ವಿದೇಶಿ ಮಣ್ಣಲ್ಲಿ ನಿಂತು ದೇಶಕ್ಕೆ ಕಪ್ಪು ಮಸಿ ಬಳಿಯುವ ರಾಹುಲ್ ಒಬ್ಬ ಫೇಕ್ ಗಾಂಧಿ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

Fake Gandhi: ಏನೂ ಅರಿಯದೇ ಇದ್ದಕ್ಕಿದ್ದಂತೆ ಎಲ್ಲದರಲ್ಲೂ ಪರಿಣಿತನಾಗಿರುವಂತೆ ರಾಹುಲ್ ಗಾಂಧಿ ವರ್ತಿಸುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಟಾಂಗ್ ನೀಡಿದ್ದಾರೆ.

ವಿದೇಶಿ ಮಣ್ಣಲ್ಲಿ ನಿಂತು ದೇಶಕ್ಕೆ ಕಪ್ಪು ಮಸಿ ಬಳಿಯುವ ರಾಹುಲ್ ಒಬ್ಬ ಫೇಕ್ ಗಾಂಧಿ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ
ವಿದೇಶಿ ಮಣ್ಣಲ್ಲಿ ನಿಂತು ದೇಶಕ್ಕೆ ಕಪ್ಪು ಮಸಿ ಬಳಿಯುವ ರಾಹುಲ್ ಒಬ್ಬ ಫೇಕ್ ಗಾಂಧಿ
Follow us
|

Updated on:Jun 01, 2023 | 5:25 PM

ಗಾಂಧಿ ಹೆಸರಿನ ನೆರಳಲ್ಲೇ ರಾಜಕೀಯ ಮಾಡುವ ರಾಹುಲ್, ಒಬ್ಬ ಫೇಕ್ ಗಾಂಧಿ ( Mr. Fake Gandhi) ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ವಾಗ್ದಾಳಿ ನಡೆಸಿದ್ದಾರೆ. ಅಮೆರಿಕಾದ ಕ್ಯಾಲಿಫೋರ್ನಿಯಾ ಯೂನಿವರ್ಸಿಟಿಯಲ್ಲಿ (Foreign Trip) ಭಾಷಣ ಮಾಡಿದ್ದ ರಾಹುಲ್ ಗಾಂಧಿ (Rahul Gandhi) ಭಾರತ ದೇಶದ ಒಂದು ವರ್ಗ ತನಗೆ ಎಲ್ಲವೂ ಗೊತ್ತು ಎಂದು ತಿಳಿದಿದೆ, ದೇವರಿಗೂ ಹೇಳಿಕೊಡುವಷ್ಟು ತಮಗೆ ಗೊತ್ತಿದೆ ಎಂದು‌ ಭಾವಿಸಿದೆ. ಭಾರತ ದೇಶದ ಪ್ರಧಾನ ಮಂತ್ರಿಯೂ ಆ ಸಾಲಿಗೆ ಸೇರುತ್ತಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಎದುರಿಗೆ ದೇವರು ಬಂದರೆ ಆಗ ಮೋದಿಯವರು ದೇವರಿಗೇ ಈ ಸೃಷ್ಟಿಯ ಬಗ್ಗೆ ವಿವರಿಸುವಂತಹವರು ಎಂದು ವ್ಯಂಗ್ಯವಾಡಿದ್ದ ರಾಹುಲ್ ಗಾಂಧಿ ಈ ಭಾಷಣದಲ್ಲಿ ಪದೇ ಪದೇ ಭಾರತದ ದೇಶದ ಒಂದು ವರ್ಗ ಎಂದು ಮೂದಲಿಸಿ ಮಾತನಾಡಿದ್ದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು (Pralhad Joshi) ಟ್ಚಿಟ್ಟರ್ ಮೂಲಕ ತಿರುಗೇಟು ನೀಡಿದ್ದಾರೆ.

“ಮಿಸ್ಟರ್ ಫೇಕ್ ಗಾಂಧಿಗೆ ಭಾರತದ ತಿರುಳು, ಅದರ ಸಂಸ್ಕೃತಿ ಗೊತ್ತಿಲ್ಲ, ದೇಶಕ್ಕೆ ಕಳಂಕ ತರಲು ವಿದೇಶಿ ಮಣ್ಣನ್ನು ಬಳಸುವ ರಾಹುಲ್ ಗಾಂಧಿಯಂಥವರಿಂದ ಬೇರೆ ಏನನ್ನೂ ನಿರೀಕ್ಷಿಸಲು ಸಾಧ್ಯವಿಲ್ಲ. ಭಾರತೀಯರು ತಮ್ಮ ಇತಿಹಾಸದ ಬಗ್ಗೆ ಬಹಳ ಹೆಮ್ಮೆಪಡುತ್ತಾರೆ ಮತ್ತು ತಮ್ಮ ಭೌಗೋಳಿಕತೆಯನ್ನು ಚೆನ್ನಾಗಿ ರಕ್ಷಿಸಿಕೊಳ್ಳುತ್ತಾರೆ ಎಂದು ಸಚಿವ ಪ್ರಲ್ಹಾದ್ ಜೋಶಿ ಹೆಮ್ಮೆಪಟ್ಟಿದ್ದಾರೆ.

ಏನೂ ಅರಿಯದೇ ಇದ್ದಕ್ಕಿದ್ದಂತೆ ಎಲ್ಲದರಲ್ಲೂ ಪರಿಣಿತನಾಗಿರುವಂತೆ ರಾಹುಲ್ ಗಾಂಧಿ ವರ್ತಿಸುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಟಾಂಗ್ ನೀಡಿದ್ದಾರೆ. ರಾಹುಲ್ ಹೇಳಿಕೆ ಹಿನ್ನೆಲೆಯಲ್ಲಿ ಪ್ರಲ್ಹಾದ ಜೋಶಿಯವರು ತಿರುಗೇಟು ನೀಡಿರುವ ಈ ಟ್ವೀಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ರಾಜ್ಯ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​​ ಮಾಡಿ

Published On - 5:22 pm, Thu, 1 June 23

Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!