AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಲ್ ಗಾಂಧಿಯ ವಿಮಾನ ಇಳಿಯಲು ಅನುಮತಿ ನಿರಾಕರಿಸಿಲ್ಲ; ಕಾಂಗ್ರೆಸ್ ಆರೋಪಕ್ಕೆ ಪ್ರತಿಕ್ರಿಯಿಸಿದ ವಾರಣಾಸಿ ಏರ್​​ಪೋರ್ಟ್

Rahul Gandhi: ರಾಹುಲ್ ಗಾಂಧಿ ಪ್ರಯಾಗ್‌ರಾಜ್ ಭೇಟಿ ರದ್ದು, ವಿಮಾನಕ್ಕೆ ಲ್ಯಾಂಡಿಂಗ್ ಅನುಮತಿ ಸಿಕ್ಕಿಲ್ಲ, ಕಾಂಗ್ರೆಸ್ ಸರ್ಕಾರ ರಾಹುಲ್ ಜನಪ್ರಿಯತೆಗೆ ಹೆದರುತ್ತಿದೆ ಎಂದು ಕಾಂಗ್ರೆಸ್ ನಾಯಕರು ಹೇಳಿರುವುದಾಗಿ ಭಾರತ್ ಸಮಾಚಾರ್ ಮಾಡಿದ ಟ್ವೀಟ್​​ಗೆ ಪ್ರತಿಕ್ರಿಯಿಸಿದ ವಾರಣಾಸಿ ವಿಮಾನ ನಿಲ್ದಾಣ, ಆಪರೇಟರ್​​ಗಳು ವಿಮಾನವನ್ನು ರದ್ದುಗೊಳಿಸಿದ್ದು ಎಂದಿದೆ.

ರಾಹುಲ್ ಗಾಂಧಿಯ ವಿಮಾನ ಇಳಿಯಲು ಅನುಮತಿ ನಿರಾಕರಿಸಿಲ್ಲ; ಕಾಂಗ್ರೆಸ್ ಆರೋಪಕ್ಕೆ ಪ್ರತಿಕ್ರಿಯಿಸಿದ ವಾರಣಾಸಿ ಏರ್​​ಪೋರ್ಟ್
ರಾಹುಲ್ ಗಾಂಧಿ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Feb 14, 2023 | 4:55 PM

Share

ರಾಹುಲ್ ಗಾಂಧಿಯವರ (Rahul Gandhi)  ಚಾರ್ಟರ್ಡ್ ವಿಮಾನಕ್ಕೆ ಸೋಮವಾರ ತಡರಾತ್ರಿ ಇಳಿಯಲು ಅನುಮತಿ ನಿರಾಕರಿಸಲಾಗಿದೆ ಎಂದು ಕಾಂಗ್ರೆಸ್ (Congress) ಹೇಳಿತ್ತು. ಇದಾಗಿ ಕೆಲವೇ ಗಂಟೆಗಳ ನಂತರ ರಾಹುಲ್ ಗಾಂಧಿ ಅವರೇ ಇಲ್ಲಿ ವಿಮಾನ ಇಳಿಯುವುದನ್ನು ರದ್ದುಗೊಳಿಸಿದ್ದಾರೆ ಎಂದು ವಾರಣಾಸಿ ವಿಮಾನ ನಿಲ್ದಾಣ ಪ್ರಾಧಿಕಾರ(Varanasi airport) ಮಂಗಳವಾರ ತಿಳಿಸಿದೆ. “13ನೇ ಫೆಬ್ರವರಿ 2013 ರಂದು 2116 ಗಂಟೆಗೆ AAI ವಾರಣಾಸಿ ವಿಮಾನ ನಿಲ್ದಾಣಕ್ಕೆ ಇಮೇಲ್ ಕಳುಹಿಸುವ ಮೂಲಕ M/s AR ಏರ್‌ವೇಸ್ ವಿಮಾನವನ್ನು ರದ್ದುಗೊಳಿಸಿದೆ” ಎಂದು ವಾರಣಾಸಿ ವಿಮಾನ ನಿಲ್ದಾಣ ಟ್ವೀಟ್‌ ಮಾಡಿದೆ.ರಾಹುಲ್ ಗಾಂಧಿ ಪ್ರಯಾಗ್‌ರಾಜ್ ಭೇಟಿ ರದ್ದು, ವಿಮಾನಕ್ಕೆ ಲ್ಯಾಂಡಿಂಗ್ ಅನುಮತಿ ಸಿಕ್ಕಿಲ್ಲ, ಕಾಂಗ್ರೆಸ್ ಸರ್ಕಾರ ರಾಹುಲ್ ಜನಪ್ರಿಯತೆಗೆ ಹೆದರುತ್ತಿದೆ ಎಂದು ಕಾಂಗ್ರೆಸ್ ನಾಯಕರು ಹೇಳಿರುವುದಾಗಿ ಭಾರತ್ ಸಮಾಚಾರ್ ಮಾಡಿದ ಟ್ವೀಟ್​​ಗೆ ಪ್ರತಿಕ್ರಿಯಿಸಿದ ವಾರಣಾಸಿ ವಿಮಾನ ನಿಲ್ದಾಣ, ಆಪರೇಟರ್​​ಗಳು ವಿಮಾನವನ್ನು ರದ್ದುಗೊಳಿಸಿದ್ದು, ದಯವಿಟ್ಟು ನಿಮ್ಮ ಹೇಳಿಕೆಯನ್ನು ಸರಿಪಡಿಸಿ ಎಂದಿದೆ.

ಕೇರಳದ ವಯನಾಡಿನಿಂದ ಹಿಂದಿರುಗುವಾಗ ರಾಹುಲ್ ಗಾಂಧಿಯವರ ವಿಮಾನವನ್ನು ಇಲ್ಲಿನ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಸಲು ನಿರ್ಧರಿಸಲಾಗಿತ್ತು. ನಾನು ಮತ್ತು ಪಕ್ಷದ ಇತರ ನಾಯಕರು ಗಾಂಧಿಯನ್ನು ಬರಮಾಡಿಕೊಳ್ಳಲು ವಿಮಾನ ನಿಲ್ದಾಣದಲ್ಲಿದ್ದೆವು. ಆದರೆ “ಕೊನೆಯ ಗಳಿಗೆಯಲ್ಲಿ” ಅವರ ವಿಮಾನವನ್ನು ಇಳಿಯಲು ಅನುಮತಿಸಲಿಲ್ಲ. ರಾಹುಲ್ ಗಾಂಧಿ ನಂತರ ನವದೆಹಲಿಗೆ ಮರಳಿದರು.

ಇದನ್ನೂ ಓದಿ:ಉತ್ತರ ಪ್ರದೇಶ: ಅತಿಕ್ರಮಣ ವಿರೋಧಿ ಅಭಿಯಾನದ ವೇಳೆ ಅಮ್ಮ, ಮಗಳು ಬೆಂಕಿಗಾಹುತಿ; ಕೊಲೆ ಪ್ರಕರಣ ದಾಖಲು

ರಾಹುಲ್ ಗಾಂಧಿ ಬರುತ್ತಾರೆ ಎಂಬುದರ ಬಗ್ಗೆ ಯಾವುದೇ ಪೂರ್ವ ಮಾಹಿತಿ ಇಲ್ಲ ಎಂದು ವಾರಣಾಸಿ ವಿಮಾನ ನಿಲ್ದಾಣದ ನಿರ್ದೇಶಕ ಆರ್ಯಮ ಸನ್ಯಾಲ್ ಪಿಟಿಐಗೆ ತಿಳಿಸಿದ್ದಾರೆ. ಅಂದ ಹಾಗೆ ರಾಹುಲ್ ಗಾಂಧಿಯವರ ವಿಮಾನವನ್ನು ಇಳಿಸಲು ಅನುಮತಿ ನಿರಾಕರಿಸಲಾಗಿದೆ ಎಂಬ ಕಾಂಗ್ರೆಸ್ ನ ಆರೋಪವನ್ನು ಅವರು ನಿರಾಕರಿಸಿದ್ದಾರೆ. ವಿಮಾನ ನಿಲ್ದಾಣದಲ್ಲಿ ಇಳಿಯುವ ಯೋಜನೆಯನ್ನು ರದ್ದುಗೊಳಿಸಲಾಗಿದೆ ಎಂದು ಏರ್ ಟ್ರಾಫಿಕ್ ಕಂಟ್ರೋಲರ್‌ಗೆ ತಿಳಿಸಲಾಗಿತ್ತು ಎಂದಿದ್ದಾರೆ ಸನ್ಯಾಲ್.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​