AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶಿ ಮಣ್ಣಲ್ಲಿ ನಿಂತು ದೇಶಕ್ಕೆ ಕಪ್ಪು ಮಸಿ ಬಳಿಯುವ ರಾಹುಲ್ ಒಬ್ಬ ಫೇಕ್ ಗಾಂಧಿ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

Fake Gandhi: ಏನೂ ಅರಿಯದೇ ಇದ್ದಕ್ಕಿದ್ದಂತೆ ಎಲ್ಲದರಲ್ಲೂ ಪರಿಣಿತನಾಗಿರುವಂತೆ ರಾಹುಲ್ ಗಾಂಧಿ ವರ್ತಿಸುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಟಾಂಗ್ ನೀಡಿದ್ದಾರೆ.

ವಿದೇಶಿ ಮಣ್ಣಲ್ಲಿ ನಿಂತು ದೇಶಕ್ಕೆ ಕಪ್ಪು ಮಸಿ ಬಳಿಯುವ ರಾಹುಲ್ ಒಬ್ಬ ಫೇಕ್ ಗಾಂಧಿ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ
ವಿದೇಶಿ ಮಣ್ಣಲ್ಲಿ ನಿಂತು ದೇಶಕ್ಕೆ ಕಪ್ಪು ಮಸಿ ಬಳಿಯುವ ರಾಹುಲ್ ಒಬ್ಬ ಫೇಕ್ ಗಾಂಧಿ
ಸಾಧು ಶ್ರೀನಾಥ್​
|

Updated on:Jun 01, 2023 | 5:25 PM

Share

ಗಾಂಧಿ ಹೆಸರಿನ ನೆರಳಲ್ಲೇ ರಾಜಕೀಯ ಮಾಡುವ ರಾಹುಲ್, ಒಬ್ಬ ಫೇಕ್ ಗಾಂಧಿ ( Mr. Fake Gandhi) ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ವಾಗ್ದಾಳಿ ನಡೆಸಿದ್ದಾರೆ. ಅಮೆರಿಕಾದ ಕ್ಯಾಲಿಫೋರ್ನಿಯಾ ಯೂನಿವರ್ಸಿಟಿಯಲ್ಲಿ (Foreign Trip) ಭಾಷಣ ಮಾಡಿದ್ದ ರಾಹುಲ್ ಗಾಂಧಿ (Rahul Gandhi) ಭಾರತ ದೇಶದ ಒಂದು ವರ್ಗ ತನಗೆ ಎಲ್ಲವೂ ಗೊತ್ತು ಎಂದು ತಿಳಿದಿದೆ, ದೇವರಿಗೂ ಹೇಳಿಕೊಡುವಷ್ಟು ತಮಗೆ ಗೊತ್ತಿದೆ ಎಂದು‌ ಭಾವಿಸಿದೆ. ಭಾರತ ದೇಶದ ಪ್ರಧಾನ ಮಂತ್ರಿಯೂ ಆ ಸಾಲಿಗೆ ಸೇರುತ್ತಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಎದುರಿಗೆ ದೇವರು ಬಂದರೆ ಆಗ ಮೋದಿಯವರು ದೇವರಿಗೇ ಈ ಸೃಷ್ಟಿಯ ಬಗ್ಗೆ ವಿವರಿಸುವಂತಹವರು ಎಂದು ವ್ಯಂಗ್ಯವಾಡಿದ್ದ ರಾಹುಲ್ ಗಾಂಧಿ ಈ ಭಾಷಣದಲ್ಲಿ ಪದೇ ಪದೇ ಭಾರತದ ದೇಶದ ಒಂದು ವರ್ಗ ಎಂದು ಮೂದಲಿಸಿ ಮಾತನಾಡಿದ್ದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು (Pralhad Joshi) ಟ್ಚಿಟ್ಟರ್ ಮೂಲಕ ತಿರುಗೇಟು ನೀಡಿದ್ದಾರೆ.

“ಮಿಸ್ಟರ್ ಫೇಕ್ ಗಾಂಧಿಗೆ ಭಾರತದ ತಿರುಳು, ಅದರ ಸಂಸ್ಕೃತಿ ಗೊತ್ತಿಲ್ಲ, ದೇಶಕ್ಕೆ ಕಳಂಕ ತರಲು ವಿದೇಶಿ ಮಣ್ಣನ್ನು ಬಳಸುವ ರಾಹುಲ್ ಗಾಂಧಿಯಂಥವರಿಂದ ಬೇರೆ ಏನನ್ನೂ ನಿರೀಕ್ಷಿಸಲು ಸಾಧ್ಯವಿಲ್ಲ. ಭಾರತೀಯರು ತಮ್ಮ ಇತಿಹಾಸದ ಬಗ್ಗೆ ಬಹಳ ಹೆಮ್ಮೆಪಡುತ್ತಾರೆ ಮತ್ತು ತಮ್ಮ ಭೌಗೋಳಿಕತೆಯನ್ನು ಚೆನ್ನಾಗಿ ರಕ್ಷಿಸಿಕೊಳ್ಳುತ್ತಾರೆ ಎಂದು ಸಚಿವ ಪ್ರಲ್ಹಾದ್ ಜೋಶಿ ಹೆಮ್ಮೆಪಟ್ಟಿದ್ದಾರೆ.

ಏನೂ ಅರಿಯದೇ ಇದ್ದಕ್ಕಿದ್ದಂತೆ ಎಲ್ಲದರಲ್ಲೂ ಪರಿಣಿತನಾಗಿರುವಂತೆ ರಾಹುಲ್ ಗಾಂಧಿ ವರ್ತಿಸುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಟಾಂಗ್ ನೀಡಿದ್ದಾರೆ. ರಾಹುಲ್ ಹೇಳಿಕೆ ಹಿನ್ನೆಲೆಯಲ್ಲಿ ಪ್ರಲ್ಹಾದ ಜೋಶಿಯವರು ತಿರುಗೇಟು ನೀಡಿರುವ ಈ ಟ್ವೀಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ರಾಜ್ಯ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​​ ಮಾಡಿ

Published On - 5:22 pm, Thu, 1 June 23

ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್