AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಲ್ ಗಾಂಧಿಯ ವಿಮಾನ ಇಳಿಯಲು ಅನುಮತಿ ನಿರಾಕರಿಸಿಲ್ಲ; ಕಾಂಗ್ರೆಸ್ ಆರೋಪಕ್ಕೆ ಪ್ರತಿಕ್ರಿಯಿಸಿದ ವಾರಣಾಸಿ ಏರ್​​ಪೋರ್ಟ್

Rahul Gandhi: ರಾಹುಲ್ ಗಾಂಧಿ ಪ್ರಯಾಗ್‌ರಾಜ್ ಭೇಟಿ ರದ್ದು, ವಿಮಾನಕ್ಕೆ ಲ್ಯಾಂಡಿಂಗ್ ಅನುಮತಿ ಸಿಕ್ಕಿಲ್ಲ, ಕಾಂಗ್ರೆಸ್ ಸರ್ಕಾರ ರಾಹುಲ್ ಜನಪ್ರಿಯತೆಗೆ ಹೆದರುತ್ತಿದೆ ಎಂದು ಕಾಂಗ್ರೆಸ್ ನಾಯಕರು ಹೇಳಿರುವುದಾಗಿ ಭಾರತ್ ಸಮಾಚಾರ್ ಮಾಡಿದ ಟ್ವೀಟ್​​ಗೆ ಪ್ರತಿಕ್ರಿಯಿಸಿದ ವಾರಣಾಸಿ ವಿಮಾನ ನಿಲ್ದಾಣ, ಆಪರೇಟರ್​​ಗಳು ವಿಮಾನವನ್ನು ರದ್ದುಗೊಳಿಸಿದ್ದು ಎಂದಿದೆ.

ರಾಹುಲ್ ಗಾಂಧಿಯ ವಿಮಾನ ಇಳಿಯಲು ಅನುಮತಿ ನಿರಾಕರಿಸಿಲ್ಲ; ಕಾಂಗ್ರೆಸ್ ಆರೋಪಕ್ಕೆ ಪ್ರತಿಕ್ರಿಯಿಸಿದ ವಾರಣಾಸಿ ಏರ್​​ಪೋರ್ಟ್
ರಾಹುಲ್ ಗಾಂಧಿ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Feb 14, 2023 | 4:55 PM

Share

ರಾಹುಲ್ ಗಾಂಧಿಯವರ (Rahul Gandhi)  ಚಾರ್ಟರ್ಡ್ ವಿಮಾನಕ್ಕೆ ಸೋಮವಾರ ತಡರಾತ್ರಿ ಇಳಿಯಲು ಅನುಮತಿ ನಿರಾಕರಿಸಲಾಗಿದೆ ಎಂದು ಕಾಂಗ್ರೆಸ್ (Congress) ಹೇಳಿತ್ತು. ಇದಾಗಿ ಕೆಲವೇ ಗಂಟೆಗಳ ನಂತರ ರಾಹುಲ್ ಗಾಂಧಿ ಅವರೇ ಇಲ್ಲಿ ವಿಮಾನ ಇಳಿಯುವುದನ್ನು ರದ್ದುಗೊಳಿಸಿದ್ದಾರೆ ಎಂದು ವಾರಣಾಸಿ ವಿಮಾನ ನಿಲ್ದಾಣ ಪ್ರಾಧಿಕಾರ(Varanasi airport) ಮಂಗಳವಾರ ತಿಳಿಸಿದೆ. “13ನೇ ಫೆಬ್ರವರಿ 2013 ರಂದು 2116 ಗಂಟೆಗೆ AAI ವಾರಣಾಸಿ ವಿಮಾನ ನಿಲ್ದಾಣಕ್ಕೆ ಇಮೇಲ್ ಕಳುಹಿಸುವ ಮೂಲಕ M/s AR ಏರ್‌ವೇಸ್ ವಿಮಾನವನ್ನು ರದ್ದುಗೊಳಿಸಿದೆ” ಎಂದು ವಾರಣಾಸಿ ವಿಮಾನ ನಿಲ್ದಾಣ ಟ್ವೀಟ್‌ ಮಾಡಿದೆ.ರಾಹುಲ್ ಗಾಂಧಿ ಪ್ರಯಾಗ್‌ರಾಜ್ ಭೇಟಿ ರದ್ದು, ವಿಮಾನಕ್ಕೆ ಲ್ಯಾಂಡಿಂಗ್ ಅನುಮತಿ ಸಿಕ್ಕಿಲ್ಲ, ಕಾಂಗ್ರೆಸ್ ಸರ್ಕಾರ ರಾಹುಲ್ ಜನಪ್ರಿಯತೆಗೆ ಹೆದರುತ್ತಿದೆ ಎಂದು ಕಾಂಗ್ರೆಸ್ ನಾಯಕರು ಹೇಳಿರುವುದಾಗಿ ಭಾರತ್ ಸಮಾಚಾರ್ ಮಾಡಿದ ಟ್ವೀಟ್​​ಗೆ ಪ್ರತಿಕ್ರಿಯಿಸಿದ ವಾರಣಾಸಿ ವಿಮಾನ ನಿಲ್ದಾಣ, ಆಪರೇಟರ್​​ಗಳು ವಿಮಾನವನ್ನು ರದ್ದುಗೊಳಿಸಿದ್ದು, ದಯವಿಟ್ಟು ನಿಮ್ಮ ಹೇಳಿಕೆಯನ್ನು ಸರಿಪಡಿಸಿ ಎಂದಿದೆ.

ಕೇರಳದ ವಯನಾಡಿನಿಂದ ಹಿಂದಿರುಗುವಾಗ ರಾಹುಲ್ ಗಾಂಧಿಯವರ ವಿಮಾನವನ್ನು ಇಲ್ಲಿನ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಸಲು ನಿರ್ಧರಿಸಲಾಗಿತ್ತು. ನಾನು ಮತ್ತು ಪಕ್ಷದ ಇತರ ನಾಯಕರು ಗಾಂಧಿಯನ್ನು ಬರಮಾಡಿಕೊಳ್ಳಲು ವಿಮಾನ ನಿಲ್ದಾಣದಲ್ಲಿದ್ದೆವು. ಆದರೆ “ಕೊನೆಯ ಗಳಿಗೆಯಲ್ಲಿ” ಅವರ ವಿಮಾನವನ್ನು ಇಳಿಯಲು ಅನುಮತಿಸಲಿಲ್ಲ. ರಾಹುಲ್ ಗಾಂಧಿ ನಂತರ ನವದೆಹಲಿಗೆ ಮರಳಿದರು.

ಇದನ್ನೂ ಓದಿ:ಉತ್ತರ ಪ್ರದೇಶ: ಅತಿಕ್ರಮಣ ವಿರೋಧಿ ಅಭಿಯಾನದ ವೇಳೆ ಅಮ್ಮ, ಮಗಳು ಬೆಂಕಿಗಾಹುತಿ; ಕೊಲೆ ಪ್ರಕರಣ ದಾಖಲು

ರಾಹುಲ್ ಗಾಂಧಿ ಬರುತ್ತಾರೆ ಎಂಬುದರ ಬಗ್ಗೆ ಯಾವುದೇ ಪೂರ್ವ ಮಾಹಿತಿ ಇಲ್ಲ ಎಂದು ವಾರಣಾಸಿ ವಿಮಾನ ನಿಲ್ದಾಣದ ನಿರ್ದೇಶಕ ಆರ್ಯಮ ಸನ್ಯಾಲ್ ಪಿಟಿಐಗೆ ತಿಳಿಸಿದ್ದಾರೆ. ಅಂದ ಹಾಗೆ ರಾಹುಲ್ ಗಾಂಧಿಯವರ ವಿಮಾನವನ್ನು ಇಳಿಸಲು ಅನುಮತಿ ನಿರಾಕರಿಸಲಾಗಿದೆ ಎಂಬ ಕಾಂಗ್ರೆಸ್ ನ ಆರೋಪವನ್ನು ಅವರು ನಿರಾಕರಿಸಿದ್ದಾರೆ. ವಿಮಾನ ನಿಲ್ದಾಣದಲ್ಲಿ ಇಳಿಯುವ ಯೋಜನೆಯನ್ನು ರದ್ದುಗೊಳಿಸಲಾಗಿದೆ ಎಂದು ಏರ್ ಟ್ರಾಫಿಕ್ ಕಂಟ್ರೋಲರ್‌ಗೆ ತಿಳಿಸಲಾಗಿತ್ತು ಎಂದಿದ್ದಾರೆ ಸನ್ಯಾಲ್.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!