AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಲ್ ಗಾಂಧಿಯ ವಿಮಾನ ಇಳಿಯಲು ಅನುಮತಿ ನಿರಾಕರಿಸಿಲ್ಲ; ಕಾಂಗ್ರೆಸ್ ಆರೋಪಕ್ಕೆ ಪ್ರತಿಕ್ರಿಯಿಸಿದ ವಾರಣಾಸಿ ಏರ್​​ಪೋರ್ಟ್

Rahul Gandhi: ರಾಹುಲ್ ಗಾಂಧಿ ಪ್ರಯಾಗ್‌ರಾಜ್ ಭೇಟಿ ರದ್ದು, ವಿಮಾನಕ್ಕೆ ಲ್ಯಾಂಡಿಂಗ್ ಅನುಮತಿ ಸಿಕ್ಕಿಲ್ಲ, ಕಾಂಗ್ರೆಸ್ ಸರ್ಕಾರ ರಾಹುಲ್ ಜನಪ್ರಿಯತೆಗೆ ಹೆದರುತ್ತಿದೆ ಎಂದು ಕಾಂಗ್ರೆಸ್ ನಾಯಕರು ಹೇಳಿರುವುದಾಗಿ ಭಾರತ್ ಸಮಾಚಾರ್ ಮಾಡಿದ ಟ್ವೀಟ್​​ಗೆ ಪ್ರತಿಕ್ರಿಯಿಸಿದ ವಾರಣಾಸಿ ವಿಮಾನ ನಿಲ್ದಾಣ, ಆಪರೇಟರ್​​ಗಳು ವಿಮಾನವನ್ನು ರದ್ದುಗೊಳಿಸಿದ್ದು ಎಂದಿದೆ.

ರಾಹುಲ್ ಗಾಂಧಿಯ ವಿಮಾನ ಇಳಿಯಲು ಅನುಮತಿ ನಿರಾಕರಿಸಿಲ್ಲ; ಕಾಂಗ್ರೆಸ್ ಆರೋಪಕ್ಕೆ ಪ್ರತಿಕ್ರಿಯಿಸಿದ ವಾರಣಾಸಿ ಏರ್​​ಪೋರ್ಟ್
ರಾಹುಲ್ ಗಾಂಧಿ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Feb 14, 2023 | 4:55 PM

Share

ರಾಹುಲ್ ಗಾಂಧಿಯವರ (Rahul Gandhi)  ಚಾರ್ಟರ್ಡ್ ವಿಮಾನಕ್ಕೆ ಸೋಮವಾರ ತಡರಾತ್ರಿ ಇಳಿಯಲು ಅನುಮತಿ ನಿರಾಕರಿಸಲಾಗಿದೆ ಎಂದು ಕಾಂಗ್ರೆಸ್ (Congress) ಹೇಳಿತ್ತು. ಇದಾಗಿ ಕೆಲವೇ ಗಂಟೆಗಳ ನಂತರ ರಾಹುಲ್ ಗಾಂಧಿ ಅವರೇ ಇಲ್ಲಿ ವಿಮಾನ ಇಳಿಯುವುದನ್ನು ರದ್ದುಗೊಳಿಸಿದ್ದಾರೆ ಎಂದು ವಾರಣಾಸಿ ವಿಮಾನ ನಿಲ್ದಾಣ ಪ್ರಾಧಿಕಾರ(Varanasi airport) ಮಂಗಳವಾರ ತಿಳಿಸಿದೆ. “13ನೇ ಫೆಬ್ರವರಿ 2013 ರಂದು 2116 ಗಂಟೆಗೆ AAI ವಾರಣಾಸಿ ವಿಮಾನ ನಿಲ್ದಾಣಕ್ಕೆ ಇಮೇಲ್ ಕಳುಹಿಸುವ ಮೂಲಕ M/s AR ಏರ್‌ವೇಸ್ ವಿಮಾನವನ್ನು ರದ್ದುಗೊಳಿಸಿದೆ” ಎಂದು ವಾರಣಾಸಿ ವಿಮಾನ ನಿಲ್ದಾಣ ಟ್ವೀಟ್‌ ಮಾಡಿದೆ.ರಾಹುಲ್ ಗಾಂಧಿ ಪ್ರಯಾಗ್‌ರಾಜ್ ಭೇಟಿ ರದ್ದು, ವಿಮಾನಕ್ಕೆ ಲ್ಯಾಂಡಿಂಗ್ ಅನುಮತಿ ಸಿಕ್ಕಿಲ್ಲ, ಕಾಂಗ್ರೆಸ್ ಸರ್ಕಾರ ರಾಹುಲ್ ಜನಪ್ರಿಯತೆಗೆ ಹೆದರುತ್ತಿದೆ ಎಂದು ಕಾಂಗ್ರೆಸ್ ನಾಯಕರು ಹೇಳಿರುವುದಾಗಿ ಭಾರತ್ ಸಮಾಚಾರ್ ಮಾಡಿದ ಟ್ವೀಟ್​​ಗೆ ಪ್ರತಿಕ್ರಿಯಿಸಿದ ವಾರಣಾಸಿ ವಿಮಾನ ನಿಲ್ದಾಣ, ಆಪರೇಟರ್​​ಗಳು ವಿಮಾನವನ್ನು ರದ್ದುಗೊಳಿಸಿದ್ದು, ದಯವಿಟ್ಟು ನಿಮ್ಮ ಹೇಳಿಕೆಯನ್ನು ಸರಿಪಡಿಸಿ ಎಂದಿದೆ.

ಕೇರಳದ ವಯನಾಡಿನಿಂದ ಹಿಂದಿರುಗುವಾಗ ರಾಹುಲ್ ಗಾಂಧಿಯವರ ವಿಮಾನವನ್ನು ಇಲ್ಲಿನ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಸಲು ನಿರ್ಧರಿಸಲಾಗಿತ್ತು. ನಾನು ಮತ್ತು ಪಕ್ಷದ ಇತರ ನಾಯಕರು ಗಾಂಧಿಯನ್ನು ಬರಮಾಡಿಕೊಳ್ಳಲು ವಿಮಾನ ನಿಲ್ದಾಣದಲ್ಲಿದ್ದೆವು. ಆದರೆ “ಕೊನೆಯ ಗಳಿಗೆಯಲ್ಲಿ” ಅವರ ವಿಮಾನವನ್ನು ಇಳಿಯಲು ಅನುಮತಿಸಲಿಲ್ಲ. ರಾಹುಲ್ ಗಾಂಧಿ ನಂತರ ನವದೆಹಲಿಗೆ ಮರಳಿದರು.

ಇದನ್ನೂ ಓದಿ:ಉತ್ತರ ಪ್ರದೇಶ: ಅತಿಕ್ರಮಣ ವಿರೋಧಿ ಅಭಿಯಾನದ ವೇಳೆ ಅಮ್ಮ, ಮಗಳು ಬೆಂಕಿಗಾಹುತಿ; ಕೊಲೆ ಪ್ರಕರಣ ದಾಖಲು

ರಾಹುಲ್ ಗಾಂಧಿ ಬರುತ್ತಾರೆ ಎಂಬುದರ ಬಗ್ಗೆ ಯಾವುದೇ ಪೂರ್ವ ಮಾಹಿತಿ ಇಲ್ಲ ಎಂದು ವಾರಣಾಸಿ ವಿಮಾನ ನಿಲ್ದಾಣದ ನಿರ್ದೇಶಕ ಆರ್ಯಮ ಸನ್ಯಾಲ್ ಪಿಟಿಐಗೆ ತಿಳಿಸಿದ್ದಾರೆ. ಅಂದ ಹಾಗೆ ರಾಹುಲ್ ಗಾಂಧಿಯವರ ವಿಮಾನವನ್ನು ಇಳಿಸಲು ಅನುಮತಿ ನಿರಾಕರಿಸಲಾಗಿದೆ ಎಂಬ ಕಾಂಗ್ರೆಸ್ ನ ಆರೋಪವನ್ನು ಅವರು ನಿರಾಕರಿಸಿದ್ದಾರೆ. ವಿಮಾನ ನಿಲ್ದಾಣದಲ್ಲಿ ಇಳಿಯುವ ಯೋಜನೆಯನ್ನು ರದ್ದುಗೊಳಿಸಲಾಗಿದೆ ಎಂದು ಏರ್ ಟ್ರಾಫಿಕ್ ಕಂಟ್ರೋಲರ್‌ಗೆ ತಿಳಿಸಲಾಗಿತ್ತು ಎಂದಿದ್ದಾರೆ ಸನ್ಯಾಲ್.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ