AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Gandhi: ರಾಹುಲ್​ ಗಾಂಧಿ ಗೊಂದಲದಲ್ಲಿರುವ, ತಲೆಯಿಲ್ಲದ ನಾಯಕ ಎಂದು ಜರಿದ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ

Parliamentary Affairs Minister Pralhad Joshi: ಈ ಬಾರಿಯ ಗಣರಾಜ್ಯೋತ್ಸವಕ್ಕೆ ಭಾರತವು ಗಣ್ಯ ಅತಿಥಿಯನ್ನು ಹೊಂದುವಲ್ಲಿ ವಿಫಲವಾಗಿದೆ. ಅದು ಯಾಕೆ ಎಂಬುದನ್ನು ನಿಮಗೆ ನೀವೇ ಕೇಳಿಕೊಳ್ಳಿ. ಭಾರತ ಇಂದು ಒಂದು ದ್ವೀಪದಂತೆ ಪ್ರತ್ಯೇಕಗೊಂಡಿದೆ. ಸುತ್ತಲೂ ವೈರಿಗಳಿಂದ ಸುತ್ತುವರಿದಿದೆ ಎಂದು 51 ವರ್ಷದ ರಾಹುಲ್​ ಗಾಂಧಿ ತಮ್ಮ 45 ನಿಮಿಷಗಳ ಭಾಷಣದಲ್ಲಿ ವ್ಯಾಖ್ಯಾನಿಸಿದ್ದರು.

Rahul Gandhi: ರಾಹುಲ್​ ಗಾಂಧಿ ಗೊಂದಲದಲ್ಲಿರುವ, ತಲೆಯಿಲ್ಲದ ನಾಯಕ ಎಂದು ಜರಿದ ಕೇಂದ್ರ ಸಚಿವ  ಪ್ರಲ್ಹಾದ್​ ಜೋಶಿ
ಕಾಂಗ್ರೆಸ್ ಸಂಸದ ರಾಹುಲ್​ ಗಾಂಧಿ ಗೊಂದಲದಲ್ಲಿರುವ, ತಲೆಯಿಲ್ಲದ ನಾಯಕ ಎಂದು ಜರಿದ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ
TV9 Web
| Edited By: |

Updated on:Feb 03, 2022 | 7:57 AM

Share

ನವದೆಹಲಿ: ಕಾಂಗ್ರೆಸ್​ ನಾಯಕ, ವಯನಾಡ್​ ಸಂಸದ ರಾಹುಲ್​ ಗಾಂಧಿ ಗೊಂದಕ್ಕೀಡಾಗಿರುವ, ತಲೆಯಿಲ್ಲದ ನಾಯಕ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್​ ಜೋಶಿ ಜರಿದಿದ್ದಾರೆ. ಅವರೇನು ರಾಹುಲ್​ ಗಾಂಧಿ (Rahul Gandhi) ಭಾರತ ಒಂದು ರಾಷ್ಟ್ರ ಅಲ್ಲ ಅಂತಾರೆ! ಚೀನಾ ದೃಷ್ಟಿಕೋನ ಸ್ಪಷ್ಟವಾಗಿದೆ ಎಂದು ನಮ್ಮ ವಿರೋಧಿ ರಾಷ್ಟ್ರವನ್ನು ಹಾಡಿಹೊಗಳುತ್ತಾರೆ! ಅವರೇನು (ರಾಹುಲ್​ ಗಾಂಧಿ) ಚೀನಾವನ್ನು (China) ಬೆಂಬಲಿಸಲು ಸಂಸತ್ತಿಗೆ ಬಂದಿದ್ದಾರಾ ಎಂದು ಸಚಿವ ಪ್ರಲ್ಹಾದ್​ ಜೋಶಿ (Parliamentary Affairs Minister Pralhad Joshi) ವಯನಾಡ್​ ಸಂಸದ ರಾಹುಲ್​ ಗಾಂಧಿಯನ್ನು ಸಂಸತ್ತಿನಲ್ಲಿಯೇ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಚೀನಾ ತುಂಬಾ ಸ್ಪಷ್ಟ ದೃಷ್ಟಿಕೋನ ಹೊಂದಿದೆ. ಭಾರತದ ವಿದೇಶಾಂಗ ನೀತಿಯ ಏಕೈಕ ಆಯಕಟ್ಟಿನ ಗುರಿ ಏನಾಗಿರಬೇಕಿತ್ತು ಅಂದರೆ ಪಾಕಿಸ್ತಾನ ಮತ್ತು ಚೀನಾ ಪ್ರತ್ಯೇಕವಾಗಿರುವಂತೆ ನೋಡಿಕೊಳ್ಳುವುದಾಗಬೇಕಿತ್ತು. ಆದರೆ ನೀವು ( ಪ್ರಧಾನಿ ಮೋದಿ ನೇತೃತ್ವದ ಭಾರತ ಸರ್ಕಾರ) ಮಾಡಿದ್ದಾದರೂ ಏನು? ಅವರಿಬ್ಬರನ್ನೂ ಹತ್ತಿರ ಹತ್ತಿರಕ್ಕೆ ತಂದಿರಿ ಎಂದು ವಯನಾಡ್​ ಸಂಸದ ರಾಹುಲ್​ ಗಾಂಧಿ ಅವರು ಕೇಂದ್ರ ಬಜೆಟ್​ ಮೇಲಿನ ಭಾಷಣದಲ್ಲಿ ಲೇವಡಿ ಮಾಡಿದ್ದರು.

ಪಾಕಿಸ್ತಾನ ಮತ್ತು ಚೀನಾವನ್ನು ಒಟ್ಟಿಗೆ ತಂದ ವಿದೇಶಾಂಗ ನೀತಿಯಲ್ಲಿ ಪ್ರಸ್ತುತ ಸರ್ಕಾರ ಮೂಲಭೂತ ತಪ್ಪು ಮಾಡಿದೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ರಾಹುಲ್ ವಾಗ್ದಾಳಿ ನಡೆಸಿದ್ದರು. ಚೀನಾದವರು ಡೋಕ್ಲಾಮ್ ಮತ್ತು ಲಡಾಖ್‌ ಬಗ್ಗೆ ಸ್ಪಷ್ಟ ಯೋಜನೆ ಹೊಂದಿದೆ. ಇದು ಭಾರತಕ್ಕೆ ಗಂಭೀರ ಅಪಾಯ ತರಬಲ್ಲದು. ಹಾಗಾಗಿ ನಮ್ಮ ವಿದೇಶಾಂಗ ನೀತಿಯಲ್ಲಿ ನಾವು ದೊಡ್ಡ ಕಾರ್ಯತಂತ್ರ ತಪ್ಪು ಮಾಡಿದ್ದೇವೆ ಎಂದು ರಾಹುಲ್ ಲೋಕಸಭೆಯಲ್ಲಿ ಜರಿದಿದ್ದರು.

ಇನ್ನು ಈ ಬಾರಿಯ ಗಣರಾಜ್ಯೋತ್ಸವಕ್ಕೆ ಭಾರತವು ಗಣ್ಯ ಅತಿಥಿಯನ್ನು ಹೊಂದುವಲ್ಲಿ ವಿಫಲವಾಗಿದೆ. ಅದು ಯಾಕೆ ಎಂಬುದನ್ನು ನಿಮಗೆ ನೀವೇ ಕೇಳಿಕೊಳ್ಳಿ. ಭಾರತ ಇಂದು ಒಂದು ದ್ವೀಪದಂತೆ ಪ್ರತ್ಯೇಕಗೊಂಡಿದೆ. ಸುತ್ತಲೂ ವೈರಿಗಳಿಂದ ಸುತ್ತುವರಿದಿದೆ. ಇದು ನಮ್ಮ ವೈರಿಗಳಿಗೆ ಚೆನ್ನಾಗಿ ಗೊತ್ತಿದೆ ಎಂದು 51 ವರ್ಷದ ರಾಹುಲ್​ ಗಾಂಧಿ ತಮ್ಮ 45 ನಿಮಿಷಗಳ ಭಾಷಣದಲ್ಲಿ ವ್ಯಾಖ್ಯಾನಿಸಿದ್ದರು.

ಇದಕ್ಕೆ ಉತ್ತರಿಸಿದ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್​ ಜೋಶಿ ಅವರು ರಾಹುಲ್​ ಗಾಂಧಿಗೆ ನೆನಪಿನ ಶಕ್ತಿ ಹೋಗಿದೆ ಅನ್ನಿಸುತ್ತದೆ. ಭಾರತವಷ್ಟೇ ಅಲ್ಲ; ಇಡೀ ಜಗತ್ತು ಕೊರೊನಾ ಸೋಂಕಿನಿಂದ ಸುತ್ತುವರಿದಿದೆ. ಹಾಗಾಗಿ ಆಯಾ ರಾಷ್ಟ್ರಗಳು ದ್ವೀಪದಂತೆ ಪ್ರತ್ಯೇಕಗೊಂಡಿವೆ. ಹಾಗಾಗಿ ಕೊರೊನಾ ಕಾರಣದಿಂದ ಕಳೆದ ಎರಡು ವರ್ಷಗಳಿಂದ ಗಣರಾಜ್ಯೋತ್ಸವಕ್ಕೆ ಯಾವುದೇ ಅತಿಥಿಯನ್ನು ಭಾರತ ಆಹ್ವಾನಿಸಿಲ್ಲ ಎಂದು ಪ್ರತ್ಯುತ್ತರ ನೀಡಿದ್ದಾರೆ.

ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿಗೆ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್​ ಜೋಶಿ ತಿರುಗೇಟು:

ಪ್ರಧಾನಿ ಮೋದಿ ನೇತೃತ್ವದ ಭಾರತ ಸರ್ಕಾರದ ವಿದೇಶಾಂಗ ನೀತಿಯನ್ನು ಟೀಕಿಸಿದ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ:

Also Read: Brahma Muhurta: ಬ್ರಾಹ್ಮೀ ಮುಹೂರ್ತ ಅಂದ್ರೆ ಯಾವ ಸಮಯ? ಅದಕ್ಕೇಕೆ ಅಷ್ಟು ಮಹತ್ವ?

Also Read: Om: ಸರ್ವೋಚ್ಚ ಸಂತೋಷ ಪಡೆಯಲು ಓಂ ಮಂತ್ರ ಪಠಿಸಿ, ಇದರಿಂದ ಆಧ್ಯಾತ್ಮವಷ್ಟೇ ಅಲ್ಲ ಆರೋಗ್ಯಕರ ಪ್ರಯೋಜವೂ ಇದೆ!

Published On - 7:52 am, Thu, 3 February 22

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!