AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Gandhi: ಸರ್ಕಾರಿ ನಿವಾಸ ಖಾಲಿ ಮಾಡಿದ ರಾಹುಲ್ ಗಾಂಧಿ

ಲೋಕ ಸಭೆಯಿಂದ ಅನರ್ಹಗೊಂಡ ರಾಹುಲ್​ ಗಾಂಧಿಯವರು ಸರ್ಕಾರ ನೀಡಿದ ಅಧಿಕೃತ ನಿವಾಸವನ್ನು ಖಾಲಿ ಮಾಡಿದ್ದಾರೆ. ಇದೀಗ ಮನೆಯ ಮುಂದೆ ತಮ್ಮ ಸಾಮಗ್ರಿಗಳನ್ನು ಸಾಗಿಸಲು ಟ್ರಕ್ ಬಂದು ಮನೆಯ ಮುಂದೆ ನಿಂತಿದೆ.

Rahul Gandhi: ಸರ್ಕಾರಿ ನಿವಾಸ  ಖಾಲಿ ಮಾಡಿದ ರಾಹುಲ್ ಗಾಂಧಿ
ಸರ್ಕಾರಿ ನಿವಾಸ ಖಾಲಿ ಮಾಡಿದ ರಾಹುಲ್ ಗಾಂಧಿ
ಅಕ್ಷಯ್​ ಪಲ್ಲಮಜಲು​​
|

Updated on:Apr 29, 2023 | 10:43 AM

Share

ದೆಹಲಿ: ಮೋದಿ ಉಪನಾಮಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ರಾಹುಲ್ ಗಾಂಧಿ (Rahul Gandhi) ಅವರ ಮೇಲೆ ಮಾನನಷ್ಟ ಮೊಕದ್ದಮೆಯನ್ನು ಹಾಕಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರತ್​ ಕೋರ್ಟ್​ ರಾಹುಲ್ ಗಾಂಧಿ ಅವರಿಗೆ ದೋಷಿ ಎಂದು 2 ವರ್ಷಗಳ ಕಾಲ ಶಿಕ್ಷೆಯನ್ನು ವಿಧಿಸಿ, ಜಾಮೀನು ನೀಡಿತ್ತು, ನಂತರ ಲೋಕಸಭೆ ಸದಸ್ಯತ್ವದಿಂದ ಅನರ್ಹ ಕೂಡ ಮಾಡಲಾಗಿತ್ತು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಟ್ನಾದ ನ್ಯಾಯಾಲಯವೊಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿತ್ತು, ಇದೀಗ ಲೋಕ ಸಭೆಯಿಂದ ಅನರ್ಹಗೊಂಡ ರಾಹುಲ್​ ಗಾಂಧಿಯವರು ಸರ್ಕಾರ ನೀಡಿದ ಅಧಿಕೃತ ನಿವಾಸವನ್ನು ಖಾಲಿ ಮಾಡಿದ್ದಾರೆ.  ಮನೆಯ ಮುಂದೆ ತಮ್ಮ ಸಾಮಗ್ರಿಗಳನ್ನು ಸಾಗಿಸಲು ಟ್ರಕ್ ಬಂದು ನಿಂತಿದೆ.

ಅಪರಾಧ ಸಾಬೀತಾದ ಕಾರಣ ಲೋಕಸಭೆಯ ಸದಸ್ಯತ್ವದಿಂದ ಅನರ್ಹಗೊಂಡ ನಂತರ, ಏಪ್ರಿಲ್ 22 ರೊಳಗೆ ಅವರ ಅಧಿಕೃತ ನಿವಾಸವನ್ನು ಖಾಲಿ ಮಾಡುವಂತೆ ಲೋಕಸಭೆಯ ಕಾರ್ಯದರ್ಶಿಯು ರಾಹುಲ್ ಗಾಂಧಿಯರಿಗೆ ಹೇಳಿದ್ದರು. ತುಘಲಕ್ ಲೇನ್ ಬಂಗಲೆಯನ್ನು ರಾಹುಲ್​​ ಗಾಂಧಿಯವರಿಗೆ 2005ರಲ್ಲಿ ಉತ್ತರ ಪ್ರದೇಶದ ಅಮೇಥಿನಿಂದ ಮೊದಲ ಬಾರಿಗೆ ಲೋಕಸಭಾ ಚುನಾವಣೆಯಲ್ಲಿ ಗೆದ್ದ ನಂತರ ಅವರಿಗೆ ಮಂಜೂರು ಮಾಡಲಾಯಿತು. ಆದರೆ ಅವರು ಮಾರ್ಚ್​​ 23ರಿಂದ ಲೋಕಸಭೆಯಿಂದ ಅಹರ್ನಗೊಂಡ ನಂತರ ನಿಯಮದ ಪ್ರಕಾರ, ಅನರ್ಹಗೊಂಡ ಸಂಸದರು ಸರ್ಕಾರಿ ವಸತಿಗೆ ಅರ್ಹರಲ್ಲ ಮತ್ತು ಅಧಿಕೃತ ಬಂಗಲೆಯನ್ನು ಖಾಲಿ ಮಾಡಲು 30 ದಿನಗಳ ಅವಧಿಯನ್ನು ನೀಡಲಾಗುತ್ತದೆ.

ಇದನ್ನೂ ಓದಿ: Rahul Gandhi in Wayanad: ಬಿಜೆಪಿ ನಾಯಕರು ನನ್ನನ್ನು ಅರ್ಥ ಮಾಡಿಕೊಂಡಿಲ್ಲ, ನಾನು ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ರಾಹುಲ್ ಗಾಂಧಿ

2019ರ ಲೋಕಸಭಾ ಚುನಾವಣೆ ಪ್ರಚಾರ ಸಮಯದಲ್ಲಿ ಎಲ್ಲಾ ಕಳ್ಳರು ಮೋದಿ ಉಪನಾಮಗಳನ್ನು ಹೊಂದಿದ್ದಾರೆ ಹೇಗೆ ಎಂದು ಕೇಳಿದರು ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರತ್‌ನ ಸ್ಥಳೀಯ ನ್ಯಾಯಾಲಯವು ಕಾಂಗ್ರೆಸ್ ನಾಯಕನನ್ನು ಎರಡು ವರ್ಷಗಳ ಅವಧಿಗೆ ದೋಷಿ ಎಂದು ಘೋಷಿಸಿತು.

ರಾಹುಲ್​​ ಗಾಂಧಿಯವರು ನಿವಾಸ ಖಾಲಿ ಮಾಡುವ ಸಮಯದಲ್ಲಿ ಮಾಧ್ಯಮಗಳ ಮುಂದೆ ಮಾತನಾಡಿದ್ದಾರೆ ಯಾವಾಗಲೂ ಸರ್ಕಾರಿ ವಸತಿಗೃಹದಲ್ಲಿಯೇ ಇರುತ್ತಿದ್ದರಿಂದ ತನಗೆ ಎಂದಿಗೂ ನನಗೆ ಮನೆ ಇರಲಿಲ್ಲ ಎಂದು ಹೇಳಿದರು. ಈ ಮನೆಗೂ ತನಗೂ ಬಲವಾದ ಬಾಂಧವ್ಯ ಇಲ್ಲ ಎಂದು ಹೇಳಿದ್ದರು. ಕಾಂಗ್ರೆಸ್​​ನ ನಾಯಕ ರಾಹುಲ್​ ಗಾಂಧಿ ಅವರು ತಮ್ಮ ನಿವಾಸದಿಂದ ಖಾಲಿ ಮಾಡುತ್ತಾರೆ ಎಂದಾಗ ಕಾಂಗ್ರೆಸ್​ ಅನೇಕ ಸಂಸದರು ನಾನು ಸರ್ಕಾರಿ ಮನೆಯನ್ನು ಖಾಲಿ ಮಾಡುತ್ತೇವೆ ಎಂದು ‘ಮೇರಾ ಘರ್, ಆಪ್ಕಾ ಘರ್’ ಅಭಿಯಾನವನ್ನು ಪ್ರಾರಂಭಿಸಿದ್ದರು.

Published On - 6:40 pm, Fri, 14 April 23

Follow Us
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬಿಮ್ಸ್ ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ, ಮಗು ಸಾವು ಆರೋಪ!
ಬಿಮ್ಸ್ ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ, ಮಗು ಸಾವು ಆರೋಪ!
ನಾರಿ ಶಕ್ತಿ ವಂದನ ಸಮ್ಮೇಳನ, ಪ್ರಧಾನಿ ಮೋದಿ ಭಾಷಣದ ನೇರ ಪ್ರಸಾರ
ನಾರಿ ಶಕ್ತಿ ವಂದನ ಸಮ್ಮೇಳನ, ಪ್ರಧಾನಿ ಮೋದಿ ಭಾಷಣದ ನೇರ ಪ್ರಸಾರ
ಬಿಯರ್ ಬಾಕ್ಸ್ ಲಾರಿ ಪಲ್ಟಿ, ಅಡಿಕೆ ತೋಟದಲ್ಲಿ ಬಿಯರ್ ಬಾಟಲಿಗಳ ಸುರಿಮಳೆ!
ಬಿಯರ್ ಬಾಕ್ಸ್ ಲಾರಿ ಪಲ್ಟಿ, ಅಡಿಕೆ ತೋಟದಲ್ಲಿ ಬಿಯರ್ ಬಾಟಲಿಗಳ ಸುರಿಮಳೆ!