AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶಿ ಮಣ್ಣಲ್ಲಿ ನಿಂತು ದೇಶಕ್ಕೆ ಕಪ್ಪು ಮಸಿ ಬಳಿಯುವ ರಾಹುಲ್ ಒಬ್ಬ ಫೇಕ್ ಗಾಂಧಿ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

Fake Gandhi: ಏನೂ ಅರಿಯದೇ ಇದ್ದಕ್ಕಿದ್ದಂತೆ ಎಲ್ಲದರಲ್ಲೂ ಪರಿಣಿತನಾಗಿರುವಂತೆ ರಾಹುಲ್ ಗಾಂಧಿ ವರ್ತಿಸುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಟಾಂಗ್ ನೀಡಿದ್ದಾರೆ.

ವಿದೇಶಿ ಮಣ್ಣಲ್ಲಿ ನಿಂತು ದೇಶಕ್ಕೆ ಕಪ್ಪು ಮಸಿ ಬಳಿಯುವ ರಾಹುಲ್ ಒಬ್ಬ ಫೇಕ್ ಗಾಂಧಿ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ
ವಿದೇಶಿ ಮಣ್ಣಲ್ಲಿ ನಿಂತು ದೇಶಕ್ಕೆ ಕಪ್ಪು ಮಸಿ ಬಳಿಯುವ ರಾಹುಲ್ ಒಬ್ಬ ಫೇಕ್ ಗಾಂಧಿ
ಸಾಧು ಶ್ರೀನಾಥ್​
|

Updated on:Jun 01, 2023 | 5:25 PM

Share

ಗಾಂಧಿ ಹೆಸರಿನ ನೆರಳಲ್ಲೇ ರಾಜಕೀಯ ಮಾಡುವ ರಾಹುಲ್, ಒಬ್ಬ ಫೇಕ್ ಗಾಂಧಿ ( Mr. Fake Gandhi) ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ವಾಗ್ದಾಳಿ ನಡೆಸಿದ್ದಾರೆ. ಅಮೆರಿಕಾದ ಕ್ಯಾಲಿಫೋರ್ನಿಯಾ ಯೂನಿವರ್ಸಿಟಿಯಲ್ಲಿ (Foreign Trip) ಭಾಷಣ ಮಾಡಿದ್ದ ರಾಹುಲ್ ಗಾಂಧಿ (Rahul Gandhi) ಭಾರತ ದೇಶದ ಒಂದು ವರ್ಗ ತನಗೆ ಎಲ್ಲವೂ ಗೊತ್ತು ಎಂದು ತಿಳಿದಿದೆ, ದೇವರಿಗೂ ಹೇಳಿಕೊಡುವಷ್ಟು ತಮಗೆ ಗೊತ್ತಿದೆ ಎಂದು‌ ಭಾವಿಸಿದೆ. ಭಾರತ ದೇಶದ ಪ್ರಧಾನ ಮಂತ್ರಿಯೂ ಆ ಸಾಲಿಗೆ ಸೇರುತ್ತಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಎದುರಿಗೆ ದೇವರು ಬಂದರೆ ಆಗ ಮೋದಿಯವರು ದೇವರಿಗೇ ಈ ಸೃಷ್ಟಿಯ ಬಗ್ಗೆ ವಿವರಿಸುವಂತಹವರು ಎಂದು ವ್ಯಂಗ್ಯವಾಡಿದ್ದ ರಾಹುಲ್ ಗಾಂಧಿ ಈ ಭಾಷಣದಲ್ಲಿ ಪದೇ ಪದೇ ಭಾರತದ ದೇಶದ ಒಂದು ವರ್ಗ ಎಂದು ಮೂದಲಿಸಿ ಮಾತನಾಡಿದ್ದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು (Pralhad Joshi) ಟ್ಚಿಟ್ಟರ್ ಮೂಲಕ ತಿರುಗೇಟು ನೀಡಿದ್ದಾರೆ.

“ಮಿಸ್ಟರ್ ಫೇಕ್ ಗಾಂಧಿಗೆ ಭಾರತದ ತಿರುಳು, ಅದರ ಸಂಸ್ಕೃತಿ ಗೊತ್ತಿಲ್ಲ, ದೇಶಕ್ಕೆ ಕಳಂಕ ತರಲು ವಿದೇಶಿ ಮಣ್ಣನ್ನು ಬಳಸುವ ರಾಹುಲ್ ಗಾಂಧಿಯಂಥವರಿಂದ ಬೇರೆ ಏನನ್ನೂ ನಿರೀಕ್ಷಿಸಲು ಸಾಧ್ಯವಿಲ್ಲ. ಭಾರತೀಯರು ತಮ್ಮ ಇತಿಹಾಸದ ಬಗ್ಗೆ ಬಹಳ ಹೆಮ್ಮೆಪಡುತ್ತಾರೆ ಮತ್ತು ತಮ್ಮ ಭೌಗೋಳಿಕತೆಯನ್ನು ಚೆನ್ನಾಗಿ ರಕ್ಷಿಸಿಕೊಳ್ಳುತ್ತಾರೆ ಎಂದು ಸಚಿವ ಪ್ರಲ್ಹಾದ್ ಜೋಶಿ ಹೆಮ್ಮೆಪಟ್ಟಿದ್ದಾರೆ.

ಏನೂ ಅರಿಯದೇ ಇದ್ದಕ್ಕಿದ್ದಂತೆ ಎಲ್ಲದರಲ್ಲೂ ಪರಿಣಿತನಾಗಿರುವಂತೆ ರಾಹುಲ್ ಗಾಂಧಿ ವರ್ತಿಸುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಟಾಂಗ್ ನೀಡಿದ್ದಾರೆ. ರಾಹುಲ್ ಹೇಳಿಕೆ ಹಿನ್ನೆಲೆಯಲ್ಲಿ ಪ್ರಲ್ಹಾದ ಜೋಶಿಯವರು ತಿರುಗೇಟು ನೀಡಿರುವ ಈ ಟ್ವೀಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ರಾಜ್ಯ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​​ ಮಾಡಿ

Published On - 5:22 pm, Thu, 1 June 23

ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಇವತ್ತು ರಾಯರ ದರ್ಶನ ಮಾಡುವ ಭಕ್ತರಿಗೆ ವಿಶೇಷ ಅನುಗ್ರಹ ಪ್ರಾಪ್ತಿ
ಇವತ್ತು ರಾಯರ ದರ್ಶನ ಮಾಡುವ ಭಕ್ತರಿಗೆ ವಿಶೇಷ ಅನುಗ್ರಹ ಪ್ರಾಪ್ತಿ
ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದ ಪೊಲೀಸರು
ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದ ಪೊಲೀಸರು