಪದ ಮೇಲೆ ಪ್ರತಾಪ್ ಕುಮಾರ್ ಎಂಬ ವ್ಯಕ್ತಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಆ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಜಾರ್ಖಂಡ್​ ನ್ಯಾಯಾಲಯ ಇಂದು ಜಾಮೀನು ಮಂಜೂರು ಮಾಡಿದೆ.

ಅಮಿತ್ ಶಾ ವಿರುದ್ಧ ಮಾನನಷ್ಟ ಹೇಳಿಕೆ ನೀಡಿದ್ದ ರಾಹುಲ್ ಗಾಂಧಿಗೆ ಜಾರ್ಖಂಡ್ ನ್ಯಾಯಾಲಯದಿಂದ ಜಾಮೀನು
Rahul Gandhi In Jharkhand
ಸುಷ್ಮಾ ಚಕ್ರೆ
|

Updated on:Aug 06, 2025 | 3:56 PM

Share

ಚೈಬಾಸಾ, ಆಗಸ್ಟ್ 6: 2018ರಲ್ಲಿ ನಡೆದ ರ್ಯಾಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರ ವಿರುದ್ಧ ಮಾನನಷ್ಟ ಹೇಳಿಕೆ ನೀಡಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ (Rahul Gandhi) ಜಾರ್ಖಂಡ್‌ನ ಚೈಬಾಸಾದ ಸಂಸದ-ಶಾಸಕ ನ್ಯಾಯಾಲಯವು ಬುಧವಾರ ಜಾಮೀನು ನೀಡಿದೆ. ಇಂದು ಬೆಳಿಗ್ಗೆ 10.55ರ ಸುಮಾರಿಗೆ ರಾಹುಲ್ ಗಾಂಧಿ ನ್ಯಾಯಾಲಯದ ಮುಂದೆ ಹಾಜರಾದರು.

“ಜಾರ್ಖಂಡ್ ಹೈಕೋರ್ಟ್ ನಿರ್ದೇಶನದಂತೆ ರಾಹುಲ್ ಗಾಂಧಿ ನ್ಯಾಯಾಲಯದ ಮುಂದೆ ಹಾಜರಾದರು. ಅವರು ಜಾಮೀನು ಕೋರಿದ್ದರು. ಮಾನನಷ್ಟ ಪ್ರಕರಣದಲ್ಲಿ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ” ಎಂದು ರಾಹುಲ್ ಗಾಂಧಿಯವರ ವಕೀಲ ಪ್ರಣವ್ ದರಿಪಾ ಹೇಳಿದ್ದಾರೆ. ಈ ಮಾನನಷ್ಟ ಮೊಕದ್ದಮೆ 2018ರಲ್ಲಿ ದಾಖಲಾಗಿತ್ತು ಎಂದು ವಕೀಲರು ತಿಳಿಸಿದ್ದಾರೆ.

ಇದನ್ನೂ ಓದಿ: ನಿಜವಾದ ಭಾರತೀಯ ಎಂದೂ ಈ ರೀತಿ ಮಾತನಾಡೋದಿಲ್ಲ: ಸೇನೆ ಬಗ್ಗೆ ರಾಹುಲ್ ಹೇಳಿಕೆಗೆ ಸುಪ್ರೀಂ ಛೀಮಾರಿ

“ಈ ಪ್ರಕರಣವನ್ನು ಆರಂಭದಲ್ಲಿ ರಾಂಚಿಯಲ್ಲಿ ದಾಖಲಿಸಲಾಗಿತ್ತು. 2021ರಲ್ಲಿ ಚೈಬಾಸಾಗೆ ವರ್ಗಾಯಿಸಲಾಯಿತು. ಹೈಕೋರ್ಟ್ ಮುಂದೆ ವೈಯಕ್ತಿಕವಾಗಿ ವಿಚಾರಣೆಗೆ ಹಾಜರಾಗಲು ವಿನಾಯಿತಿ ನೀಡುವಂತೆ ನಾವು ಅರ್ಜಿ ಸಲ್ಲಿಸಿದ್ದೆವು. ಹೈಕೋರ್ಟ್ ನಿರ್ದೇಶನದ ಮೇರೆಗೆ ನಾವು ಈ ಕೋರ್ಟ್​ಗೆ ಬಂದಿದ್ದೇವೆ. ನ್ಯಾಯಾಲಯವು ರಾಹುಲ್ ಗಾಂಧಿಯವರಿಗೆ ವಿಚಾರಣೆಯಲ್ಲಿ ಸಹಕರಿಸುವಂತೆ ಕೇಳಿಕೊಂಡಿದೆ” ಎಂದು ಅವರು ಹೇಳಿದ್ದಾರೆ.

ಜೂನ್ 26ರಂದು ಜಾರ್ಖಂಡ್ ಹೈಕೋರ್ಟ್ ಮುಂದೆ ಹಾಜರಾಗುವಂತೆ ಸೂಚಿಸಿದ್ದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಜೂನ್ 2ರಂದು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯ ವಕೀಲರು ಜೂನ್ 10ರಂದು ತಮ್ಮ ಕಕ್ಷಿದಾರರು ನಿಗದಿತ ದಿನದಂದು ಕೋರ್ಟ್ ಮುಂದೆ ಹಾಜರಾಗಲು ಸಾಧ್ಯವಾಗುವುದಿಲ್ಲ ಎಂದು ಹೈಕೋರ್ಟ್‌ಗೆ ತಿಳಿಸಿದ್ದರು. ಅದರ ಬದಲಿಗೆ ಆಗಸ್ಟ್ 6ರಂದು ಹಾಜರಾಗಲು ಅವಕಾಶ ನೀಡುವಂತೆ ಕೋರಿದ್ದರು. ಹೈಕೋರ್ಟ್ ಅವರ ಮನವಿಯನ್ನು ಅಂಗೀಕರಿಸಿತ್ತು.

ಇದನ್ನೂ ಓದಿ: ಪಹಲ್ಗಾಮ್​​ನಲ್ಲಿ 26 ಜನರನ್ನು ಕೊಂದ ಮೂವರು ಉಗ್ರರ ಹತ್ಯೆ; ಸಂಸತ್​​ನಲ್ಲಿ ಅಮಿತ್ ಶಾ ಘೋಷಣೆ

2018ರಲ್ಲಿ ಚೈಬಾಸಾದಲ್ಲಿ ನಡೆದ ರ್ಯಾಲಿಯಲ್ಲಿ ಅಮಿತ್ ಶಾ ವಿರುದ್ಧ ಮಾನನಷ್ಟ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ಪ್ರತಾಪ್ ಕುಮಾರ್ ಎಂಬ ವ್ಯಕ್ತಿ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಚೈಬಾಸಾದ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಸಲ್ಲಿಸಿದ ಅರ್ಜಿಯಲ್ಲಿ ಪ್ರತಾಪ್ ಕುಮಾರ್, ರಾಹುಲ್ ಗಾಂಧಿಯವರ ಹೇಳಿಕೆಗಳು ಮಾನನಷ್ಟಕರವಾಗಿದ್ದು, ಅಮಿತ್ ಶಾ ಅವರ ಸ್ಥಾನಮಾನಕ್ಕೆ ಕಳಂಕ ತರುವ ಉದ್ದೇಶವನ್ನು ಹೊಂದಿದೆ ಎಂದು ಆರೋಪಿಸಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 3:54 pm, Wed, 6 August 25

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ