AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶಿ ಮಣ್ಣಲ್ಲಿ ನಿಂತು ದೇಶಕ್ಕೆ ಕಪ್ಪು ಮಸಿ ಬಳಿಯುವ ರಾಹುಲ್ ಒಬ್ಬ ಫೇಕ್ ಗಾಂಧಿ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

Fake Gandhi: ಏನೂ ಅರಿಯದೇ ಇದ್ದಕ್ಕಿದ್ದಂತೆ ಎಲ್ಲದರಲ್ಲೂ ಪರಿಣಿತನಾಗಿರುವಂತೆ ರಾಹುಲ್ ಗಾಂಧಿ ವರ್ತಿಸುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಟಾಂಗ್ ನೀಡಿದ್ದಾರೆ.

ವಿದೇಶಿ ಮಣ್ಣಲ್ಲಿ ನಿಂತು ದೇಶಕ್ಕೆ ಕಪ್ಪು ಮಸಿ ಬಳಿಯುವ ರಾಹುಲ್ ಒಬ್ಬ ಫೇಕ್ ಗಾಂಧಿ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ
ವಿದೇಶಿ ಮಣ್ಣಲ್ಲಿ ನಿಂತು ದೇಶಕ್ಕೆ ಕಪ್ಪು ಮಸಿ ಬಳಿಯುವ ರಾಹುಲ್ ಒಬ್ಬ ಫೇಕ್ ಗಾಂಧಿ
ಸಾಧು ಶ್ರೀನಾಥ್​
|

Updated on:Jun 01, 2023 | 5:25 PM

Share

ಗಾಂಧಿ ಹೆಸರಿನ ನೆರಳಲ್ಲೇ ರಾಜಕೀಯ ಮಾಡುವ ರಾಹುಲ್, ಒಬ್ಬ ಫೇಕ್ ಗಾಂಧಿ ( Mr. Fake Gandhi) ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ವಾಗ್ದಾಳಿ ನಡೆಸಿದ್ದಾರೆ. ಅಮೆರಿಕಾದ ಕ್ಯಾಲಿಫೋರ್ನಿಯಾ ಯೂನಿವರ್ಸಿಟಿಯಲ್ಲಿ (Foreign Trip) ಭಾಷಣ ಮಾಡಿದ್ದ ರಾಹುಲ್ ಗಾಂಧಿ (Rahul Gandhi) ಭಾರತ ದೇಶದ ಒಂದು ವರ್ಗ ತನಗೆ ಎಲ್ಲವೂ ಗೊತ್ತು ಎಂದು ತಿಳಿದಿದೆ, ದೇವರಿಗೂ ಹೇಳಿಕೊಡುವಷ್ಟು ತಮಗೆ ಗೊತ್ತಿದೆ ಎಂದು‌ ಭಾವಿಸಿದೆ. ಭಾರತ ದೇಶದ ಪ್ರಧಾನ ಮಂತ್ರಿಯೂ ಆ ಸಾಲಿಗೆ ಸೇರುತ್ತಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಎದುರಿಗೆ ದೇವರು ಬಂದರೆ ಆಗ ಮೋದಿಯವರು ದೇವರಿಗೇ ಈ ಸೃಷ್ಟಿಯ ಬಗ್ಗೆ ವಿವರಿಸುವಂತಹವರು ಎಂದು ವ್ಯಂಗ್ಯವಾಡಿದ್ದ ರಾಹುಲ್ ಗಾಂಧಿ ಈ ಭಾಷಣದಲ್ಲಿ ಪದೇ ಪದೇ ಭಾರತದ ದೇಶದ ಒಂದು ವರ್ಗ ಎಂದು ಮೂದಲಿಸಿ ಮಾತನಾಡಿದ್ದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು (Pralhad Joshi) ಟ್ಚಿಟ್ಟರ್ ಮೂಲಕ ತಿರುಗೇಟು ನೀಡಿದ್ದಾರೆ.

“ಮಿಸ್ಟರ್ ಫೇಕ್ ಗಾಂಧಿಗೆ ಭಾರತದ ತಿರುಳು, ಅದರ ಸಂಸ್ಕೃತಿ ಗೊತ್ತಿಲ್ಲ, ದೇಶಕ್ಕೆ ಕಳಂಕ ತರಲು ವಿದೇಶಿ ಮಣ್ಣನ್ನು ಬಳಸುವ ರಾಹುಲ್ ಗಾಂಧಿಯಂಥವರಿಂದ ಬೇರೆ ಏನನ್ನೂ ನಿರೀಕ್ಷಿಸಲು ಸಾಧ್ಯವಿಲ್ಲ. ಭಾರತೀಯರು ತಮ್ಮ ಇತಿಹಾಸದ ಬಗ್ಗೆ ಬಹಳ ಹೆಮ್ಮೆಪಡುತ್ತಾರೆ ಮತ್ತು ತಮ್ಮ ಭೌಗೋಳಿಕತೆಯನ್ನು ಚೆನ್ನಾಗಿ ರಕ್ಷಿಸಿಕೊಳ್ಳುತ್ತಾರೆ ಎಂದು ಸಚಿವ ಪ್ರಲ್ಹಾದ್ ಜೋಶಿ ಹೆಮ್ಮೆಪಟ್ಟಿದ್ದಾರೆ.

ಏನೂ ಅರಿಯದೇ ಇದ್ದಕ್ಕಿದ್ದಂತೆ ಎಲ್ಲದರಲ್ಲೂ ಪರಿಣಿತನಾಗಿರುವಂತೆ ರಾಹುಲ್ ಗಾಂಧಿ ವರ್ತಿಸುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಟಾಂಗ್ ನೀಡಿದ್ದಾರೆ. ರಾಹುಲ್ ಹೇಳಿಕೆ ಹಿನ್ನೆಲೆಯಲ್ಲಿ ಪ್ರಲ್ಹಾದ ಜೋಶಿಯವರು ತಿರುಗೇಟು ನೀಡಿರುವ ಈ ಟ್ವೀಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ರಾಜ್ಯ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​​ ಮಾಡಿ

Published On - 5:22 pm, Thu, 1 June 23

ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌
ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ತಾನು ಕಲಿತ ಶಾಲೆಗೆ ಹೋಗಿ ವಿದ್ಯಾರ್ಥಿಗಳೊಟ್ಟಿಗೆ ಬೆರೆತ ಗಿಲ್ಲಿ: ವಿಡಿಯೋ
ತಾನು ಕಲಿತ ಶಾಲೆಗೆ ಹೋಗಿ ವಿದ್ಯಾರ್ಥಿಗಳೊಟ್ಟಿಗೆ ಬೆರೆತ ಗಿಲ್ಲಿ: ವಿಡಿಯೋ
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್
ಕುಮಾರ ಷಷ್ಠಿ ಆಚರಣೆಯ ವಿಧಾನ ಹಾಗೂ ಮಹತ್ವ
ಕುಮಾರ ಷಷ್ಠಿ ಆಚರಣೆಯ ವಿಧಾನ ಹಾಗೂ ಮಹತ್ವ